ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ : ಹೊಸ ವರ್ಷಾಚರಣೆಯಿಂದ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ.

ಹೊಸ ವರ್ಷ ಆಚರಣೆಯ ಸಂಭ್ರಮ ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಡಿಸೆಂಬರ್ 31ರಂದು ಕೇವಲ ಅರ್ಧ ದಿನದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷ ಇದೇ ದಿನ ಗಳಿಸಿದ ಆದಾಯಕ್ಕಿಂತಲೂ ಹೆಚ್ಚಿನ ಆದಾಯ ಗಳಿಸಿದೆ.

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರುಪಾಯಿ ಆದಾಯ ಹರಿದು ಬಂದಿದೆ. ಡಿಸೆಂಬರ್ 31 ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್ಬಿಸಿಎಲ್ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮಾರಾಟವಾಗಿದೆ.
ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್ಬಿಸಿಎಲ್ನಿಂದ ಮದ್ಯ ಖರೀದಿ ಮಾಡಿದ್ದಾರೆ.
ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿದೆ.

27-12-2024 ರ ಶುಕ್ರವಾರದಂದು ಕೂಡ ಬರೋಬ್ಬರಿ 408.58 ಕೋಟಿ ರುಪಾಯಿ ಮದ್ಯ ಮಾರಾಟವಾಗಿತ್ತು. ಐಎಂಎಲ್ 6,22,062 ಲಕ್ಷ ಬಾಕ್ಸ್ ಮಾರಾಟದಿಂದ 327,50 ಕೋಟಿ ರುಪಾಯಿ ಆದಾಯ ಸಂಗ್ರಹವಾಗಿತ್ತು. ಬಿಯರ್ 4,04,998 ಲಕ್ಷ ಬಾಕ್ಸ್ ಮಾರಾಟದಿಂದ 80,58 ಕೋಟಿ ರುಪಾಯಿ ಆದಾಯ ಗಳಿಕೆಯಾಗಿತ್ತು. ಐಎಂಎಲ್, ಬಿಯರ್ ಸೇರಿ ಒಟ್ಟು- 10,27,060 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ 408.50 ಕೋಟಿ ರುಪಾಯಿ ಆದಾಯ ಹರಿದುಬಂದಿತ್ತು.
ಏತನ್ಮಧ್ಯೆ, ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮದಿಂದ ನಡೆದಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಲಕ್ಷಾಂತರ ಮಂದಿ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಕೆಲವೆಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದು ಬಿಟ್ಟರೆ, ಒಟ್ಟಾರೆಯಾಗಿ ಹೊಸ ವರ್ಷದ ಸ್ವಾಗತ, ಸಂಭ್ರಮಾಚರಣೆ ಶಾಂತಿಯುತವಾಗಿ ನೆರವೇರಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!