3ನೇ ಕ್ಲಾಸ್ ಬಾಲಕಿಗೆ ಹೃದಯಾಘಾತ ಅಹಮದಾಬಾದ್ ಶಾಲೆಯಲ್ಲಿ ಘಟನೆ.

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಶಾಲೆಯ ಕಾರಿಡಾರ್ನಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾಳೆ. ಗಾರ್ಗಿ ರಣಪರಾ ಎಂಬ 8 ವರ್ಷದ ಬಾಲಕಿ ನಿನ್ನೆ ಬೆಳಿಗ್ಗೆ ಥಲ್ತೇಜ್ ಪ್ರದೇಶದಲ್ಲಿರುವ ಜೆಬಾರ್ ಶಾಲೆಯಲ್ಲಿ ಕುಸಿದು ಬಿದ್ದಿದ್ದಾಳೆ. ಕ್ಲಾಸ್ರೂಮಿನ ಹೊರಗಿದ್ದ ಕಾರಿಡಾರ್ನಲ್ಲೇ ಬಾಲಕಿ ಕುಸಿದುಬಿದ್ದಿದ್ದಾಳೆ. ತಕ್ಷಣ ಶಿಕ್ಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅವಳು ಅಷ್ಟರಲ್ಲಾಗಲೇ ಮೃತಪಟ್ಟಿದ್ದಳು.
ಶಾಲಾ ಆಡಳಿತ ಮಂಡಳಿ ಹಂಚಿಕೊಂಡ ಸಿಸಿಟಿವಿ ವೀಡಿಯೊದಲ್ಲಿ, ಗಾರ್ಗಿ ರಣಪರಾ ಲಾಬಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆದರೆ ದಾರಿಯಲ್ಲಿ, ಅವಳು ಸುಸ್ತಾಗಿ ಲಾಬಿಯಲ್ಲಿ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾಳೆ. ನಂತರ ಶಿಕ್ಷಕರು ಮತ್ತು ಇತರ ವಿದ್ಯಾರ್ಥಿಗಳು ನೋಡನೋಡುತ್ತಿದ್ದಂತೆ ಆಕೆ ಪ್ರಜ್ಞೆ ತಪ್ಪಿ ಬೀಳುತ್ತಾಳೆ. ಅವಳು ಉಸಿರಾಟದ ತೊಂದರೆ ಅನುಭವಿಸುತ್ತಿದ್ದರಿಂದ ಶಿಕ್ಷಕರು ಅವಳಿಗೆ ಸಿಪಿಆರ್ ನೀಡಿ ಆಂಬ್ಯುಲೆನ್ಸ್ಗೆ ಕರೆ ಮಾಡಿದರು. ಆದರೆ, ಆಸ್ಪತ್ರೆಗೆ ಹೋಗುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು.
ಈ ವಾರದ ಆರಂಭದಲ್ಲಿ ಇದೇ ರೀತಿಯ ಘಟನೆ ಕರ್ನಾಟಕದ ಚಾಮರಾಜನಗರದಲ್ಲಿ ನಡೆದಿತ್ತು. ಇಲ್ಲಿನ 8 ವರ್ಷದ 3ನೇ ತರಗತಿ ವಿದ್ಯಾರ್ಥಿನಿ ಶಾಲೆಯಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಅದೇ ರೀತಿಯ ಘಟನೆ ಅಹಮದಾಬಾದ್ ಶಾಲೆಯಲ್ಲಿ ನಡೆದಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!