ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಹೊಸ ವರ್ಷದ ಮೊದಲ ದಿನದಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರು ಎಲ್ಲರನ್ನು ತಮ್ಮತ್ತ ಸೆಳೆದರು. ಬೆಟ್ಟದ ಮೇಲಿದ್ದ ಭಕ್ತಾದಿಗಳೆಲ್ಲ ಆ ವ್ಯಕ್ತಿಯನ್ನು ನೋಡಿ ಆಶ್ಚರ್ಯಪಟ್ಟರು. ಆತ ಬೇರೆ ಯಾರೂ ಅಲ್ಲ, ತೆಲಂಗಾಣದ ಚಿನ್ನದ ಮನುಷ್ಯ ಎಂದೇ ಖ್ಯಾತರಾಗಿರುವ ಹೋಪ್ ಫೌಂಡೇಶನ್ ಮುಖ್ಯಸ್ಥ ವಿಜಯ್ ಕುಮಾರ್.

ಹೊಸ ವರ್ಷದ ಪ್ರಯುಕ್ತ ವಿಜಯ್ ಕುಮಾರ್ ಅವರು ತಮ್ಮ ದೇಹದ ಮೇಲೆ 5 ಕೆಜಿ ಚಿನ್ನವನ್ನು ಧರಿಸಿ ಬಂದು ತಿಮ್ಮಪ್ಪನ ದರ್ಶನ ಪಡೆದರು. ಎರಡೂ ಕೈ ಬೆರಳುಗಳಲ್ಲಿ ಉಂಗುರಗಳು, ಎರಡೂ ಕೈಗಳಲ್ಲಿ ಭಾರವಾದ ಬಳೆಗಳು, ಚಿನ್ನದ ಗಡಿಯಾರಗಳು ಮತ್ತು ಅವನ ಕುತ್ತಿಗೆಯ ಸುತ್ತ ಭಾರವಾದ ಚಿನ್ನದ ಆಭರಣಗಳನ್ನು ಧರಿಸಿದ್ದರು ಈ ವೇಳೆ ವಿಜಯ್ ಕುಮಾರ್ ಅವರೊಂದಿಗೆ ಸೆಲ್ಪಿ ತೆಗೆದುಕೊಳ್ಳಲು ಭಕ್ತರು ಮುಗಿಬಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಜಯ್ ಕುಮಾರ್, ಕಳೆದ ಮೂರು ವರ್ಷಗಳಿಂದ ಕುಟುಂಬ ಸದಸ್ಯರು ಹಾಗೂ ಹೋಪ್ ಫೌಂಡೇಶನ್ ಸದಸ್ಯರೊಂದಿಗೆ ದೇವರ ದರ್ಶನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಈ ಹಿಂದೆ ವಿಜಯ್ ಕುಮಾರ್ ಸುಮಾರು 10 ಕೆಜಿ ಚಿನ್ನಾಭರಣ ಧರಿಸಿ ದೇವರ ದರ್ಶನ ಪಡೆದಿದ್ದರು. ಇದೀಗ 5 ಕೆಜಿ ಚಿನ್ನಾಭರಣ ಧರಿಸಿ ದರ್ಶನ ಪಡೆದಿದ್ದಾರೆ. ಇದರ ಬೆಲೆ ಸುಮಾರು 3.5 ಕೋಟಿ ರೂಪಾಯಿಗೂ ಅಧಿಕವಾಗಿದೆ.

ಬಂಗಾರದ ಮೇಲಿರುವ ತಮ್ಮ ಅತಿಯಾದ ಆಸಕ್ತಿಯಿಂದಾಗಿ ಬೃಹತ್ ಆಭರಣಗಳನ್ನು ಮಾಡಿಸಿಕೊಂಡಿದ್ದೇನೆಂದು ವಿಜಯ್ ಕುಮಾ‌ರ್ ಹೇಳಿದರು. ಅಂದಹಾಗೆ ವಿಜಯ್ ಕುಮಾರ್ ಅವರು ತೆಲಂಗಾಣ ಒಲಿಂಪಿಕ್ ಅಸೋಸಿಯೇಷನ್‌ನ ‘ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.
ಮೈಮೇಲೆ ಚಿನ್ನವನ್ನು ಹೊದ್ದುಕೊಂಡು ತಿರುಮಲಕ್ಕೆ ಬಂದಿದ್ದ ವಿಜಯ್ ಕುಮಾರ್ ಅವರನ್ನು ನೋಡಿ ಭಕ್ತರು ಆಶ್ಚರ್ಯಚಕಿತರಾದರು. ಸಾಮಾನ್ಯವಾಗಿ, ಒಬ್ಬ ವ್ಯಕ್ತಿ ಒಂದು ಅಥವಾ ಎರಡು ಚಿನ್ನದ ಸರಗಳನ್ನು ಧರಿಸಲು ಭಯಪಡುತ್ತಾರೆ. ಆದರೆ, ಒಂದೇ ಬಾರಿಗೆ 5 ಕೆಜಿ ಚಿನ್ನ ಧರಿಸುವುದು ಸಾಮಾನ್ಯ ಸಂಗತಿಯಲ್ಲ ಎನ್ನುತ್ತಾರೆ ಭಕ್ತರು. ಚಿನ್ನದ ದರದ ಬಗ್ಗೆ ನಿಮಗೆಲ್ಲ ವಿಶೇಷವಾಗಿ ಹೇಳಬೇಕಿಲ್ಲ ಒಂದು ಗ್ರಾಂ ಚಿನ್ನ ಖರೀದಿಸಲು ಚಿಂತಿಸಬೇಕಾದ ಪರಿಸ್ಥಿತಿ ಇದೆ. ಇದೀಗ ವಿಜಯ್ ಕುಮಾರ್ ಒಂದೇ ಬಾರಿಗೆ 5 ಕೆಜಿ ಚಿನ್ನಾಭರಣ ಧರಿಸಿರುವುದು ಅಚ್ಚರಿ ಮೂಡಿಸಿದೆ ಎನ್ನುತ್ತಾರೆ ಭಕ್ತರು

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!