ಯುವ ರೈತರೇ ಇವರ ಟಾರ್ಗೆಟ್: ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ.

ಬಾಗಲಕೋಟೆ : ಕನ್ಯೆ ಸಿಗದ ರೈತನಿಗೆ ಮೋಸದ ಮದುವೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಯುವ ರೈತನಿಗೆ ಮೋಸ ಮಾಡಿದವಳು ಎರಡು ಮದುವೆ, ಎರಡು ಹೆಣ್ಮಕ್ಕಳು, ಅಷ್ಟೇ ಅಲ್ಲ ಇಬ್ಬರು ಮೊಮ್ಮಕ್ಕಳು ಹೊಂದಿದ ಅಜ್ಜಿ ಎಂದು ಗೊತ್ತಾಗಿದೆ. ಮೇಲಾಗಿ ಮೋಸ ಹೋದ ರೈತನಿಗೆ 55 ಸಾವಿರ ರೂ. ಬೇಡಿಕೆ ಇಡುವುದರ ಮೂಲಕ ಮತ್ತೊಂದು ಮದುವೆ ಆಫರ್ ನೀಡಿದ್ದು ಬೆಳಕಿಗೆ ಬಂದಿದೆ.
ಜಿಲ್ಲೆಯ ಮುಧೋಳ ತಾಲ್ಲೂಕಿನ ಬಿದರಿ ಗ್ರಾಮದ ಸೋಮಶೇಖರ್ಗೆ ಕಳೆದ ಐದ ವರ್ಷದಿಂದ ಕನ್ಯೆ ಹುಡುಕುತ್ತಿದ್ದರು. ಆದರೆ ಸಿಕ್ಕರಲಿಲ್ಲ. ಇದನ್ನೆ ಅಸ್ತ್ರ ಮಾಡಿಕೊಂಡ ಆರೋಪಿಗಳಾದ ಸತ್ಯಪ್ಪ, ಸಂಜು ಸಿದ್ದಪ್ಪ, ರವಿ ಮದುವೆಯಾದ ಮಂಜುಳಾ, ಸಂಬಂಧಿಕರ ಸೋಗಿನಲ್ಲಿ ಬಂದ ಲಕ್ಷ್ಮಿ, ನಾಗವ್ವ ಸೇರಿ ಏಳು ಜನರು ವಂಚನೆ ಎಸಗಿದ್ದಾರೆ.
ಸೋಮಶೇಖರ್ ಕಡೆಯಿಂದ 4-5 ಸಾವಿರ ರೂ. ಹಣ ಪಡೆದು ವಂಚಿಸಿದ್ದಾರೆ. ಮದುವೆಯಾಗಿ ತಿಂಗಳ ನಂತರ ಮಂಜುಳಾ ಎರಡು ಮದುವೆಯಾಗಿದ್ದು, ಇಬ್ಬರು ಹೆಣ್ಮಕ್ಕಳು, ಇಬ್ಬರು ಮೊಮ್ಮಕ್ಕಳು ಹೊಂದಿದ್ದಾಳೆ ಎಂದು ಗೊತ್ತಾಗಿದೆ. ತನಗಾದ ಅನ್ಯಾಯ ವಂಚನೆ ಬಗ್ಗೆ ಎಳೆ ಎಳೆಯಾಗಿ ಸೋಮಶೇಖರ್ ಬಿಚ್ಚಿಟ್ಟಿದ್ದಾರೆ.
ಕನ್ಯೆ ಸಿಗದ ಯುವ ರೈತರಿಗೆ ವಂಚನೆ ಮಾಡುವ ವ್ಯವಸ್ಥಿತ ಜಾಲ ಉತ್ತರ ಕರ್ನಾಟಕದಲ್ಲಿ ಬೀಡುಬಿಟ್ಟಿದೆ ಎಂಬ ಸಂಶಯ ಶುರುವಾಗಿದೆ. ಯುವ ರೈತರಿಗೆ ವಂಚನೆ ಮಾಡುವ ಜಾಲ ಸದ್ದಿಲ್ಲದೆ ಬೀಡುಬಿಟ್ಟ ಲಕ್ಷಣಗಳು ಕಂಡುಬಂದಿವೆ. ಇವರು ಎಷ್ಟು ಭಂಡರೆಂದರೆ ಸೋಮಶೇಖರ್ಗೆ ಮಂಜುಳಾ ಕೈಕೊಟ್ಟ ಬೆನ್ನಲ್ಲೇ ಇನ್ನು 55 ಸಾವಿರ ರೂ. ಕೊಡು ಇನ್ನೊಬ್ಬಳ ಜೊತೆ ಮದುವೆ ಮಾಡಿಸುತ್ತೇವೆ ಎಂದು ಮತ್ತೊಬ್ಬ ಯುವತಿ ಕರೆತಂದು ನಿಲ್ಲಿಸಿದ್ದರಂತೆ.
ಕನ್ಯೆ ಸಿಗದ ಯುವರೈತರೇ ಇವರ ಟಾರ್ಗೆಟ್ ಆಗಿದ್ದಾರೆ. ಕನ್ಯೆ ಸಿಗದ ಯುವ ರೈತರ ಆಪ್ತರು, ಸಂಬಂಧಿಕರಿಗೆ ಆಮಿಷ ನೀಡಿ ಲಕ್ಷ ಲಕ್ಷ ರೂ. ಡೀಲ್ ಮಾಡ್ತಾರೆ. ಮೋಸ ಮಾಡೋದಕ್ಕೆ ಸೃಷ್ಟಿಯಾಗ್ತಾರೆ ವಧುವಿನ ನಕಲಿ ಸಂಬಂಧಿಕರು. ಇಲ್ಲಿ ನಕಲಿ ಚಿಕ್ಕಮ್ಮ, ದೊಡ್ಡಮ್ಮಂದಿರ ವೇಷದಲ್ಲಿ ಲಕ್ಷ್ಮಿ ಹಾಗೂ ನಾಗವ್ವ ಎಂಟ್ರಿ ಕೊಡ್ತಾರೆ. ಈ ಹಿಂದೆಯೂ ಇಂತಹದ್ದೇ ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಇದೆ.
ಲಕ್ಷ್ಮಿ ಹಾಗೂ ನಾಗವ್ವ ಹುಬ್ಬಳ್ಳಿ ಮೂಲದವರಾಗಿದ್ದು, ಉತ್ತರ ಕರ್ನಾಟಕದಲ್ಲಿ ಕನ್ಯೆ ಸಿಗದ ರೈತರಿಗೆ ಪಂಗನಾಮ ಹಾಕುವ ವ್ಯವಸ್ಥಿತ ಜಾಲದ ಸಂಶಯ ಇದೆ. ಇದು ವ್ಯವಸ್ಥಿತ ದಂದೆಯಾ? ಹೇಗೆ ಎಂಬುದರ ಬಗ್ಗೆ ಮುಧೋಳ ಪೊಲೀಸರು ಕೂಲಂಕುಷ ತನಿಖೆ ನಡೆಸುತ್ತಿದ್ದಾರೆ.
ಇನ್ನು ಸೋಮಶೇಖರ್ ತಂದೆ ಮಲ್ಲಪ್ಪ ಹೊಲ ಅಡವಿಟ್ಟು ಹಣ ಕೊಟ್ಟೆವು, ಹಣವೂ ಇಲ್ಲ ಮದುವೆಯೂ ಹಾಳಾಯ್ತು, ರೈತರಿಗೆ ಕನ್ಯೆ ಕೊಡದೆ ಇರೋದು ತಪ್ಪು. ಹೀಗೆ ಮುಂದುವರೆದರೆ ರೈತರ ಮಕ್ಕಳ ಗತಿ ಏನು ಎಂದು ಅಳಲು ತೋಡಿಕೊಂಡಿದ್ದಾರೆ. ನಮ್ಮ ಹಣ ನಮಗೆ ಕೊಡಿಸಿ ಮೋಸ ಮಾಡಿದವರಿಗೆ ತಕ್ಕ ಶಿಕ್ಷೆ ಕೊಡಿಸಿ ಎಂದು ಆಗ್ರಹಿಸಿದ್ದಾರೆ. ಇದೊಂದು ವ್ಯವಸ್ಥಿತ ಜಾಲ ಆಗಿದ್ದು, ಪೊಲೀಸರು ಈ ಬಗ್ಗೆ ನಿರ್ಲಕ್ಷ್ಯ ಮಾಡದೆ ಕಠಿಣ ಕ್ರಮ ಕೈಗೊಂಡು ವಂಚಕರ ಹೆಡೆಮುರಿ ಕಟ್ಟಬೇಕಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು