ಮಹಾಕುಂಭಮೇಳದಲ್ಲಿ ವೈರಲ್ ಆದ ಮೊನಾಲಿಸಾಗೆ ಬಾಲಿವುಡ್ ನಿಂದ ಬಂತು ಬಂಪರ್ ಆಫರ್.

ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಸುಂದರ ಯುವತಿಯ ಚಿತ್ರ ಇತ್ತೀಚೆಗೆ ವೈರಲ್ ಆಗಿತ್ತು. ಆ ಯುವತಿಯನ್ನು ಮೊನಾಲಿಸಾಗೆ ಹೋಲಿಸಲಾಗಿತ್ತು. ಭಾರತದ ಮೊನಾಲಿಸಾ ಎಂದೇ ಆ ಯುವತಿ ಫೇಮಸ್ ಆಗಿದ್ದರು. ಇದೀಗ ಆ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆತಿದೆ.ಈ ಸೋಷಿಯಲ್ ಮೀಡಿಯಾ ಕಾಲದಲ್ಲಿ ಎಲ್ಲೋ ಇದ್ದವರು ರಾತ್ರಿ ಕಳೆದು ಬೆಳಗಾಗುವದರೊಳಗೆ ಸ್ಟಾರ್ ಆಗಿಬಿಡುತ್ತಾರೆ. ಹಲವರ ಜೀವನವೇ ಬದಲಾಗಿ ಬಿಡುತ್ತದೆ. ಟೀ ಮಾರುವ ಹುಡುಗ ಮಾಡೆಲ್ ಆಗಿದ್ದು, ಭಿಕ್ಷುಕ ಮಾಡೆಲ್ ಆಗಿದ್ದು, ಮೀನು ಮಾರುವ ಹುಡುಗಿ ಫ್ಯಾಷನ್ ಶೋ ಮಾಡಿದ್ದು, ಒಂದು ಕಣ್ಸನ್ನೆಯಿಂದ ಪ್ರಿಯಾ ವಾರಿಯಸ್ ಸ್ಟಾರ್ ಆಗಿದ್ದು ಎಲ್ಲವೂ ಸಾಧ್ಯವಾಗಿದ್ದು ಇದೇ ಸೋಷಿಯಲ್ ಮೀಡಿಯಾದಿಂದ. ಇದೀಗ ಮಹಾಕುಂಭದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಹುಡುಗಿಗೆ ಇದೇ ಸಾಮಾಜಿಕ ಜಾಲತಾಣದಿಂದ ಅದೃಷ್ಟ ಖುಲಾಯಿಸಿದೆ.
ವೈರಲ್ ಹುಡುಗಿ ಮೊನಾಲಿಸಾಗೆ ಬಾಲಿವುಡ್ನಿಂದ ಆಫರ್ ಬಂದಿದೆ. ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿಯೊಬ್ಬಾಕೆಯ ಚಿತ್ರವೊಂದು ಸಖತ್ ವೈರಲ್ ಆಗಿತ್ತು. ಆಕೆಯ ಸೌಂದರ್ಯಕ್ಕೆ ವಿಶೇಷವಾಗಿ ಆಕೆಯ ಸೆಳೆಯುವ ಕಣ್ಣುಗಳಿಗೆ ಜನ ಮಾರು ಹೋಗಿದ್ದರು. ಆ ಯುವತಿಯನ್ನು ಮೊನಾಲಿಸಾಗೆ ಹೋಲಿಸಲಾಗಿತ್ತು. ಭಾರತದ ಮೊನಾಲಿಸಾ ಎಂದೇ ಸಾಮಾಜಿಕ ಜಾಲತಾಣದಲ್ಲಿ ಆ ಚೆಲುವೆ ಫೇಮಸ್ ಆಗಿದ್ದರು. ಇದೀಗ ಬಾಲಿವುಡ್ ಕಣ್ಣು ಯುವತಿ ಮೊನಾಲಿಸಾ ಮೇಲೆ ಬಿದ್ದಿದೆ. ಮೊನಾಲಿಸಾಗೆ ಬಾಲಿವುಡ್ನಿಂದ ಆಫರ್ ಬಂದಿದೆ.ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರ, ಆ ವೈರಲ್ ಯುವತಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ.

ಸನೋಜ್ ಮಿಶ್ರ ‘ಡೈರಿ ಆಫ್ ಮಣಿಪುರ್’ ಹೆಸರಿನ ಸಿನಿಮಾ ಅನ್ನು ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ವೈರಲ್ ಹುಡುಗಿಯೇ ನಾಯಕಿ. ಇದಕ್ಕಾಗಿ ಮೊನಾಲಿಸಾ ಲುಕ್ ಟೆಸ್ಟ್ ಸಹ ನಡೆಸಲಾಗಿದೆ. ವೈರಲ್ ಯುವತಿಗೆ ಮೇಕೋವರ್ ಮಾಡಲಾಗಿದ್ದು, ಮೇಕೊವರ್ ವಿಡಿಯೋ ಇದೀಗ ವೈರಲ್ ಆಗಿದೆ. ಇದು ಮಾತ್ರವೇ ಅಲ್ಲದೆ ಮಹಾಕುಂಭದ ಮೊನಾಲಿಸಾಗೆ ನಟನಾ ತರಬೇತಿಯನ್ನು ಸಹ ಕೊಡಿಸಲಾಗುತ್ತಿದೆ.ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವರಿಗೆ ಸಿನಿಮಾ ಅವಕಾಶಗಳು ಇದು ಮೊದಲೇನೂ ಅಲ್ಲ.
ಈ ಹಿಂದೆ ಬೀದಿಯಲ್ಲಿ ಹಾಡು ಹಾಡುತ್ತಿದ್ದ ರಾನು ಮಂಡಲ್ಗೆ ಬಾಲಿವುಡ್ ಸಿನಿಮಾ ಹಾಡು ಹಾಡುವ ಅವಕಾಶ ನೀಡಲಾಗಿತ್ತು. ಇದರಿಂದಾಗಿ ರಾನು ಮಂಡಲ್ ರಾತ್ರೋರಾತ್ರಿ ಸೆಲೆಬ್ರಿಟಿ ಆಗಿಬಿಟ್ಟಿದ್ದರು. ಕೇರಳದಲ್ಲಿ ಮೀನು ಮಾರುತ್ತಿದ್ದ ಯುವತಿಗೆ ಫ್ಯಾಷನ್ ಶೋನಲ್ಲಿ ಶೋ ಸ್ಟಾಪರ್ ಮಾಡಲಾಗಿತ್ತು. ಮಲಯಾಳಿ ನಟಿ ಪ್ರಿಯಾ ವಾರಿಯರ್ ಸಹ ಸ್ಟಾರ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅವರ ಒಂದು ಸಣ್ಣ ಕ್ಲಿಪ್ನಿಂದಲೇ. ಇದೀಗ ಮಹಾಕುಂಭದ ಮೊನಾಲಿಸಾಳ ಸರದಿ. ಈ ಅವಕಾಶವನ್ನು ಯುವತಿ ಸದುಪಯೋಗ ಪಡಿಸಿಕೊಳ್ಳುತ್ತಾರಾ ಕಾದು ನೋಡಬೇಕಿದೆ. ಸದುಪಯೋಗಪಡಿಸಿಕೊಳ್ಳಲಿ ಎಂಬುದು ಎಲ್ಲ ನೆಟ್ಟಿಗರ ಆಸೆಯಾಗಿದೆ. ಮತ್ತು ಕೆಲವರು , ದೇವರು ಬಡವರಿಗೆ ಐಶ್ವರ್ಯವನ್ನು ಕೊಡುವುದರಲ್ಲಿ ಕಡಿಮೆ ಮಾಡಿದರು ಸೌಂದರ್ಯದ ಕೊರತೆ ಮಾಡಿಲ್ಲ ಎಂದು ಕಾಮೆಂಟ್ ಗಳ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸುತ್ತಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!