ಪೊಲೀಸರ ವಾಟ್ಸ್ಆ್ಯಪ್, ಮೊಬೈಲ್ ಹ್ಯಾಕ್: ಬೆಂಗಳೂರಿನ ಪೊಲೀಸರನ್ನೂ ಬಿಡದ ಸೈಬರ್ ವಂಚಕರು!

ಬೆಂಗಳೂರು :- ಎಪಿಕೆ ಫೈಲ್ಗಳನ್ನು ಕಳುಹಿಸಿ ವಾಟ್ಸ್ಆ್ಯಪ್, ಮೊಬೈಲ್ ನಂಬರ್ ಹ್ಯಾಕ್ ಮಾಡುವ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗಿದ್ದು, ಇದೀಗ ಬೆಂಗಳೂರು ಪೊಲೀಸರಿಗೂ ಅದರ ಬಿಸಿ ತಟ್ಟಿದೆ. ಬೆಂಗಳೂರಿನ ಹಲವು ಪೊಲೀಸ್ ಇನ್ಸ್ಪೆಕ್ಟರ್ಗಳ ಮೊಬೈಲ್ ಫೋನ್ ಸಂಖ್ಯೆಗಳು ಮತ್ತು ವಾಟ್ಸ್ಆ್ಯಪ್ ಖಾತೆಗಳನ್ನು ಸೈಬರ್ ವಂಚಕರು ಬುಧವಾರ ಎಪಿಕೆ ಫೈಲ್ ಲಿಂಕ್ ಕಳುಹಿಸಿ ಹ್ಯಾಕ್ ಮಾಡಿರುವುದು ಮೂಲಗಳಿಂದ ತಿಳಿದುಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು, ಇನ್ಸ್ಪೆಕ್ಟರ್ಗಳು ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿ ಅಪರಿಚಿತ ಸಂಖ್ಯೆಯ ರಿಸೀವರ್ಗಳು ವಾಟ್ಸ್ಆ್ಯಪ್ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಲಿಂಕ್ ಅನ್ನು ದುರುದ್ದೇಶಪೂರಿತವೆಂದು ತಿಳಿಯದೆ ಕ್ಲಿಕ್ ಮಾಡಿದ್ದಾರೆ ಎನ್ನಲಾಗಿದೆ.

ವಂಚಕರು ಆಡುಗೋಡಿ ಟ್ರಾಫಿಕ್ ಮತ್ತು ಜ್ಞಾನಭಾರತಿ, ಗಿರಿನಗರ ಮತ್ತು ಬಸವನಗುಡಿ ಠಾಣೆ ಸೇರಿದಂತೆ ಕೆಲವು ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್ಗಳ ಅಧಿಕೃತ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿದ್ದಾರೆ. ಅವರ ಸಹೋದ್ಯೋಗಿಗಳು, ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮತ್ತು ಗುಂಪುಗಳಿಗೆ ಎಪಿಕೆ ಫೈಲ್ ಲಿಂಕ್ಗಳನ್ನು ಕಳುಹಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಲಿಂಕ್ ಡೌನ್ಲೋಡ್ ಮಾಡಿದ ನಂತರ ಹಣವನ್ನು ಕಳೆದುಕೊಂಡ ಬಗ್ಗೆ ಯಾವುದೇ ದೂರು ಅಥವಾ ಮಾಹಿತಿ ಇನ್ನೂ ಬಂದಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ.
ಪೊಲೀಸ್ ಇನ್ಸ್ಪೆಕ್ಟರ್ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಸಂದೇಶವನ್ನು ಸ್ವೀಕರಿಸಿದ್ದೇನೆ. ಕುತೂಹಲದಿಂದ ಅದನ್ನು ಕ್ಲಿಕ್ ಮಾಡಿದ್ದೇನೆ. ಆ ಲಿಂಕ್ ಖಾಲಿಯಾಗಿತ್ತು. ನಂತರ, ಅವರ ಫೋನ್ ಮತ್ತು ವಾಟ್ಸ್ಆ್ಯಪ್ ಹ್ಯಾಕ್ ಆಗಿರುವುದು ನನಗೆ ತಿಳಿಯಿತು ಎಂದು ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಬಳಿಕ ಆ ಅಧಿಕಾರಿ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಪರಿಶೀಲಿಸಿ ಪಾಸ್ವರ್ಡ್ ಬದಲಾಯಿಸಿದ್ದರು.

ಬೆಳಗಾವಿಯಲ್ಲಿ ವಿಶೇಷ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಇನ್ಸ್ಪೆಕ್ಟರ್ ವಾಟ್ಸ್ಆ್ಯಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಅವರ ಎಲ್ಲಾ ಕಾಂಟ್ಯಾಕ್ಟ್ಗಳು ಮತ್ತು ಗುಂಪುಗಳಿಗೆ ಅವರ ಮೊಬೈಲ್ ಸಂಖ್ಯೆಯನ್ನು ಬಳಸಿ ಸಂದೇಶವನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!