ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ ಮಗುವಿನ ಜನ್ಮದ ಸಂತೋಷದ ಕುರಿತು ವಿವರಗಳಿವೆ. ದೀಪಿಕಾ ಅವರ ಜನ್ಮದಿನದ ಸಂದರ್ಭದಲ್ಲಿ ಈ ವಿಡಿಯೋಗಳು ಮತ್ತೆ ವೈರಲ್ ಆಗಿವೆ.
ದೀಪಿಕಾ ಹಾಗೂ ರಣವೀರ್ ಪ್ರೀತಿಸಿ ವಿವಾಹ ಆದವರು. ಒಂದೇ ಸಿನಿಮಾದಲ್ಲಿ ನಟಿಸಿದ ಇವರಿಗೆ ಸೆಟ್ನಲ್ಲೇ ಪ್ರೀತಿ ಮೂಡಿತು. ರಣವೀರ್ ಸಿಂಗ್ ಹಾಗೂ ದೀಪಿಕಾ ಈಗ ಪಾಲಕರೂ ಹೌದು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣವೀರ್ ಹಾಗೂ ದೀಪಿಕಾ ಪ್ರೀತಿ ಶುರುವಾಗಿದ್ದು ದಶಕಗಳ ಹಿಂದೆ. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ದೀಪಿಕಾ ಪಡುಕೋಣೆ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ವೇಳೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ.
ದೀಪಿಕಾ ಪಡುಕೋಣೆ ಅವರು ಕರ್ನಾಟಕದವರು. ಅವರಿಗೆ ಕನ್ನಡ ಬರುತ್ತದೆ. ಬೆಂಗಳೂರಲ್ಲಿ ದೀಪಿಕಾ ಶಿಕ್ಷಣ ಪಡೆದಿದ್ದರು. ಅವರು ನಟಿಸಿದ ಮೊದಲ ಸಿನಿಮಾ ‘ಐಶ್ವರ್ಯಾ’ ಕನ್ನಡದ್ದು. ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ರಣವೀರ್ ಸಿಂಗ್ ಅವರದ್ದು ಪಂಜಾಬಿ ಕುಟುಂಬ. ಅವರು ಕೆಲವೊಮ್ಮೆ ಬೆಂಗಳೂರಿಗೆ ಬಂದ ಉದಾಹರಣೆ ಇದೆ. ಅವರಿಗೆ ಕನ್ನಡದ ಬರುವುದಿಲ್ಲ. ಅವರು ಈ ಮೊದಲು ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ ಮಾಡಿದ್ದರು ಅನ್ನೋದು ವಿಶೇಷ.
ರಣವೀರ್ ಸಿಂಗ್ ಅವರು ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಾ ಇರುತ್ತಾರೆ. ಅದೇ ರೀತಿ ಅವರು ಅವಾರ್ಡ್ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿ ಯಶ್ ಸೇರಿದಂತೆ ಅನೇಕರು ಇದ್ದರು. ಈ ವೇಳೆ ಅವರ ಜೊತೆ ಇದ್ದಿದ್ದು, ಕನ್ನಡದ ಅಕುಲ್ ಬಾಲಾಜಿ. ಅವರು ಕನ್ನಡದ ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಆ ಶೋನ ಅಕುಲ್ ನಡೆಸಿಕೊಡುತ್ತಾ ಇದ್ದರು. ಈ ವೇಳೆ ರಣವೀರ್ ಸಿಂಗ್ಗೆ ಕನ್ನಡದಲ್ಲಿ ಪ್ರಪೋಸ್ ಮಾಡೋದನ್ನು ಹೇಗೆ ಎಂದು ಹೇಳಿಕೊಟ್ಟರು ಅಕುಲ್.
‘ದೀಪಿಕಾ, ಓ ನನ್ನ ದೀಪಿಕಾ’ ಎಂದರು ಅಕುಲ್. ರಣವೀರ್ ಸಿಂಗ್ಗೆ ತಪ್ಪಾಗಿ ಏನಾದರೂ ಹೇಳಿಕೊಟ್ಟರೆ ಎಂಬ ಭಯ ಅತಿಯಾಗಿ ಕಾಡಿತ್ತು. ಈ ಕಾರಣದಿಂದಲೇ ‘ನನಗೆ ಮನೆಗೆ ಹೋಗಬೇಕು, ನಾನು ಇದನ್ನು’ ಎಂದರು ರಣವೀರ್ ಸಿಂಗ್. ಆಗ, ಅಕುಲ್ ಅವರು ತಪ್ಪಾಗಿ ಏನನ್ನೂ ಹೇಳಿಕೊಡಲ್ಲ ಎಂದು ಪ್ರಾಮಿಸ್ ಮಾಡಿದರು. ಆ ಬಳಿಕ ‘ದೀಪಿಕಾ, ಓ ನನ್ನ ದೀಪಿಕಾ, ನೀನೆ ನನ್ನ ಜೀವನದ ದೀಪ’ ಎಂದು ಅಕುಲ್ ಹೇಳಿಕೊಟ್ಟರು. ದೀಪ ಎನ್ನುತ್ತಿದ್ದಂತೆ ‘ಯು ಆರ್ ದಿ ಲೈಟ್ ಆಫ್ ಮೈ ಲೈಫ್’ ಎಂದರು
ರಣವೀರ್ ಸಿಂಗ್ ..

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!