ನನ್ನ ರಾಜೀನಾಮೆ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು…

ಬೆಂಗಳೂರು: ಎಷ್ಟೇ ಚಿರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ಸಚಿನ್ ಪಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ (CID) ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅವರಿಗೆ ಸಿಬಿಐ (CBI) ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲಾ ಸಂಸ್ಥೆಗಳು ಇತ್ತು ಏನ್ ಮಾಡಿದರು? ಬಿಜೆಪಿ ಯಾರದ್ದೋ ತಲೆ ದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆ ತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

ಕಲಬುರಗಿಗೆ (Kalaburagi) ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು,ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕರನ್ನು ಮಾಧ್ಯಮಗಳು ಯಾಕೆ ಅಷ್ಟು ಸಿರಿಯಸ್ ಆಗಿ ತೆಗೆದುಕೊಂಡಿದ್ದೀರಿ? ಹೈಕಮಾಂಡ್ ನಾಯಕರೇ ರಾಜ್ಯ ಬಿಜೆಪಿ ನಾಯಕರನ್ನ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಯಡಿಯೂರಪ್ಪ ಫೋಕ್ಸೋ ಪ್ರಕರಣಕ್ಕೆ ನೋಟಿಸ್ ಕೊಟ್ರಾ? ಮುನಿರತ್ನ ಕೇಸ್ ನಲ್ಲಿ ಹೈಕಮಾಂಡ್ ನಾಯಕರು ಏನ್ ಕ್ರಮ ತೆಗೆದುಕೊಂಡಿದ್ದಾರೆ? ಯತ್ನಾಳ್ ವಿರುದ್ದ ಏನ್ ಕ್ರಮ ಆಯ್ತು? ರೇಣುಕಾಚಾರ್ಯ ವಿರುದ್ದ ಏನ್ ಕ್ರಮ ಆಗಿದೆ. ರಾಜ್ಯದ ನಾಯಕರಿಗೆ ಹೈಕಮಾಂಡ್ ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರನ್ನು ಲೇವಡಿ ಮಾಡಿದರು.

ರಾಜು ಕಪನೂರು ಪ್ರಿಯಾಂಕ್ ಖರ್ಗೆ ಜೊತೆ ಇದ್ದ ಫೋಟೋ ರಿಲೀಸ್ ಮಾಡಿದ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಚಿವರು, ರಾಜು ಕಪನೂರು ಬಿಜೆಪಿ ನಾಯಕರ ಜೊತೆ ಇದ್ದ ಫೋಟೋ ಬಿಡುಗಡೆ ಮಾಡಿದರು. ರಾಜು ಕಪನೂರು ಬಿಜೆಪಿಯಲ್ಲಿ ಮೊದಲು ಇದ್ದರು. ಫೋಟೋ ಹಲವಾರು ಇವೆ. ಆದರೆ ಸತ್ಯ ಏನು? ರಾಜು ಕಪನೂರು ಪರಿಚಯ ಇಲ್ಲ ಅಂತ ನಾವು ಹೇಳಿಲ್ಲ. ನಟಿಯರ ಡ್ರಗ್ ಕೇಸ್ ನಲ್ಲಿ ನಟಿ ವಿಪಕ್ಷ ನಾಯಕ ಅಶೋಕ್ ಜೊತೆ ನಟಿಯರ ಫೋಟೋ ಇತ್ತು. ಹಾಗಾದ್ರೆ ಅದಕ್ಕೆ ಅಶೋಕ್ ಸಂಬಂಧ ಹೇಳೋಕೆ ಆಗುತ್ತಾ? ಫೋಕ್ಸೋ ಕೇಸ್ನಲ್ಲಿ ಯಡಿಯೂರಪ್ಪ ಯಾಕೆ ರಾಜೀನಾಮೆ ಕೊಟ್ಟಿಲ್ಲ? ಅಕ್ರಮ ಹಣ ದುರ್ಬಳಕೆ ಪ್ರಕರಣದಲ್ಲಿ ವಿಜಯೇಂದ್ರ ಯಾಕೆ ರಾಜೀನಾಮೆ ಕೊಟ್ಟಿಲ್ಲ. ಮೊದಲು ನಿಮ್ಮ ನಾಯಕರಿಗೆ ನೋಟಿಸ್ ಕೊಡಿ ಅಂತ ಕಿಡಿಕಾರಿದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು