ಫಿಟ್ ಅಂಡ್ ಫೈನ್ ಆಗಿದ್ದ ತಮಿಳು ನಟ ವಿಶಾಲ್ಗೆ ನಿಜಕ್ಕೂ ಆಗಿದ್ದೇನು ಗೊತ್ತಾ?

ತಮಿಳು ನಟ ವಿಶಾಲ್ ಅವರು ‘ಮದ ಗಜ ರಾಜ’ ಚಿತ್ರದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕೈ ನಡುಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್ ಅವರಿಗೆ ಜ್ವರ ಇದ್ದ ಕಾರಣ ನಡುಕ ಉಂಟಾಗಿತ್ತೆಂದು ಸ್ಪಷ್ಟನೆ ಸಿಕ್ಕಿದೆ. ಅವರ ಡೆಡಿಕೇಷನ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮಿಳು ನಟ ವಿಶಾಲ್ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಮಾಸ್ ಆಗಿ ಗಮನ ಸೆಳೆಯುತ್ತಾರೆ. ಯಾವುದೇ ವಿಚಾರ ಇದ್ದರೂ ನೇರ ಮಾತುಗಳಲ್ಲಿ ಹೇಳುತ್ತಾರೆ. ಯಾರೇ ಪ್ರಶ್ನೆ ಮಾಡಿದರೂ ಅವರಿಗೆ ಉತ್ತರ ನೀಡುತ್ತಾರೆ. ಇಂಥ ವಿಶಾಲ್ ಅವರು ಈಗ ಸಖತ್ ಡಲ್ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಮದ ಗಜ ರಾಜ’ ಸಿನಿಮಾದ ಪ್ರೀ ರಿಲೀಸ್ ಈವೆಂಟ್ಗೆ ಆಗಮಿಸಿದ್ದರು. ಆಗ ಅವರ ಕೈ ನಡುಗಿದೆ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.


ಚೆನ್ನೈನಲ್ಲಿ ಇತ್ತೀಚೆಗೆ ‘ಮದ ಗಜ ರಾಜ’ ತಂಡದವರು ಅದ್ದೂರಿಯಾಗಿ ಪ್ರೀ-ರಿಲೀಸ್ ಈವೆಂಟ್ ಮಾಡಿದರು. ಈ ಚಿತ್ರಕ್ಕೆ ವಿಶಾಲ್ ಹೀರೋ. ಹೀಗಾಗಿ, ಅವರು ಕೂಡ ವೇದಿಕೆ ಏರಿದ್ದರು. ಅವರು ಮಾತನಾಡುವಾಗ ಕೈ ನಡುಗುತ್ತಿತ್ತು. ಮಾತುಗಳನ್ನಾಡಲು ಕಷ್ಟಪಟ್ಟರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಶಾಲ್ಗೆ ಏನಾಯಿತು ಎಂದು ಫ್ಯಾನ್ಸ್ ಆತಂಕ ಹೊರಹಾಕಿದ್ದಾರೆ.

ವಿಶಾಲ್ ಅವರು ಮಾತನಾಡುವಾಗ ಮೈಕ್ನ ಗಟ್ಟಿ ಹಿಡಿದು ಮಾತನಾಡುತ್ತಿದ್ದರು. ಅವರ ಮಾತುಗಳು ನೇರವಾಗಿ ಇರುತ್ತಿದ್ದವು. ಆದರೆ, ಮೊದಲಿದ್ದ ವಿಶಾಲ್ ಈಗ ಕಾಣೆ ಆಗಿದ್ದಾರೆ. ಈಗ ಕೇಳಿ ಬರುತ್ತಿರುವ ಸ್ಪಷ್ಟನೆ ಏನೆಂದರೆ ಅವರಿಗೆ ಆ ಸಂದರ್ಭದಲ್ಲಿ ತೀವ್ರ ಜ್ವರ ಇತ್ತು. ಆದಗ್ಯೂ ಅವರು ವೇದಿಕೆ ಏರಿ ಮಾತನಾಡಿದ್ದರು. ಜ್ವರ ಇದ್ದ ಕಾರಣದಿಂದಲೇ ಅವರಿಗೆ ನಡುಕ ಶುರುವಾಗಿತ್ತು ಎನ್ನಲಾಗಿದೆ.
ಸದ್ಯ ವಿಶಾಲ್ ಬಗ್ಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಜ್ವರದ ಮಧ್ಯೆಯೂ ಅವರು ಕಮಿಟ್ಮೆಂಟ್ ಮರೆಯಲಿಲ್ಲ ಎಂದು ಅನೇಕರು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ‘ವಿಶಾಲ್ ಡೆಡಿಕೇಷನ್. ಅವರು ಜ್ವರದ ಮಧ್ಯೆಯೂ ಸಿನಿಮಾ ಪ್ರಮೋಟ್ ಮಾಡಿದ್ದಾರೆ’ ಎಂದಿದ್ದಾರೆ ಅಭಿಮಾನಿಗಳು.
‘ಮದ ಗಜ ರಾಜ’ ಸಿನಿಮಾದಲ್ಲಿ ಅಂಜಲಿ, ಸೋನು ಸೂದ್, ವರಲಕ್ಷ್ಮೀ ಶರತ್ಕುಮಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾನ ಸುಂದರ್ ಸಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ 2013ರಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, 12 ವರ್ಷಗಳ ಬಳಿಕ ಸಿನಿಮಾ ರಿಲೀಸ್ ಆಗುತ್ತಿದೆ. ಜನವರಿ 12ರಂದು ಸಿನಿಮಾ ಬಿಡುಗಡೆ ಆಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!