ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯ 4ನೇ ದಿನವಾದ ಭಾನುವಾರ ಪಂಕ್ತಿಸೇವೆ ನಿರ್ವಿಘ್ನದಿಂದ ನಡೆಯಿತು. ದೇಗುಲ ಆವರಣ ಬಿಟ್ಟು ಖಾಸಗಿ ಜಮೀನುಗಳಲ್ಲಿ ಬಿಡಾರ ಹೂಡಿದ್ದ ಭಕ್ತರು, ಮಾಂಸದ ಅಡುಗೆ ಮಾಡಿ ಪಂಕ್ತಿಸೇವೆ ನಡೆಸಿದರು.
ಚಿಕ್ಕಲ್ಲೂರು ಕ್ಷೇತ್ರದಲ್ಲಿ 5 ಹಗಲು, 5 ರಾತ್ರಿ ಜಾತ್ರೆ ನಡೆಯಲಿದ್ದು, 4ನೇ ದಿನದಂದು ಪಂಕ್ತಿಸೇವೆ ನಡೆಸಲಾಗುತ್ತದೆ. ಅದರಂತೆ, ಲಕ್ಷಾಂತರ ಮಂದಿ ಭಕ್ತರು ದೇವರಿಗೆ ಅನ್ನ, ಮುದ್ದೆ, ಮಾಂಸದ ಭಕ್ಷ್ಯಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿ ಸಹಪಂಕ್ತಿ ಭೋಜನ ಸವಿದಿದ್ದಾರೆ. ಐತಿಹಾಸಿಕ, ಭಕ್ತಿ ಪರಾಕಾಷ್ಠೆಯ ಜಾತ್ರೆ ಎಂದೇ ಜನಜನಿತವಾಗಿರುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಸಾವಿರಾರು ಮಂದಿ ಭಕ್ತರು ಪಂಕ್ತಿಸೇವೆ ಸಲ್ಲಿಸಿ ತಮ್ಮ ನಂಬಿಕೆ, ಭಕ್ತಿ ಅಚಲ ಎಂದು ಸಾರಿದರು.

ಮಾಂಸದ ಭಕ್ಷ್ಯ ತಯಾರಿಸಿ ದೇವರಿಗೆ ಎಡೆ ಇಟ್ಟು ಬಳಿಕ ಸಹಪಂಕ್ತಿ ಭೋಜನ ಮಾಡುವ ಆಚರಣೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿತ್ತು. ಜಿಲ್ಲಾಡಳಿತ ಪ್ರಾಣಿ ಬಲಿ ನಿಷೇಧಿಸಿ ಹದ್ದಿನ ಕಣ್ಣಿಟ್ಟಿತ್ತು. ಆಚರಣೆಯನ್ನು ಬಿಡಲೊಪ್ಪದ ಜನರು ದೇವಾಲಯ ಆವರಣದಿಂದ ದೂರದ ಪ್ರದೇಶದಲ್ಲಿ ಮಾಂಸದ ಅಡುಗೆ ತಯಾರಿಸಿ ಶ್ರದ್ಧೆ-ಭಕ್ತಿಯಿಂದ ಎಡೆ ಅರ್ಪಿಸಿದ್ದಾರೆ. ಜಿಲ್ಲೆ ಹೊರ ಜಿಲ್ಲೆಗಳಿಂದ ಬಂದ ಸಾವಿರಾರು ಭಕ್ತರು ಮಾಂಸದೂಟ ತಯಾರಿಸಿ ನೀಲಗಾರರ ಸಂಪ್ರದಾಯಕ್ಕೆ ಅನುಗುಣವಾಗಿ ಎಡೆ ಅರ್ಪಿಸಿ ರಾಚಪ್ಪಾಜಿ, ಸಿದ್ದಾಪ್ಪಾಜಿ ದೇವರಿಗೆ ಮದ್ಯ- ಮಾಂಸ ಅರ್ಪಿಸಿ ಭಕ್ತಿ ಮೆರೆದರು.
ಜಾತ್ರೆಯಲ್ಲಿ ಮಹಿಳಾ ಶಕ್ತಿ ಪ್ರದರ್ಶನ: ಮಹಿಳೆಯರಿಗೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣ ಹಿನ್ನೆಲೆ ಜಾತ್ರೆಗೆ ಮಹಿಳಾ ಸಾಗರವೇ ಹರಿದುಬಂದಿತ್ತು. ಬಸ್ ಗಳಿಗೆ ಹತ್ತಲು ಮಹಿಳೆಯರು ನಾ ಮುಂದೆ- ತಾ ಮುಂದೆ ಎಂದು ಕಿಟಕಿ, ಚಾಲಕರ ಡೋರ್ ಗಳಲ್ಲಿ ಹತ್ತಿದರು. ಕಿಟಕಿಗಳಿಗೆ ಮಕ್ಕಳನ್ನು ತೂರಿಸಿ ಆಸನ ಹಿಡಿಯುವ ಸಾಹಸ ಮಾಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!