ಭಿಕ್ಷುಕನ ಜೊತೆ ಓಡಿ ಹೋದ ಆರು ಮಂದಿ ಮಕ್ಕಳ ತಾಯಿ.

ಈ ಸಮಾಜದಲ್ಲಿ ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳನ್ನು ನೋಡಿದಾಗ ತಲೆ ಗಿರ್ ಎನ್ನುತ್ತೆ. ಇದೀಗ ಇಲ್ಲೊಂದು ಅಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯೊಬ್ಬರು ಭಿಕ್ಷುಕನ ಜೊತೆ ಓಡಿ ಹೋಗಿದ್ದಾರೆ. ಹೌದು ಆಕೆ ಗಂಡ ಹಾಗೂ ತನ್ನ ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಎಸ್ಕೇಪ್ ಆಗಿದ್ದಾರೆ. ಈ ಸುದ್ದಿ ಇದೀಗ ಸಖತ್ ವೈರಲ್ ಆಗುತ್ತಿದೆ.
ವಿವಾಹಿತ ಪುರುಷ ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಇಟ್ಟುಕೊಂಡಂತಹ, ಮದುವೆಯಾದ ಮಹಿಳೆ ಗಂಡ ಮಕ್ಳನ್ನು ಬಿಟ್ಟು ಹಣದಾಸೆಗೆ ಪ್ರೇಮಿಯೊಂದಿಗೆ ಓಡಿ ಹೋದಂತಹ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಿವಾಹಿತ ಮಹಿಳೆಯೊಬ್ಬರು ಭಿಕ್ಷುಕನ ಜೊತೆ ಓಡಿ ಹೋಗಿದ್ದಾರೆ. ಹೌದು ಆಕೆ ಗಂಡ ಹಾಗೂ ತನ್ನ ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಎಸ್ಕೇಪ್ ಆಗಿದ್ದಾರೆ. ಈ ಸುದ್ದಿ ಇದೀಗ ಸಖತ್ ವೈರಲ್ ಆಗುತ್ತಿದೆ.
ಸಾಂದರ್ಭಿಕ ಚಿತ್ರ
ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ವಿಚಿತ್ರ ಪ್ರಕರಣ ನಡೆದಿದ್ದು, 36 ವರ್ಷ ವಯಸ್ಸಿನ ಮಹಿಳೆಯೊಬ್ಬರು ತನ್ನ ಪತಿ ಹಾಗೂ ಆರು ಮಕ್ಕಳನ್ನು ತೊರೆದು ಭಿಕ್ಷುಕನೊಂದಿಗೆ ಓಡಿ ಹೋಗಿದ್ದಾರೆ. ಈ ಬಗ್ಗೆ ಆಕೆಯ ಪತಿ ರಾಜು ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 87ರ ಅಡಿಯಲ್ಲಿ ಅಪಹರಣ ಸಂಬಂಧಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳೆ ಹಾಗೂ ಭಿಕ್ಷುಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ದೂರಿನಲ್ಲಿ, ಮಹಿಳೆಯ ಪತಿ 45 ವರ್ಷ ವಯಸ್ಸಿನ ರಾಜು, ತಮ್ಮ ಪತ್ನಿ ರಾಜೇಶ್ವರಿ ಮತ್ತು ಆರು ಮಕ್ಕಳೊಂದಿಗೆ ಹರ್ದೋಯ್ನ ಹರ್ಪಾಲ್ಪುರ ಪ್ರದೇಶದಲ್ಲಿ ನಾವು ವಾಸವಿದ್ದೆವು. ನಮ್ಮ ಊರಿಗೆ ಆಗಾಗ್ಗೆ ಸುಮಾರು 45 ವರ್ಷ ವಯಸ್ಸಿನ ನನ್ಹೆ ಪಂಡಿತ್ ಎಂಬ ಭಿಕ್ಷು ಭಿಕ್ಷೆ ಬೇಡಲು ಬರುತ್ತಿದ್ದನು. ಮತ್ತು ನನ್ನ ಪತ್ನಿಯೊಂದಿಗೆ ಮಾತುಕತೆಯನ್ನು ಕೂಡಾ ನಡೆಸುತ್ತಿದ್ದ. ನಂತರ ಇವರಿಬ್ಬರು ಫೋನ್ನಲ್ಲಿಯೂ ಸಂಪರ್ಕದಲ್ಲಿದ್ದರು ಎಂದು ಉಲ್ಲೇಖಿಸಿದ್ದಾರೆ.
ಜನವರಿ 3ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ನನ್ನ ಪತ್ನಿ ರಾಜೇಶ್ವರಿ, ನಮ್ಮ ಮಗಳು ಖುಷ್ಬೂಗೆ ಬಟ್ಟೆ, ತರಕಾರಿ ಖರೀದಿಸಲು ಮಾರುಕಟ್ಟೆಗೆ ಹೋಗುವುದಾಗಿ ಹೇಳಿ ಹೋದವಳು ವಾಪಸ್ ಬಂದೇ ಇಲ್ಲ. ನಂತರ ಆಕೆ ಓಡಿ ಹೋಗಿದ್ದಾಳೆ ಎಂಬುದು ಗೊತ್ತಾಗಿದೆ. ನಾನು ಎಮ್ಮೆ ಮಾರಿ ಕೂಡಿಟ್ಟ ಹಣವನ್ನು ಎಗರಿಸಿ ಭಿಕ್ಷುಕನೊಂದಿದೆ ಹೆಂಡ್ತಿ ಓಡಿ ಹೋಗಿರುವ ಶಂಕೆ ಇದೆ” ಎಂದು ರಾಜು ದೂರಿನಲ್ಲಿ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 87 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಇದೀಗ ಪೊಲೀಸರು ಭಿಕ್ಷುಕ ಹಾಗೂ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!