ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು: ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ.

ಉತ್ತರ ಪ್ರದೇಶ :- ಅಚ್ಚರಿಯ ಪ್ರಕರಣಗಳಿಗೆ ಸಂಬಂಧಿಸಿದ ಕೆಲವೊಂದು ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಕಾಣ ಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೊಬ್ಬರು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಧಮ್ಕಿ ಹಾಕಿದ್ದಾರೆ. ಹೌದು ಕರೆಂಟ್ ಬಿಲ್ ಸರಿಯಾಗಿ ಪಾವತಿಸದ ಕಾರಣ ವಿದ್ಯುತ್ ಕಂಬವನ್ನೇರಿ ಲೈನ್ಮ್ಯಾನ್ ವಿದ್ಯುತ್ ಕಡಿತಗೊಳಿಸಲು ಮುಂದಾದ ಸಂದರ್ಭದಲ್ಲಿ ಆತನ ಹಿಂದೆಯೇ ದೊಣ್ಣೆ ಹಿಡಿದು ಕಂಬವನ್ನೇರಿದ ಮಹಿಳೆಯೊಬ್ಬರು ಅವಾಸ್ ಹಾಕಿ ಆತನನ್ನು ಕಂಬದಿಂದ ಕೆಳಗಿಳಿಸಿದ್ದಾರೆ. ಮಹಿಳೆಯ ಭಂಡ ಧೈರ್ಯವನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಈ ಅಚ್ಚರಿಯ ಪ್ರಕರಣ ನಡೆದಿದ್ದು, ಹಲವು ತಿಂಗಳುಗಳಿಂದ ವಿದ್ಯುತ್ ಬಿಲ್ ಪಾವತಿಸುತ್ತಿಲ್ಲ ಎಂಬ ಕಾರಣಕ್ಕೆ ಲೈನ್ಮ್ಯಾನ್ ಬಂದು ನೇರವಾಗಿ ಕರೆಂಟ್ ಕಂಬದಿಂದಲೇ ವಿದ್ಯುತ್ ಕಡಿತಗೊಳಿಸಲು ಮುಂದಾಗಿದ್ದಾನೆ. ಇದನ್ನು ಕಂಡಂತಹ ಮಹಿಳೆಯೊಬ್ಬರು ತಾನು ಕೂಡಾ ಕೈಯಲ್ಲೊಂದು ದೊಣ್ಣೆ ಹಿಡಿದು ಏಣಿಯ ಮೂಲಕ ಕಂಬವನ್ನೇರಿ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಆತನಿಗೆ ಬೈದಿದ್ದಾರೆ. ಈ ಮಹಿಳೆಯ ಬೈಗುಳಕ್ಕೆ ಹೆದರಿದ ಲೈನ್ಮ್ಯಾನ್ ಕರೆಂಟ್ ಕಟ್ ಮಾಡದೆಯೇ ಕಂಬದಿಂದ ಇಳಿದು ಸೀದಾ ಹೋಗಿದ್ದಾನೆ.
Gharkakalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಕೈಯಲ್ಲೊಂದು ದೊಣ್ಣೆ ಹಿಡಿದು ಕರೆಂಟ್ ಕಂಬವನ್ನೇರಿ ಲೈನ್ಮ್ಯಾನ್ಗೆ ಕರೆಂಟ್ ತೆಗೆದ್ರೆ ಜಾಗ್ರತೆ ಎಂದು ಧಮ್ಕಿ ಹಾಕುತ್ತಿರುವ ದೃಶ್ಯವನ್ನು ಕಾಣಬಹುದು.
ಡಿಸೆಂಬರ್ 31 ರಂದು ಹಂಚಿಕೊಳ್ಳಲಾದ ಈ ವಿಡಿಯೋ 62 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮಹಿಳೆ ನಿಜಕ್ಕೂ ಗಟ್ಟಿಗಿತ್ತಿʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಷ್ಟೆಲ್ಲಾ ಧಮ್ಕಿ ಹಾಕುವ ಬದಲು ಆಕೆಗೆ ಕರೆಂಟ್ ಬಿಲ್ ಪಾವತಿಸಬಹುದಿತ್ತಲ್ವಾʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!