ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಹೊಸ ವರ್ಷದ ಮೊದಲ ದಿನದಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರು ಎಲ್ಲರನ್ನು ತಮ್ಮತ್ತ ಸೆಳೆದರು. ಬೆಟ್ಟದ ಮೇಲಿದ್ದ ಭಕ್ತಾದಿಗಳೆಲ್ಲ ಆ ವ್ಯಕ್ತಿಯನ್ನು ನೋಡಿ ಆಶ್ಚರ್ಯಪಟ್ಟರು. ಆತ ಬೇರೆ ಯಾರೂ ಅಲ್ಲ, ತೆಲಂಗಾಣದ ಚಿನ್ನದ ಮನುಷ್ಯ ಎಂದೇ ಖ್ಯಾತರಾಗಿರುವ ಹೋಪ್ ಫೌಂಡೇಶನ್ ಮುಖ್ಯಸ್ಥ ವಿಜಯ್ ಕುಮಾರ್.

ಹೊಸ ವರ್ಷದ ಪ್ರಯುಕ್ತ ವಿಜಯ್ ಕುಮಾರ್ ಅವರು ತಮ್ಮ ದೇಹದ ಮೇಲೆ 5 ಕೆಜಿ ಚಿನ್ನವನ್ನು ಧರಿಸಿ ಬಂದು ತಿಮ್ಮಪ್ಪನ ದರ್ಶನ ಪಡೆದರು. ಎರಡೂ ಕೈ ಬೆರಳುಗಳಲ್ಲಿ ಉಂಗುರಗಳು, ಎರಡೂ ಕೈಗಳಲ್ಲಿ ಭಾರವಾದ ಬಳೆಗಳು, ಚಿನ್ನದ ಗಡಿಯಾರಗಳು ಮತ್ತು ಅವನ ಕುತ್ತಿಗೆಯ ಸುತ್ತ ಭಾರವಾದ ಚಿನ್ನದ ಆಭರಣಗಳನ್ನು ಧರಿಸಿದ್ದರು ಈ ವೇಳೆ ವಿಜಯ್ ಕುಮಾರ್ ಅವರೊಂದಿಗೆ ಸೆಲ್ಪಿ ತೆಗೆದುಕೊಳ್ಳಲು ಭಕ್ತರು ಮುಗಿಬಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕುಮಾರ್, ಕಳೆದ ಮೂರು ವರ್ಷಗಳಿಂದ ಕುಟುಂಬ ಸದಸ್ಯರು ಹಾಗೂ ಹೋಪ್ ಫೌಂಡೇಶನ್ ಸದಸ್ಯರೊಂದಿಗೆ ದೇವರ ದರ್ಶನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಈ ಹಿಂದೆ ವಿಜಯ್ ಕುಮಾರ್ ಸುಮಾರು 10 ಕೆಜಿ ಚಿನ್ನಾಭರಣ ಧರಿಸಿ ದೇವರ ದರ್ಶನ ಪಡೆದಿದ್ದರು. ಇದೀಗ 5 ಕೆಜಿ ಚಿನ್ನಾಭರಣ ಧರಿಸಿ ದರ್ಶನ ಪಡೆದಿದ್ದಾರೆ. ಇದರ ಬೆಲೆ ಸುಮಾರು 3.5 ಕೋಟಿ ರೂಪಾಯಿಗೂ ಅಧಿಕವಾಗಿದೆ.

ಬಂಗಾರದ ಮೇಲಿರುವ ತಮ್ಮ ಅತಿಯಾದ ಆಸಕ್ತಿಯಿಂದಾಗಿ ಬೃಹತ್ ಆಭರಣಗಳನ್ನು ಮಾಡಿಸಿಕೊಂಡಿದ್ದೇನೆಂದು ವಿಜಯ್ ಕುಮಾ‌ರ್ ಹೇಳಿದರು. ಅಂದಹಾಗೆ ವಿಜಯ್ ಕುಮಾರ್ ಅವರು ತೆಲಂಗಾಣ ಒಲಿಂಪಿಕ್ ಅಸೋಸಿಯೇಷನ್‌ನ ‘ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.
ಮೈಮೇಲೆ ಚಿನ್ನವನ್ನು ಹೊದ್ದುಕೊಂಡು ತಿರುಮಲಕ್ಕೆ ಬಂದಿದ್ದ ವಿಜಯ್ ಕುಮಾರ್ ಅವರನ್ನು ನೋಡಿ ಭಕ್ತರು ಆಶ್ಚರ್ಯಚಕಿತರಾದರು. ಸಾಮಾನ್ಯವಾಗಿ, ಒಬ್ಬ ವ್ಯಕ್ತಿ ಒಂದು ಅಥವಾ ಎರಡು ಚಿನ್ನದ ಸರಗಳನ್ನು ಧರಿಸಲು ಭಯಪಡುತ್ತಾರೆ. ಆದರೆ, ಒಂದೇ ಬಾರಿಗೆ 5 ಕೆಜಿ ಚಿನ್ನ ಧರಿಸುವುದು ಸಾಮಾನ್ಯ ಸಂಗತಿಯಲ್ಲ ಎನ್ನುತ್ತಾರೆ ಭಕ್ತರು. ಚಿನ್ನದ ದರದ ಬಗ್ಗೆ ನಿಮಗೆಲ್ಲ ವಿಶೇಷವಾಗಿ ಹೇಳಬೇಕಿಲ್ಲ ಒಂದು ಗ್ರಾಂ ಚಿನ್ನ ಖರೀದಿಸಲು ಚಿಂತಿಸಬೇಕಾದ ಪರಿಸ್ಥಿತಿ ಇದೆ. ಇದೀಗ ವಿಜಯ್ ಕುಮಾರ್ ಒಂದೇ ಬಾರಿಗೆ 5 ಕೆಜಿ ಚಿನ್ನಾಭರಣ ಧರಿಸಿರುವುದು ಅಚ್ಚರಿ ಮೂಡಿಸಿದೆ ಎನ್ನುತ್ತಾರೆ ಭಕ್ತರು

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!