ದಕ್ಷಿಣ ಡೈರಿ ಶೃಂಗಸಭೆ-2025 ರ ‘ಅತ್ಯುತ್ತಮ ಹೈನುಗಾರ್ತಿ’ ಪ್ರಶಸ್ತಿ ಸ್ವೀಕರಿಸಿದ ಪಾಂಡವಪುರದ ರೈತ ಮಹಿಳೆ ಮಂಗಳಮ್ಮ.

ಪಾಂಡವಪುರ :- ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಡಿಂಕ ಗ್ರಾಮದ ಅವಿದ್ಯಾವಂತ ರೈತ ಮಹಿಳೆಯೋರ್ವರು ಹೈನುಗಾರಿಕೆಯಿಂದಲೇ ಸಾಧನೆಗೈದು ಶನಿವಾರ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ‘ಅತ್ಯುತ್ತಮ ಹೈನು ಗಾರ್ತಿ’ ಪ್ರಶಸ್ತಿ ಸ್ವೀಕರಿಸಿದರು.
ಭಾರತೀಯ ಡೈರಿ ಅಸೋಸಿಯೇಷನ್, ದಕ್ಷಿಣ ವಲಯ ಆಯೋಜಿಸಿದ್ದ ದಕ್ಷಿಣ ಡೈರಿ ಶೃಂಗಸಭೆ-2025ರ ಅಂತಿಮ ದಿನವಾದ ಶನಿ ವಾರದಂದು ದಕ್ಷಿಣ ಭಾರತದ ಮಹಿಳಾ ಡೈರಿ ರೈತರ ಶ್ರಮವನ್ನು ಪುರಸ್ಕರಿಸಿ ರಾಜ್ಯವಾರು 2024ರ ‘ಅತ್ಯುತ್ತಮ ಹೈನುಗಾರ್ತಿ’ ಪ್ರಶಸ್ತಿ ಪ್ರದಾನ ಮಾಡಿದ್ದು, ಕರ್ನಾಟಕದಿಂದ ಪಾಂಡವ ಪುರ ತಾಲೂಕಿನ ಡಿಂಕ ಗ್ರಾಮದ ಮಂಗಳಮ್ಮ ಈ ಪ್ರಶಸ್ತಿ ಪಡೆದರೆ, ಆಂಧ್ರಪ್ರದೇಶದಿಂದ ನವೀನಕುಮಾರಿ, ಕೇರಳ ಮತ್ತು ಲಕ್ಷದ್ವೀಪ ದಿಂದ ವಿಧು ರಾಜೀವ್, ತೆಲಂಗಾಣದಿಂದ ಪುಧಾರಿ ಗಂಗವ್ವ ಮತ್ತು ಪುದುಚೇರಿಯಿಂದ ಸೆಲ್ವನಾಯಕಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡ ಲಾಯಿತು. ಈ ಸಮಾರಂಭದಲ್ಲಿ ರಾಜ್ಯದ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾಧಕ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪಾಂಡವಪುರ ತಾಲೂಕು ಡಿಂಕ ಗ್ರಾಮದ ಮಹದೇವಪ್ಪ ಅವರ ಪತ್ನಿ ಮಂಗಳಮ್ಮ ಓದಿದ್ದು ಕೇವಲ 5ನೇ ತರಗತಿ. ಆದರೆ ತಮಗಿದ್ದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡುತ್ತಾ ಸುಮಾರು 20 ವರ್ಷಗಳ ಹಿಂದೆ ಒಂದು ಹಸುವನ್ನು ಸಾಕಲಾರಂಭಿಸಿದರು. ನಂತರ ಹಂತ-ಹಂತವಾಗಿ ಈಗ 30 ಹಸು ಗಳಿರುವ ಫಾರಂ ಅನ್ನೇ ತಮ್ಮ ಜಮೀನಿನಲ್ಲಿ ಸ್ಥಾಪಿಸಿದ್ದಾರೆ. ಅಲ್ಲದೇ ಅದೇ ಜಮೀನಿನ
ಪ್ರಶಸ್ತಿ ಸ್ವೀಕರಿಸಿದ ನಂತರ ಡಿಂಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಹಾಗೂ ಇನ್ನಿತರರೊಂದಿಗೆ ಬಹುಮಾನ ಚೆಕ್ ಪ್ರದರ್ಶಿಸುತ್ತಿರುವ ಮಂಗಳಮ್ಮಒಂದು ಭಾಗದಲ್ಲಿ ಹಸಿಗಳಿಗೆ ಮೇವು ಬೆಳೆಸುತ್ತಿದ್ದಾರೆ. ಡಿಂಕ ಗ್ರಾಮದ ಹಾಲು ಉತ್ಪಾದಕರ ಸಹ ಕಾರಿ ಸಂಘದ ಸದಸ್ಯರಾಗಿರುವ ಮಂಗಳಮ್ಮ 2024ನೇ ವರ್ಷದಲ್ಲಿ ಡೈರಿಗೆ 1,01,915 ಲೀಟರ್ ಹಾಲು ಸರಬರಾಜು ಮಾಡಿ 33 ಲಕ್ಷ ರೂ. ಆದಾಯ ಗಳಿಸುವ ಮೂಲಕ ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ದಕ್ಷಿಣ ಡೈರಿ ಶೃಂಗಸಭೆಯಲ್ಲಿ ಅತ್ಯುತ್ತಮ ಹೈನುಗಾರ್ತಿ ಪ್ರಶಸ್ತಿ ಪಡೆದಿದ್ದಾರೆ.
ಈಕೆ ಅವಿದ್ಯಾವಂತೆಯಾದರೂ, ಹಾಲು ಮಾರಿದ ಹಣದಲ್ಲೇ ತಮ್ಮ ಪುತ್ರ ದಿನೇಶ್ ನನ್ನು ಐಟಿಐವರೆಗೆ ಓದಿಸಿದ್ದಲ್ಲದೇ, ಪುತ್ರಿ ದಿವ್ಯಾರನ್ನು ಇಂಜಿನಿಯರಿಂಗ್ ಪದವೀಧರೆ ಮಾಡಿದ್ದಾರೆ. ಈಗ ಐಟಿಐ ಓದಿರುವ ದಿನೇಶ್ ಅವರು ತನ್ನ ತಂದೆ ಮತ್ತು ತಾಯಿಗೆ ಹಸುಗಳ ಫಾರಂನಲ್ಲಿ ಸಹಾಯಕರಾಗಿದ್ದು, ಹೈನುಗಾರಿಕೆಯಲ್ಲಿ ತಾಯಿಯ ಜೊತೆ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಡಿಂಕ ಗ್ರಾಮದ ಮಂಗಳಮ್ಮ ಅವರು ತಮ್ಮ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಜಿಲ್ಲೆಯಲ್ಲಿಯೇ ಹೆಚ್ಚು ಪ್ರಮಾಣದ ಹಾಲು ಸರಬರಾಜು ಮಾಡುವ ಮೂಲಕ ಕಳೆದ ವರ್ಷ 33 ಲಕ್ಷ ರೂ. ಸಂಪಾದನೆ ಮಾಡುವ ಮೂಲಕ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಂಡಿದ್ದು ಮಾತ್ರವಲ್ಲದೆ, ದಕ್ಷಿಣ ಡೈರಿ ಶೃಂಗ ಸಭೆಯಲ್ಲಿ ಪ್ರಶಸ್ತಿ ಪಡೆಯುವ ಮೂಲಕ ಮಂಡ್ಯ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆ ಎನಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು