ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ ಕಾಟ ತಾಳಲಾರದೆ ನೊಂದ ಪತಿ ಪೊಲೀಸರ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಗರದ ವಿಶ್ವಕರ್ಮ ನಗರದಲ್ಲಿ 45 ವರ್ಷದ ಮಹಿಳೆಯೊಬ್ಬರು 61 ವರ್ಷದ ತನ್ನ ಪತಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಆ ಮಹಿಳೆ ತನ್ನ ಪತಿಯನ್ನು ಸುಮಾರು 12 ಸ್ಥಳಗಳಲ್ಲಿ ಕಚ್ಚಿ ಗಾಯಗೊಳಿಸಿದ್ದು, ತನ್ನ ಉಗುರುಗಳಿಂದ ಪರಚಿ ಹಿಂಸಿಸಿದ್ದಾರೆ. ಅಷ್ಟೇ ಅಲ್ಲದೆ ಅವನ ಮೇಲೆ ಆಸಿಡ್ ಕೂಡ ಎರಚಿದ್ದಾರೆ. ಆಸಿಡ್ ಆತನಿಗೆ ತಾಗದಿದ್ದರೂ, ಅವರ ಬಟ್ಟೆಗಳಿಗೆ ಆ್ಯಸಿಡ್ ತಾಗಿ ಹಾಳಾಗಿದೆ. ಪೊಲೀಸರು ಆ ಮಹಿಳೆಯನ್ನು ಬಂಧಿಸಿದ್ದಾರೆ. ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ.
ವಿಶ್ವಕರ್ಮ ನಗರದಲ್ಲಿ ವಾಸವಾಗಿರುವ ಟ್ರಕ್ ಚಾಲಕ 61 ವರ್ಷದ ನಾರಾಯಣ ಲೋಧಿ ತನ್ನ ಎರಡನೇ ಪತ್ನಿ 45 ವರ್ಷದ ದುರ್ಗಾ ಲೋಧಿಯೊಂದಿಗೆ ವಾಸವಾಗಿದ್ದರು. ದುರ್ಗಾಗೆ ಮೊದಲ ಗಂಡನಿಂದ 12 ಮತ್ತು 14 ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನಾರಾಯಣ ತಮ್ಮ ವೃತ್ತಿಯ ಕಾರಣದಿಂದ ವಾರಕ್ಕೆ ಒಂದು ಅಥವಾ ಎರಡು ಬಾರಿ ಮಾತ್ರ ಮನೆಗೆ ಬರುತ್ತಿದ್ದರು.
ಮನೆಯಲ್ಲಿ ಕೆಲವು ವಸ್ತುಗಳು ಕಾಣೆಯಾಗಿರುವ ಬಗ್ಗೆ ಅವರು ಪತ್ನಿಯೊಂದಿಗೆ ಜಗಳವಾಡಿದ್ದಾರೆ. ವಾಗ್ವಾದ ಎಷ್ಟರಮಟ್ಟಿಗೆ ಏರಿತೆಂದರೆ, ಮದ್ಯವ್ಯಸನಿಯಾಗಿದ್ದ ದುರ್ಗಾ ಆತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಹಲವೆಡೆ ಕಚ್ಚಿ, ಪರಚಿದ್ದಾರೆ. ನಾರಾಯಣ ಓಡಿಹೋಗಲು ಯತ್ನಿಸಿದ್ದು, ದುರ್ಗಾ ಆತನ ಮೇಲೆ ಆಸಿಡ್ ಎರಚಿದ್ದಾಳೆ. ಅದೃಷ್ಟವಶಾತ್ ಆ್ಯಸಿಡ್ ನಾರಾಯಣ ಅವರ ಮೈಮೇಲೆ ಬೀಳದೆ ಬಟ್ಟೆ ಮೇಲೆ ಬಿದ್ದಿದೆ. ಇದರಿಂದ ಅವರ ಬಟ್ಟೆ ಸ್ವಲ್ಪ ಸುಟ್ಟಿದೆ.

ದುರ್ಗಾಗೆ ಕುಡಿತದ ಚಟವಿದೆ ಎಂದು ನಾರಾಯಣ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಆಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದಿದ್ದಾರೆ. ದುರ್ಗಾ ವಿರುದ್ಧ ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ. ಹೀಗಾಗಿ, ಆಕೆಯನ್ನು ಬಂಧಿಸಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!