ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಬಿಗಿ ಭದ್ರತೆ, 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ.

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂವರು ವಿದೇಶಿ ಡ್ರಗ್ ಪೆಡ್ಲರ್‌ಗಳು ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ ಮತ್ತು ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ರಾತ್ರಿ 1 ಗಂಟೆ ಒಳಗಾಗಿ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಪಬ್‌ಗಳು ಮುಚ್ಚಬೇಕು ಎಂದು ಸೂಚಿಸಲಾಗಿದೆ. ನಗರದ ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಪೊಲೀಸ್​ ಆಯುಕ್ತ ಬಿ. ದಯಾನಂದ್​ ತಿಳಿಸಿದರು.
ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​​ ಸೇರಿದಂತೆ, ವಿವಿಧ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಕಮಿಷನರ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್​ಗಳನ್ನು ಹೊಸ ವರ್ಷಾಚರಣೆ ದಿನ (ಡಿಸೆಂಬರ್​.31) ರಂದು ರಾತ್ರಿ 1 ಗಂಟೆಯ ಒಳಗಾಗಿ ಬಂದ್​​ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಂದು, ನಶೆಯಲ್ಲಿ ಮೇಲ್ಸೇತುವೆಗಳ ಮೇಲೆ ರಂಪಾಟ ಮಾಡುವ, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೇಲ್ಸೇತುವೆ ಸೇರಿದಂತೆ ನಗರದ ಎಲ್ಲ ಮೇಲ್ಸೇತುವೆಗಳನ್ನು ಬಂದ್​ ಮಾಡಲಾಗುತ್ತದೆ. ಬೆಂಗಳೂರು ಹೊರ ವಲಯದಲ್ಲಿ ನಡೆಯುವ ರೇವ್ ಪಾರ್ಟಿ ಸೇರಿದಂತೆ ಎಲ್ಲ ಪಾರ್ಟಿಗಳ ಮೇಲೆ ಕಣ್ಣಿಡಲಾಗಿದೆ. ಇನ್ನು, ನಗರದಲ್ಲಿ ಎಂಜಿ ರೋಡ್, ಬ್ರಿಗೆಡ್ ರೋಡ್, ಕೋರಮಂಗಲ, ಇಂದಿರಾನಗರ ಸೇರಿ ಎಲ್ಲಿ ಹೆಚ್ಚು ಜನರು ಸೇರುತ್ತಾರೆ ಅಲ್ಲಿ ಸೇಫ್ಟಿ ಐಲ್ಯಾಂಡ್, ಸಿಸಿಟಿವಿ, ಡ್ರೋಣ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಶ್ವಾನದಳದಿಂದ ತಪಾಸಣೆ ಮಾಡಲಾಗುತ್ತೆ. ಹೆಚ್ಚಿನ ಲೈಟಿಂಗ್ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ, ಅಗ್ನಿಶಾಮಕ ದಳ ವಾಹನ ಇರುತ್ತದೆ ಎಂದು ತಿಳಿಸಿದರು.
ಬ್ರಿಗೆಡ್, ಎಂಜಿ ರೋಡ್​​ನಲ್ಲಿ ಏಕಮುಖ ಸಂಚಾರವಿರುತ್ತದೆ. ಡಿಸೆಂಬರ್​ 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಿದರು. ಬೆಂಗಳೂರು ಸೈಬರ್ ವಂಚನೆಗೆ ಒಳಗಾಗಿದ್ದರೆ ಟೋಲ್ ಫ್ರೀ ನಂಬರ್ 1930ಗೆ ಕರೆ ಮಾಡಿ ಮಾಹಿತಿ ನೀಡಿ. ಅದನ್ನ ಹೊರತುಪಡಿಸಿ ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ನಂಬರ್​​ಗೆ ಕರೆ ಮಾಡಬೇಡಿ. ಏಕೆಂದರೆ, ಅಧಿಕಾರಿಗಳು ಬೇರೆ ಕೆಲಸದಲ್ಲಿ ನಿರತರಾಗಿದ್ದರೆ ಕೂಡಲೇ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, 1930 ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು