ಭಾರತದ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ಶೇ 4ರಷ್ಟು ಹೆಚ್ಚಳ: ಹೊರ ಬಿತ್ತು ಫಿಚ್ ರೇಟಿಂಗ್ಸ್ ವರದಿ.

ನವದೆಹಲಿ : ಮಾರ್ಚ್ 31, 2025 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿಯಂಥ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ಶೇಕಡಾ 3 ರಿಂದ 4 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಫಿಚ್ ರೇಟಿಂಗ್ಸ್ ವರದಿ ತಿಳಿಸಿದೆ. ಗ್ರಾಹಕ ವಲಯ, ಕೈಗಾರಿಕಾ ವಲಯ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಹೆಚ್ಚಿದ ಬಳಕೆಯಿಂದಾಗಿ ಬೇಡಿಕೆ ಹೆಚ್ಚಾಗಲಿದೆ ಎಂದು ರೇಟಿಂಗ್ ಏಜೆನ್ಸಿ ವರದಿಯಲ್ಲಿ ತಿಳಿಸಿದೆ.
ಇಂಧನ ಉತ್ಪಾದನೆಯಲ್ಲಿನ ಕುಸಿತ, ಸ್ಥಳೀಯವಾಗಿ ಅತಿಯಾದ ಇಂಧನ ಪೂರೈಕೆ ಮತ್ತು ವಿಭಿನ್ನ ಕಚ್ಚಾ ತೈಲಗಳ ನಡುವಿನ ಬೆಲೆ ವ್ಯತ್ಯಾಸಗಳು ಕಡಿಮೆಯಾಗಿರುವುದರಿಂದ ಭಾರತದ ತೈಲ ಮಾರುಕಟ್ಟೆ ಕಂಪನಿಗಳ (ಒಎಂಸಿ) ಸಂಸ್ಕರಣಾ ಲಾಭಗಳು ಹಣಕಾಸು ವರ್ಷ 2025 ರ ಮಧ್ಯದಲ್ಲಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ವರದಿ ಹೇಳಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಕಡಿಮೆಯಾಗಿರುವುದರಿಂದ ಈ ಕಂಪನಿಗಳ ಮಾರುಕಟ್ಟೆ ಲಾಭವು ಹಣಕಾಸು ವರ್ಷ 2024 ಕ್ಕಿಂತ ಉತ್ತಮವಾಗಿರಲಿದೆ.
“ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಕಡಿಮೆಯಾಗಿರುವುದು ತೈಲ ಮಾರುಕಟ್ಟೆ ಕಂಪನಿಗಳ ಸಂಸ್ಕರಣಾ ಲಾಭ ಕುಸಿತವನ್ನು ಒಂದಿಷ್ಟು ಕಡಿಮೆ ಮಾಡಲಿದೆ. ಆದಾಗ್ಯೂ, ಎಚ್ಪಿಸಿಎಲ್-ಮಿತ್ತಲ್ ಎನರ್ಜಿ ಲಿಮಿಟೆಡ್ (ಎಚ್ಎಂಇಎಲ್, ಬಿಬಿ + / ಸ್ಟೇಬಲ್) ನಂತಹ ಶುದ್ಧ ಸಂಸ್ಕರಣಾಗಾರಗಳ ಲಾಭದಾಯಕತೆಯ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಸ್ಥಳೀಯವಾಗಿ ಅತಿಯಾದ ಇಂಧನ ಪೂರೈಕೆ ಪ್ರಮಾಣ ಕಡಿಮೆಯಾಗುವುದರಿಂದ ಮತ್ತು ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಫಿಚ್ನ ಊಹೆಗೆ ಅನುಗುಣವಾಗಿ ಕುಸಿಯುವುದರಿಂದ, ಹಣಕಾಸು ವರ್ಷ 2026 ರಲ್ಲಿ ಸಂಸ್ಕರಣಾ ಲಾಭಗಳು ತಮ್ಮ ಮಧ್ಯ-ಚಕ್ರದ ಮಟ್ಟಕ್ಕೆ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ಆದರೆ ಇದೇ ಸಂದರ್ಭದಲ್ಲಿ ಮಾರ್ಕೆಟಿಂಗ್ ಲಾಭಗಳು ಉತ್ತಮವಾಗಿರಲಿವೆ. ರಿಫೈನಿಂಗ್ ಲಾಭಗಳಲ್ಲಿ ಕ್ರಮೇಣ ಸಾಮಾನ್ಯೀಕರಣದಿಂದಾಗಿ ಹಣಕಾಸು ವರ್ಷ 2025 ರಲ್ಲಿ ಎಚ್ಎಂಇಎಲ್ನ ಕಡಿಮೆ ರೇಟಿಂಗ್ ಪ್ರಮಾಣವು 2026 ರಲ್ಲಿ ಸುಧಾರಿಸಲಿದೆ” ಎಂದು ವರದಿ ತಿಳಿಸಿದೆ.
ಭಾರತದ ತೈಲ ಮತ್ತು ಅನಿಲ ಉತ್ಪಾದನೆಯ ಪ್ರಮಾಣವು 2025ರ ಹಣಕಾಸು ವರ್ಷದಲ್ಲಿ ಬಹುತೇಕ ಒಂದೇ ರೀತಿಯಾಗಿರುವ ನಿರೀಕ್ಷೆಯಿದೆ. ಹಳೆಯ ನಿಕ್ಷೇಪಗಳಲ್ಲಿ ನೈಸರ್ಗಿಕ ಅನಿಲದ ಉತ್ಪಾದನೆಯ ಕುಸಿತ ತಡೆಗಟ್ಟುವ ಸಲುವಾಗಿ ಉತ್ಪಾದನೆ ಹೆಚ್ಚಿಸಲು ಮತ್ತು ಪ್ರತ್ಯೇಕ ನಿಕ್ಷೇಪಗಳನ್ನು ಪತ್ತೆ ಮಾಡುವುದಕ್ಕಾಗಿ ಹೊಸ ತಂತ್ರಜ್ಞಾನದ ಮೇಲೆ ಹಣ ಹೂಡಿಕೆ ಮಾಡಲು ಮುಂಚೂಣಿ ಕಂಪನಿಗಳು ಹೆಣಗಾಡುತ್ತಿರುವುದರಿಂದ ಭಾರತದ ಕಚ್ಚಾ ತೈಲ ಉತ್ಪಾದನೆಯು 2025 ರ ಹಣಕಾಸು ವರ್ಷದಲ್ಲಿ ಶೇಕಡಾ 2 ರಿಂದ 3 ರಷ್ಟು ಕುಸಿಯಲಿದೆ ಎಂದು ವರದಿ ಹೇಳಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಟ್ರಂಪ್-ಮುನೀರ್ ಆಪ್ತತೆ ಮೋದಿ ಸರ್ಕಾರಕ್ಕೆ ದೊಡ್ಡ ಹಿನ್ನಡೆ: ಕಾಂಗ್ರೆಸ್ ವಾಗ್ದಾಳಿ.

ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನ ವಹಿಸುತ್ತಿರುವ ಪ್ರಮುಖ ಪಾತ್ರ ಹಾಗೂ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಹೆಚ್ಚುತ್ತಿರುವ ಆಪ್ತತೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು ಪ್ರಧಾನಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು