ಒಂದೇ ಕುಟುಂಬದ ನಾಲ್ವರು ಆತ್ಮಹ* ; ತಿರುವಣ್ಣಾಮಲೈಯ ಬಾಡಿಗೆಗಿದ್ದ ಫಾರ್ಮ್ಹೌಸ್ನಲ್ಲಿ ಘಟನೆ.

ತಮಿಳುನಾಡು : ತಿರುವಣ್ಣಾಮಲೈ ಗಿರಿವಾಲಂ ಪಾಥ್ನಲ್ಲಿರುವ ತೋಟದ ಮನೆಯಲ್ಲಿ ಬಾಡಿಗೆಗೆ ತಂಗಿದ್ದ ಚೆನ್ನೈ ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ತಿರುವಣ್ಣಾಮಲೈ ಗಿರಿವಾಲಂ ಪಾಥ್ನಲ್ಲಿ ಅನೇಕ ವಸತಿ ನಿಲಯಗಳು, ಅಪಾರ್ಟ್ಮೆಂಟ್ಗಳು ಹಾಗೂ ಫಾರ್ಮ್ಹೌಸ್ಗಳಿವೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಅಣ್ಣಾಮಲೈ ದೇವರ ದರ್ಶನಕ್ಕೆ ಬರುವ ಭಕ್ತರು ಇಲ್ಲಿ ತೋಟದ ಮನೆಗಳನ್ನು ಬಾಡಿಗೆ ಪಡೆಯುವುದು ಸಾಮಾನ್ಯ. ಹೀಗೆ ಡಿ.26ರಂದು ಚೆನ್ನೈನ ವ್ಯಾಸರಪಾಡಿಯ ಈ ನಾಲ್ವರು ಆನ್ಲೈನ್ ಮೂಲಕ ಗಿರಿವಾಲಂ ಪಾಥ್ನಲ್ಲಿರುವ ಫಾರ್ಮ್ ಹೌಸ್ ಬುಕ್ ಮಾಡಿದ್ದು, ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ತೋಟದ ಮನೆಗೆ ಚೆಕ್ಇನ್ ಆಗಿದ್ದರು.

ಶನಿವಾರ ಬೆಳಗ್ಗೆ ಫಾರ್ಮ್ಹೌಸ್ ಸಿಬ್ಬಂದಿ ಅವರು ತಂಗಿದ್ದ ಕೊಠಡಿಯ ಬಾಗಿಲು ತಟ್ಟಿದ್ದು, ಎಷ್ಟೋ ಸಮಯವಾದರೂ ಬಾಗಿಲು ತೆರೆದಿರಲಿಲ್ಲ. ಎಷ್ಟೋ ಹೊತ್ತು ಬಡಿದರೂ ಬಾಗಿಲು ತೆರೆಯದ ಕಾರಣ ಬುಕ್ಕಿಂಗ್ ವೇಳೆ ನೀಡಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದರು. ಫೋನ್ ರಿಂಗಾಗುತ್ತಲೇ ಇತ್ತು. ಆದರೆ ಯಾರೂ ಕರೆ ಸ್ವೀಕರಿಸಲಿಲ್ಲ. ಬಳಿಕ ಕೊಠಡಿಯ ಕಿಟಕಿಯಿಂದ ನೋಡಿದಾಗ ನಾಲ್ವರು ಪ್ರಜ್ಞೆಹೀನ ಸ್ಥಿತಿಯಲ್ಲಿ ಮಲಗಿರುವ ಹಾಗೆ ಬಂದಿತ್ತು. ಇದರಿಂದ ಗಾಬರಿಗೊಂಡ ಫಾರ್ಮ್ ಹೌಸ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ನೀಡುತ್ತಿದ್ದಂತೆ ತಿರುವಣ್ಣಾಮಲೈ ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅವರು ತಂಗಿದ್ದ ಕೊಠಡಿಯ ಬೀಗ ಒಡೆದು ಒಳಗೆ ಹೋಗಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್, “ಕೊಠಡಿಯ ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ನಾಲ್ವರೂ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ರುಕ್ಮಿಣಿ ಪ್ರಿಯಾ (45), ಮಹಾಕಾಳ ವ್ಯಾಸ (55), ಮುಕುಂದ್ ಆಕಾಶ್ ಕುಮಾರ್ (17) ಮತ್ತು ಜಲಂಧರಿ (20) ಎಂದು ಗುರುತಿಸಲಾಗಿದೆ. ನಾಲ್ವರೂ ಶಿವಗಂಗೈ ಜಿಲ್ಲೆಯವರಾಗಿದ್ದು, ಚೆನ್ನೈನಲ್ಲಿ ನೆಲೆಸಿದ್ದಾರೆ. ಚೆನ್ನೈನಿಂದ ತಿರುವಣ್ಣಾಮಲೈಗೆ ಬಂದಿದ್ದರು. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದ್ದೇವೆ” ಎಂದು ತಿಳಿಸಿದರು.
“ಅವರು ತಂಗಿದ್ದ ಕೊಠಡಿಯಲ್ಲಿ ಡೆತ್ ನೋಟ್ ಹಾಗೂ ವಿಡಿಯೋ ದೊರೆತಿದೆ. ಅದರಲ್ಲಿರುವ ಮಾಹಿತಿ ಪ್ರಕಾರ ತಿರುವಣ್ಣಾಮಲೈನಲ್ಲಿ ಸಾವನ್ನಪ್ಪಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆಯಿಂದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಅವರ ಸಂಬಂಧಿಕರು ಹಾಗೂ ಸ್ನೇಹಿತರನ್ನು ಕೂಡ ಈ ಕುರಿತು ವಿಚಾರಣೆ ನಡೆಸಲಾಗುವುದು” ಎಂದು ಮಾಹಿತಿ ನೀಡಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!