ಒಂದೇ ಕುಟುಂಬದ ನಾಲ್ವರು ಆತ್ಮಹ* ; ತಿರುವಣ್ಣಾಮಲೈಯ ಬಾಡಿಗೆಗಿದ್ದ ಫಾರ್ಮ್ಹೌಸ್ನಲ್ಲಿ ಘಟನೆ.

ತಮಿಳುನಾಡು : ತಿರುವಣ್ಣಾಮಲೈ ಗಿರಿವಾಲಂ ಪಾಥ್ನಲ್ಲಿರುವ ತೋಟದ ಮನೆಯಲ್ಲಿ ಬಾಡಿಗೆಗೆ ತಂಗಿದ್ದ ಚೆನ್ನೈ ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ತಿರುವಣ್ಣಾಮಲೈ ಗಿರಿವಾಲಂ ಪಾಥ್ನಲ್ಲಿ ಅನೇಕ ವಸತಿ ನಿಲಯಗಳು, ಅಪಾರ್ಟ್ಮೆಂಟ್ಗಳು ಹಾಗೂ ಫಾರ್ಮ್ಹೌಸ್ಗಳಿವೆ. ಹೊರ ಜಿಲ್ಲೆ ಹಾಗೂ ರಾಜ್ಯಗಳಿಂದ ಅಣ್ಣಾಮಲೈ ದೇವರ ದರ್ಶನಕ್ಕೆ ಬರುವ ಭಕ್ತರು ಇಲ್ಲಿ ತೋಟದ ಮನೆಗಳನ್ನು ಬಾಡಿಗೆ ಪಡೆಯುವುದು ಸಾಮಾನ್ಯ. ಹೀಗೆ ಡಿ.26ರಂದು ಚೆನ್ನೈನ ವ್ಯಾಸರಪಾಡಿಯ ಈ ನಾಲ್ವರು ಆನ್ಲೈನ್ ಮೂಲಕ ಗಿರಿವಾಲಂ ಪಾಥ್ನಲ್ಲಿರುವ ಫಾರ್ಮ್ ಹೌಸ್ ಬುಕ್ ಮಾಡಿದ್ದು, ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ತೋಟದ ಮನೆಗೆ ಚೆಕ್ಇನ್ ಆಗಿದ್ದರು.

ಶನಿವಾರ ಬೆಳಗ್ಗೆ ಫಾರ್ಮ್ಹೌಸ್ ಸಿಬ್ಬಂದಿ ಅವರು ತಂಗಿದ್ದ ಕೊಠಡಿಯ ಬಾಗಿಲು ತಟ್ಟಿದ್ದು, ಎಷ್ಟೋ ಸಮಯವಾದರೂ ಬಾಗಿಲು ತೆರೆದಿರಲಿಲ್ಲ. ಎಷ್ಟೋ ಹೊತ್ತು ಬಡಿದರೂ ಬಾಗಿಲು ತೆರೆಯದ ಕಾರಣ ಬುಕ್ಕಿಂಗ್ ವೇಳೆ ನೀಡಿದ್ದ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿದ್ದರು. ಫೋನ್ ರಿಂಗಾಗುತ್ತಲೇ ಇತ್ತು. ಆದರೆ ಯಾರೂ ಕರೆ ಸ್ವೀಕರಿಸಲಿಲ್ಲ. ಬಳಿಕ ಕೊಠಡಿಯ ಕಿಟಕಿಯಿಂದ ನೋಡಿದಾಗ ನಾಲ್ವರು ಪ್ರಜ್ಞೆಹೀನ ಸ್ಥಿತಿಯಲ್ಲಿ ಮಲಗಿರುವ ಹಾಗೆ ಬಂದಿತ್ತು. ಇದರಿಂದ ಗಾಬರಿಗೊಂಡ ಫಾರ್ಮ್ ಹೌಸ್ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ನೀಡುತ್ತಿದ್ದಂತೆ ತಿರುವಣ್ಣಾಮಲೈ ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅವರು ತಂಗಿದ್ದ ಕೊಠಡಿಯ ಬೀಗ ಒಡೆದು ಒಳಗೆ ಹೋಗಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್, “ಕೊಠಡಿಯ ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ನಾಲ್ವರೂ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ರುಕ್ಮಿಣಿ ಪ್ರಿಯಾ (45), ಮಹಾಕಾಳ ವ್ಯಾಸ (55), ಮುಕುಂದ್ ಆಕಾಶ್ ಕುಮಾರ್ (17) ಮತ್ತು ಜಲಂಧರಿ (20) ಎಂದು ಗುರುತಿಸಲಾಗಿದೆ. ನಾಲ್ವರೂ ಶಿವಗಂಗೈ ಜಿಲ್ಲೆಯವರಾಗಿದ್ದು, ಚೆನ್ನೈನಲ್ಲಿ ನೆಲೆಸಿದ್ದಾರೆ. ಚೆನ್ನೈನಿಂದ ತಿರುವಣ್ಣಾಮಲೈಗೆ ಬಂದಿದ್ದರು. ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದ್ದೇವೆ” ಎಂದು ತಿಳಿಸಿದರು.
“ಅವರು ತಂಗಿದ್ದ ಕೊಠಡಿಯಲ್ಲಿ ಡೆತ್ ನೋಟ್ ಹಾಗೂ ವಿಡಿಯೋ ದೊರೆತಿದೆ. ಅದರಲ್ಲಿರುವ ಮಾಹಿತಿ ಪ್ರಕಾರ ತಿರುವಣ್ಣಾಮಲೈನಲ್ಲಿ ಸಾವನ್ನಪ್ಪಿದರೆ ಮೋಕ್ಷ ಸಿಗುತ್ತದೆ ಎಂಬ ನಂಬಿಕೆಯಿಂದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಅವರ ಸಂಬಂಧಿಕರು ಹಾಗೂ ಸ್ನೇಹಿತರನ್ನು ಕೂಡ ಈ ಕುರಿತು ವಿಚಾರಣೆ ನಡೆಸಲಾಗುವುದು” ಎಂದು ಮಾಹಿತಿ ನೀಡಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು