ಶಿವರಾಜ್ಕುಮಾರ್ ಸರ್ಜರಿ ಬಳಿಕ ಫಿಟ್ ಆ್ಯಂಡ್ ಫೈನ್ : ಅಮೆರಿಕದಲ್ಲಿ ಕುಟುಂಬದ ಜೊತೆ ನಿಂತಿರುವ ಫೋಟೋ ವೈರಲ್

ಶಿವರಾಜ್ ಕುಮಾರ್ ಅವರು ಇತ್ತೀಚೆಗೆ ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಮತ್ತು ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಕ್ಯಾನ್ಸರ್ ಮುಕ್ತರಾಗಿದ್ದಾರೆ ಮತ್ತು ಅಮೆರಿಕಾದಲ್ಲಿ ತಮ್ಮ ಕುಟುಂಬದೊಂದಿಗೆ ಚೇತರಿಸಿಕೊಳ್ಳುತ್ತಿದ್ದಾರೆ. ಜನವರಿ 24 ರ ನಂತರ ಅವರು ಬೆಂಗಳೂರಿಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ
ನಟ ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಮೂತ್ರಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇದರ ಶಸ್ತ್ರಚಿಕಿತ್ಸೆ ಕೂಡ ಅವರು ಮಾಡಿಸಿಕೊಂಡಿದ್ದರು. ಈಗ ಅವರು ಕ್ಯಾನ್ಸರ್ ಮುಕ್ತರಾಗಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಶಸ್ತ್ರಚಿಕಿತ್ಸೆ ನಡೆದಿತ್ತು. ಈಗ ಶಿವಣ್ಣ ಅವರು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದ ಹೊಸ ಫೋಟೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರು ಆದಷ್ಟು ಬೇಗ ಭಾರತಕ್ಕೆ ಮರಳಲಿ ಎಂದು ಕೋರುತ್ತಿದ್ದಾರೆ.
ಶಿವರಾಜ್ಕುಮಾರ್ ಅವರು ಡಿಸೆಂಬರ್ 18ರಂದು ಅಮೆರಿಕಕ್ಕೆ ತೆರಳಿದರು. ಡಿಸೆಂಬರ್ 24ರಂದು ಅಮೆರಿಕದ ಫ್ಲೋರಿಡಾದಲ್ಲಿ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ನಾಲ್ಕೈದು ಗಂಟೆಗಳ ಕಾಲ ಸರ್ಜರಿ ನಡೆದಿತ್ತು. ಈಗ ಶಿವಣ್ಣ ಅವರು ಆಸ್ಪತ್ರೆ ಪಕ್ಕದಲ್ಲೇ ಇರುವ ಹೋಟೆಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆರಿಕದಲ್ಲಿ ಕುಟುಂಬದ ಜೊತೆ ನಿಂತಿರುವ ಫೋಟೋ ವೈರಲ್ ಆಗಿದೆ.
ಕ್ಯಾನ್ಸರ್ ಸರ್ಜರಿ ಯಶಸ್ವಿ ಆಗಿದ್ದರೂ ಕೆಲ ದಿನಗಳ ಕಾಲ ಅವರು ಅಲ್ಲಿಯೇ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ. ಹೀಗಾಗಿ, ಜನವರಿ 24ರವರೆಗೆ ಶಿವರಾಜ್ಕುಮಾರ್ ಅಮೆರಿಕದಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಆ ಬಳಿಕ ಅವರು ಬೆಂಗಳೂರಿಗೆ ಬಂದ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಶಿವರಾಜ್ಕುಮಾರ್ ಅವರು ಸಿನಿಮಾ ಕೆಲಸಕ್ಕೆ ಮರಳಲಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!