ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು..!!!

ದೇಶದ ಅತ್ಯಂತ ಮೇಧಾವಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಎರಡು ಬಾರಿ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಯೋಜನೆಗಳು ಇಂದಿಗೂ ಮುಂದುವರೆದಿವೆ. ತಮ್ಮ ಆಡಳಿತಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಮನಮೋಹನ್ ಸಿಂಗ್ ತಂದಿದ್ದಾರೆ.
ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿಯೂ ದೇಶದಲ್ಲಿ ಅರ್ಥಕ್ರಾಂತಿಯನ್ನೇ ಸೃಷ್ಟಿಸಿದ್ದರು. ದಿವಾಳಿಯಂಚಿನಲ್ಲಿದ್ದ ದೇಶವನ್ನು ಜಗ್ಗತ್ತಿನಲ್ಲಿ ಎರಡನೇ ಅಭಿವೃದ್ಧಿ ಹೊಂದಿತ್ತಿರುವ ರಾಷ್ಟ್ರವನ್ನಾಗಿಸಿದ ಕೀರ್ತಿ ಮನಮೋಹನ್ ಸಿಂಗ್ಗೆ ಸಲ್ಲುತ್ತದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು.

ದೇಶದ ರೂಪಾಯಿಗೆ ಸಹಿ ಹಾಕುವ ಹಕ್ಕು ಕೇವಲ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ಗೆ ಮಾತ್ರ ಇರುತ್ತದೆ. ಭಾರತದಲ್ಲಿ ಪ್ರಚಲಿತದಲ್ಲಿರುವ ಪ್ರತಿಯೊಂದು ನೋಟುಗಳ ಮೇಲೆ ರಿಸರ್ವ್ ಬ್ಯಾಂಕ್ ಗವರ್ನರ್ ಅವರ ಸಹಿ ಇದೆ. ಹಾಗಿದ್ದರೆ.

ಮನಮೋಹನ್ ಸಿಂಗ್ ಪ್ರಧಾನಿ, ಹಣಕಾಸು ಸಚಿವರಾಗುವ ಮುನ್ನ ಮನಮೋಹನ್ ಸಿಂಗ್ ಅವರು ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅಂದರೆ 1982ರಲ್ಲಿ ಆರ್ಬಿಐ ಗವರ್ನರ್ ಹುದ್ದೆಗೇರಿದರು. 1982 ರಿಂದ 1985ರವರೆಗೆ ಮನಹೋನ್ ಸಿಂಗ್ ಆರ್ಬಿಐ ಗವರ್ನರ್ ಆಗಿದ್ದರು. ಈ ಕಾಲಾವಧಿಯಲ್ಲಿ ಮುದ್ರಿತವಾದ ನೋಟುಗಳ ಮೇಲೆ ಮನಹೋನ್ ಸಿಂಗ್ ಸಹಿ ಇದೆ.
ಮನಮೋಹನ್ ಸಿಂಗ್ ಪಂಜಾಬ್ ವಿವಿಗೆ ಪ್ರವೇಶ ಪಡೆದು, 1952 ಮತ್ತು 1954ರಲ್ಲಿ ಕ್ರಮವಾಗಿ ಅರ್ಥಶಾಸ್ತ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದುಕೊಂಡರು. ಬಳಿಕ ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್ಗೆ ತೆರಳಿ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವಿ ಪಡೆದರು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಡಿಫಿಲ್ (ಡಾಕ್ಟರ್ ಆಫ್ ಫಿಲಾಸಫಿ)ಯನ್ನು ಪೂರೈಸಿದರು.

ಮನಮೋಹನ್ ಸಿಂಗ್ 1990 ರಿಂದ 1991 ರವರೆಗೆ ಪ್ರಧಾನ ಮಂತ್ರಿಗಳ ಹಣಕಾಸು ಸಲಹೆಗಾರರಾಗಿದ್ದರು. 1991ರಲ್ಲಿ ಹಣಕಾಸು ಸಚಿವರಾಗುವವರೆಗೆ ಯುಜಿಸಿಗೆ ಮೂರು ತಿಂಗಳ ಕಾಲ ಅಧ್ಯಕ್ಷರಾಗಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!