ಹನುಮಂತನಿಗೆ ಅವಮಾನ: ರಿಷಬ್ ಶೆಟ್ಟಿ ಹಾಗೂ ತಂಡದ ವಿರುದ್ಧ ದಾಖಲಾಗಿದೆ ದೂರು.

ರಿಷಬ್ ಶೆಟ್ಟಿ ಇದೀಗ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರ ಜೊತೆಗೆ ಕೆಲ ಪರಭಾಷೆ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ರಿಷಬ್ ಅವರ ಪರಭಾಷೆ ಸಿನಿಮಾ ಇಕ್ಕಟ್ಟಿನಲ್ಲಿ ಸಿಲುಕಿದೆ. ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಮೇಲೆ ದೂರು ದಾಖಲಾಗಿದೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ 2’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ರಿಷಬ್ ಶೆಟ್ಟಿಗೆ ತೆಲುಗು, ಹಿಂದಿ ಚಿತ್ರರಂಗದಿಂದ ಒಂದರ ಹಿಂದೊಂದು ಆಫರ್ಗಳು ಬರುತ್ತಲೇ ಇವೆ. ‘ಹನುಮ್ಯಾನ್’ ಸಿನಿಮಾ ನಿರ್ದೇಶಿಸಿ ಸೂಪರ್ ಹಿಟ್ ನೀಡಿರುವ ಪ್ರಶಾಂತ್ ವರ್ಮಾ ಅವರ ಮುಂದಿನ ತೆಲುಗು ಸಿನಿಮಾ ‘ಜೈ ಹನುಮಾನ್’ನಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ. ಸಿನಿಮಾದ ಪೋಸ್ಟರ್ ಹಾಗೂ ಕಿರು ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಅದರ ಬೆನ್ನಲ್ಲೆ ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡದ ವಿರುದ್ಧ ದೂರು ಸಹ ದಾಖಲಾಗಿದೆ.
‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಆಂಜನೇಯ ಸ್ವಾಮಿಯ ಪಾತ್ರದಲ್ಲಿ ನಟಿಸಲಿದ್ದಾರೆ. ಈಗ ಬಿಡುಗಡೆ ಆಗಿರುವ ಪೋಸ್ಟರ್ನಲ್ಲಿ ರಿಷಬ್ ಶೆಟ್ಟಿ ಉದ್ದನೆಯ ಗಡ್ಡ ಬಿಟ್ಟುಕೊಂಡು, ಉದ್ದನೆಯ ಕೂದಲು ಬಿಟ್ಟುಕೊಂಡು ಶ್ರೀರಾಮನ ಮೂರ್ತಿಯನ್ನು ಅಪ್ಪಿಕೊಂಡಿರುವ ಚಿತ್ರ ಇದೆ. ಟೀಸರ್ನಲ್ಲೂ ಬಹುತೇಕ ಇದೇ ಇತ್ತು. ಈ ಹಿಂದೆ ಭಾರತೀಯ ಚಿತ್ರರಂಗದಲ್ಲಿ ನಿರ್ಮಿಸಲಾಗಿರುವ ಎಲ್ಲ ಪೌರಾಣಿಕ ಸಿನಿಮಾಗಳಲ್ಲಿ ಹನುಮಂತನ ಪಾತ್ರವನ್ನು ತೋರಿಸಿದ್ದಕ್ಕಿಂತಲೂ ಭಿನ್ನವಾಗಿ ‘ಜೈ ಹನುಮಾನ್’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.
ಹನುಮಂತನ ಮುಖವನ್ನೇ ‘ಜೈ ಹನುಮಾನ್’ ಸಿನಿಮಾದಲ್ಲಿ ಬದಲಾಯಿಸಲಾಗಿದೆ. ಎಲ್ಲರಿಗೂ ತಿಳಿದಿರುವಂತೆ ಹನುಮಂತನ ಮುಖ ವಾನರ ಮುಖವನ್ನು ಹೋಲುತ್ತದೆ. ಆದರೆ ‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿಯ ಮುಖವನ್ನು ಸಾಮಾನ್ಯ ಮನುಷ್ಯನ ಮುಖದಂತೆಯೇ ತೋರಿಸಲಾಗಿದೆ. ವಾನರನ ರೀತಿ ಹನುಮಂತನನ್ನು ತೋರಿಸಿಲ್ಲ ಇದೇ ಕಾರಣಕ್ಕೆ ಈಗ ವಕೀಲ ತಿರುಮಲ ರಾವ್ ಎಂಬುವರು ನಾಂಪಲ್ಲಿ ನ್ಯಾಯಾಲಯದಲ್ಲಿ ಸಿನಿಮಾದ ನಿರ್ದೇಶಕ ಪ್ರಶಾಂತ್ ವರ್ಮಾ, ರಿಷಬ್ ಶೆಟ್ಟಿ, ಸಿನಿಮಾದ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ವಿರುದ್ಧ ದೂರು ದಾಖಲಿಸಿದ್ದಾರೆ.
ಹನುಮಂತನ ಮುಖವನ್ನೇ ಬದಲಾಯಿಸುವ ಮೂಲಕ, ಹನುಮನ ಪಾತ್ರವನ್ನು ತಿದ್ದುವ ಕೆಲಸ ಮಾಡಲಾಗಿದೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡುವ ಕಾರ್ಯ ಇದಾಗಿದ್ದು, ಶೀಘ್ರವೇ ಸಿನಿಮಾದ ಪೋಸ್ಟರ್, ಟೀಸರ್ಗಳನ್ನು ಹಿಂಪಡೆಯುವಂತೆ ಆದೇಶಿಸಬೇಕೆಂದು ವಕೀಲ ತಿರುಮಲ ವರ್ಮಾ ಅರ್ಜಿ ದಾಖಲಿಸಿದ್ದಾರೆ. ರಿಷಬ್ ಶೆಟ್ಟಿಯ ‘ಜೈ ಹನುಮಾನ್’ ಸಿನಿಮಾ ರಾಮಾಯಣದ ನಂತರದ ಕತೆಯನ್ನು ಒಳಗೊಂಡಿದೆಯಂತೆ. ರಾಮನಿಗೆ ಹನುಮಂತ ನೀಡಿರುವ ಪ್ರತಿಜ್ಞೆಯ ಕತೆ ಇದಾಗಿದೆಯಂತೆ. ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ನಟಿಸಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!