ಯುವ ರೈತರೇ ಇವರ ಟಾರ್ಗೆಟ್: ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ.

ಬಾಗಲಕೋಟೆ : ಕನ್ಯೆ ಸಿಗದ ರೈತನಿಗೆ ಮೋಸದ ಮದುವೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಯುವ ರೈತನಿಗೆ ಮೋಸ ಮಾಡಿದವಳು ಎರಡು ಮದುವೆ, ಎರಡು ಹೆಣ್ಮಕ್ಕಳು, ಅಷ್ಟೇ ಅಲ್ಲ ಇಬ್ಬರು ಮೊಮ್ಮಕ್ಕಳು ಹೊಂದಿದ ಅಜ್ಜಿ ಎಂದು ಗೊತ್ತಾಗಿದೆ. ಮೇಲಾಗಿ ಮೋಸ ಹೋದ ರೈತನಿಗೆ 55 ಸಾವಿರ ರೂ. ಬೇಡಿಕೆ ಇಡುವುದರ ಮೂಲಕ ಮತ್ತೊಂದು ಮದುವೆ ಆಫರ್ ನೀಡಿದ್ದು ಬೆಳಕಿಗೆ ಬಂದಿದೆ.
ಜಿಲ್ಲೆಯ ಮುಧೋಳ ತಾಲ್ಲೂಕಿನ ಬಿದರಿ ಗ್ರಾಮದ ಸೋಮಶೇಖರ್ಗೆ ಕಳೆದ ಐದ ವರ್ಷದಿಂದ ಕನ್ಯೆ ಹುಡುಕುತ್ತಿದ್ದರು. ಆದರೆ ಸಿಕ್ಕರಲಿಲ್ಲ. ಇದನ್ನೆ ಅಸ್ತ್ರ ಮಾಡಿಕೊಂಡ ಆರೋಪಿಗಳಾದ ಸತ್ಯಪ್ಪ, ಸಂಜು ಸಿದ್ದಪ್ಪ, ರವಿ ಮದುವೆಯಾದ ಮಂಜುಳಾ, ಸಂಬಂಧಿಕರ ಸೋಗಿನಲ್ಲಿ ಬಂದ ಲಕ್ಷ್ಮಿ, ನಾಗವ್ವ ಸೇರಿ ಏಳು ಜನರು ವಂಚನೆ ಎಸಗಿದ್ದಾರೆ.
ಸೋಮಶೇಖರ್ ಕಡೆಯಿಂದ 4-5 ಸಾವಿರ ರೂ. ಹಣ ಪಡೆದು ವಂಚಿಸಿದ್ದಾರೆ. ಮದುವೆಯಾಗಿ ತಿಂಗಳ ನಂತರ ಮಂಜುಳಾ ಎರಡು ಮದುವೆಯಾಗಿದ್ದು, ಇಬ್ಬರು ಹೆಣ್ಮಕ್ಕಳು, ಇಬ್ಬರು ಮೊಮ್ಮಕ್ಕಳು ಹೊಂದಿದ್ದಾಳೆ ಎಂದು ಗೊತ್ತಾಗಿದೆ. ತನಗಾದ ಅನ್ಯಾಯ ವಂಚನೆ ಬಗ್ಗೆ ಎಳೆ ಎಳೆಯಾಗಿ ಸೋಮಶೇಖರ್ ಬಿಚ್ಚಿಟ್ಟಿದ್ದಾರೆ.
ಕನ್ಯೆ ಸಿಗದ ಯುವ ರೈತರಿಗೆ ವಂಚನೆ ಮಾಡುವ ವ್ಯವಸ್ಥಿತ ಜಾಲ ಉತ್ತರ ಕರ್ನಾಟಕದಲ್ಲಿ ಬೀಡುಬಿಟ್ಟಿದೆ ಎಂಬ ಸಂಶಯ ಶುರುವಾಗಿದೆ. ಯುವ ರೈತರಿಗೆ ವಂಚನೆ ಮಾಡುವ ಜಾಲ ಸದ್ದಿಲ್ಲದೆ ಬೀಡುಬಿಟ್ಟ ಲಕ್ಷಣಗಳು ಕಂಡುಬಂದಿವೆ. ಇವರು ಎಷ್ಟು ಭಂಡರೆಂದರೆ ಸೋಮಶೇಖರ್ಗೆ ಮಂಜುಳಾ ಕೈಕೊಟ್ಟ ಬೆನ್ನಲ್ಲೇ ಇನ್ನು 55 ಸಾವಿರ ರೂ. ಕೊಡು ಇನ್ನೊಬ್ಬಳ ಜೊತೆ ಮದುವೆ ಮಾಡಿಸುತ್ತೇವೆ ಎಂದು ಮತ್ತೊಬ್ಬ ಯುವತಿ ಕರೆತಂದು ನಿಲ್ಲಿಸಿದ್ದರಂತೆ.
ಕನ್ಯೆ ಸಿಗದ ಯುವರೈತರೇ ಇವರ ಟಾರ್ಗೆಟ್ ಆಗಿದ್ದಾರೆ. ಕನ್ಯೆ ಸಿಗದ ಯುವ ರೈತರ ಆಪ್ತರು, ಸಂಬಂಧಿಕರಿಗೆ ಆಮಿಷ ನೀಡಿ ಲಕ್ಷ ಲಕ್ಷ ರೂ. ಡೀಲ್ ಮಾಡ್ತಾರೆ. ಮೋಸ ಮಾಡೋದಕ್ಕೆ ಸೃಷ್ಟಿಯಾಗ್ತಾರೆ ವಧುವಿನ ನಕಲಿ ಸಂಬಂಧಿಕರು. ಇಲ್ಲಿ ನಕಲಿ ಚಿಕ್ಕಮ್ಮ, ದೊಡ್ಡಮ್ಮಂದಿರ ವೇಷದಲ್ಲಿ ಲಕ್ಷ್ಮಿ ಹಾಗೂ ನಾಗವ್ವ ಎಂಟ್ರಿ ಕೊಡ್ತಾರೆ. ಈ ಹಿಂದೆಯೂ ಇಂತಹದ್ದೇ ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಇದೆ.
ಲಕ್ಷ್ಮಿ ಹಾಗೂ ನಾಗವ್ವ ಹುಬ್ಬಳ್ಳಿ ಮೂಲದವರಾಗಿದ್ದು, ಉತ್ತರ ಕರ್ನಾಟಕದಲ್ಲಿ ಕನ್ಯೆ ಸಿಗದ ರೈತರಿಗೆ ಪಂಗನಾಮ ಹಾಕುವ ವ್ಯವಸ್ಥಿತ ಜಾಲದ ಸಂಶಯ ಇದೆ. ಇದು ವ್ಯವಸ್ಥಿತ ದಂದೆಯಾ? ಹೇಗೆ ಎಂಬುದರ ಬಗ್ಗೆ ಮುಧೋಳ ಪೊಲೀಸರು ಕೂಲಂಕುಷ ತನಿಖೆ ನಡೆಸುತ್ತಿದ್ದಾರೆ.
ಇನ್ನು ಸೋಮಶೇಖರ್ ತಂದೆ ಮಲ್ಲಪ್ಪ ಹೊಲ ಅಡವಿಟ್ಟು ಹಣ ಕೊಟ್ಟೆವು, ಹಣವೂ ಇಲ್ಲ ಮದುವೆಯೂ ಹಾಳಾಯ್ತು, ರೈತರಿಗೆ ಕನ್ಯೆ ಕೊಡದೆ ಇರೋದು ತಪ್ಪು. ಹೀಗೆ ಮುಂದುವರೆದರೆ ರೈತರ ಮಕ್ಕಳ ಗತಿ ಏನು ಎಂದು ಅಳಲು ತೋಡಿಕೊಂಡಿದ್ದಾರೆ. ನಮ್ಮ ಹಣ ನಮಗೆ ಕೊಡಿಸಿ ಮೋಸ ಮಾಡಿದವರಿಗೆ ತಕ್ಕ ಶಿಕ್ಷೆ ಕೊಡಿಸಿ ಎಂದು ಆಗ್ರಹಿಸಿದ್ದಾರೆ. ಇದೊಂದು ವ್ಯವಸ್ಥಿತ ಜಾಲ ಆಗಿದ್ದು, ಪೊಲೀಸರು ಈ ಬಗ್ಗೆ ನಿರ್ಲಕ್ಷ್ಯ ಮಾಡದೆ ಕಠಿಣ ಕ್ರಮ ಕೈಗೊಂಡು ವಂಚಕರ ಹೆಡೆಮುರಿ ಕಟ್ಟಬೇಕಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!