ಬರೋಬ್ಬರಿ 8 ತಿಂಗಳು ಫ್ರಿಡ್ಜ್ನಲ್ಲೇ ಇತ್ತು ಮೃ*ದೇಹ!

ಭೋಪಾಲ್ :- ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನೇ ಹೋಲುವಂತಹ ಭೀಕರ ಕೃತ್ಯವೊಂದು ಬೆಳಕಿಗೆ ಬಂದಿದೆ. ವಿವಾಹಿತನೊಬ್ಬ ಲಿವ್ಇನ್ ರಿಲೇಶನ್ ಶಿಪ್ನಲ್ಲಿದ್ದ ಸ್ನೇಹಿತೆಯನ್ನ ಕೊಂದು, ಮೃತದೇಹದ ಕೈಗಳನ್ನು ಕುತ್ತಿಗೆಗೆ ಬಲವಾಗಿ ಕಟ್ಟಿ ಫ್ರಿಡ್ಜ್ನಲ್ಲಿಟ್ಟಿದ್ದ ಭೀಬತ್ಸ ಕೃತ್ಯ ಮಧ್ಯಪ್ರದೇಶದ ದೇವಾಸ್ ನಗರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಬರೋಬ್ಬರಿ 8 ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿ ಸಂಜಯ್ ಪಾಟಿದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಉಜ್ಜಯಿನಿ ನಿವಾಸಿಯಾಗಿರುವ ಆರೋಪಿ ಸಂಜಯ್ ಪಾಟಿದಾರ್ ಕಳೆದ ಐದು ವರ್ಷಗಳಿಂದ ಪ್ರತಿಭಾ ಯಾನೆ ಪಿಂಕಿ ಪ್ರಜಾಪತಿ ಜೊತೆ ಲಿವ್ಇನ್ ಸಂಬಂಧದಲ್ಲಿದ್ದ. ಆದರೆ ಆಕೆ ತನ್ನನ್ನು ಮದುವೆಯಾಗು ಎಂದು ಒತ್ತಾಯಿಸಲು ಶುರುಮಾಡಿದ್ದಾಳೆ. ಅದಾಗಲೇ ಮದುವೆಯಾಗಿದ್ದ ಸಂಜಯ್ ಪಾಟಿದಾರ್, ಮದುವೆಗೆ ನಿರಾಕರಿಸಿದ್ದ. ಪ್ರತಿಭಾ ಮತ್ತಷ್ಟು ಪೀಡಿಸುತ್ತಿದ್ದಂತೆ ತನ್ನ ಸ್ನೇಹಿತ ವಿನೋದ್ ದವೆಯನ್ನು ಕರೆಸಿಕೊಂಡಿದ್ದ ಸಂಜಯ್, ಪ್ರತಿಭಾಳನ್ನು ಕೊಲೆ ಮಾಡಿ ಮೃತದೇಹವನ್ನ ಫ್ರಿಡ್ಜ್ನಲ್ಲಿಟ್ಟು ಮನೆ ಖಾಲಿ ಮಾಡಿದ್ದ.
ಸಂಜಯ್ ಬಾಡಿಗೆ ಪಡೆದಿದ್ದ ಮನೆಯ ಫ್ರಿಡ್ಜ್ನಲ್ಲಿ ಮೃತದೇಹವನ್ನಿಟ್ಟಿದ್ದ. ಶ್ರೀವಾಸ್ತವ ಎಂಬವರಿಂದ ಮನೆಯನ್ನು ಬಾಡಿಗೆ ಪಡೆದಿದ್ದ ಸಂಜಯ್, ವರ್ಷದ ಹಿಂದೆಯೇ ಮನೆ ಬಿಟ್ಟಿದ್ದ. ಆದಾಗ್ಯೂ ಆಗಾಗ ಬಂದು ಹೋಗುವುದನ್ನು ಮಾಡುತ್ತಿದ್ದ. ಅಲ್ಲದೆ, ಕೆಲವು ವಸ್ತುಗಳನ್ನು ಅಧ್ಯಯನ ಕೊಠಡಿ ಮತ್ತು ಮಾಸ್ಟರ್ ಬೆಡ್ರೂಮ್ನಲ್ಲಿ ಇರಿಸುವುದನ್ನು ಮುಂದುವರೆಸಿದ್ದ. ಹೀಗಾಗಿ ಮನೆ ಮಾಲೀಕರಿಗೂ ಹೆಚ್ಚಿನ ವಿಚಾರ ಗೊತ್ತಿರಲಿಲ್ಲ.
ಇತ್ತೀಚೆಗೆ, ನೆರೆ ಮನೆಯವರು ಅನುಮಾನ ಬಂದು ಮನೆಯ ಬಾಗಿಲು ತೆರೆಯುವಂತೆ ಮಾಲೀಕರನ್ನು ಕೇಳಿದ್ದರು. ಹಾಗೆ ಬಾಗಿಲು ತೆರೆದಾಗ ಪಾಟಿದಾರ್ಗೆ ಸಂಬಂಧಿಸಿದ ವಸ್ತುಗಳು ಒಳಗಿದ್ದ ಕಾರಣ ಮತ್ತೆ ಲಾಕ್ ಮಾಡಿದ್ದರು. ಆದರೆ, ಬುಧವಾರದಿಂಧ ವಿದ್ಯುತ್ ಸರಬರಾಜನ್ನು ಆಫ್ ಮಾಡಿದ್ದರು. ಇದರಿಂದಾಗಿ ಫ್ರಿಡ್ಜ್ನಲ್ಲಿದ್ದ ಮೃತದೇಹದ ವಾಸನೆ ಅಕ್ಕಪಕ್ಕದ ಮನೆಯವರಿಗೆ ಬಂದಿತ್ತು ಎಂದು ಪೊಲೀಸ್ ಅಧಿಕಾರಿ ಅಮಿತ್ ಸೋಲಂಕಿ ಎಂಬವರು ತಿಳಿಸಿದ್ದಾರೆ.
ಸೀರೆಯುಟ್ಟುಕೊಂಡು, ಆಭರಣ ತೊಟ್ಟು, ಅಲಂಕರಿಸಿಕೊಂಡು, ಕುತ್ತಿಗೆಯನ್ನು ತನ್ನ ಕೈಗಳಿಂದ ತಾನೇ ಬಲವಾಗಿ ಬಿಗಿಯಾಗಿ ಕಟ್ಟಿಕೊಂಡು ಕುಳಿತಿರುವ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು. ಫ್ರಿಡ್ಜ್ ತೆರೆದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಭಯಾನಕ ಸತ್ಯ ಬಯಲಾಗಿದೆ.
ಯುವತಿಯನ್ನು 2024ರ ಜೂನ್ನಲ್ಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಂಜಯ್ ಪಡೆದಿದ್ದ ಬಾಡಿಗೆ ಮನೆಯಿಂದ ದುರ್ವಾಸನೆ ಬರಲು ಆರಂಭಿಸಿದ್ದರಿಂದ ನೆರೆಮನೆಯವರು ಮನೆಯ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಮನೆ ಮಾಲೀಕ ಬಂದು ನೋಡಿದಾಗ ಮಹಿಳೆಯ ಮೃತದೇಹ ಫ್ರಿಡ್ಜ್ನಲ್ಲಿರುವುದು ಗೊತ್ತಾಗಿದೆ ಎಂದು ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಟ್ ಮಾಹಿತಿ ನೀಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!