ಮಹಾಕುಂಭಮೇಳದಲ್ಲಿ ವೈರಲ್ ಆದ ಮೊನಾಲಿಸಾಗೆ ಬಾಲಿವುಡ್ ನಿಂದ ಬಂತು ಬಂಪರ್ ಆಫರ್.

ಉತ್ತರಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಸುಂದರ ಯುವತಿಯ ಚಿತ್ರ ಇತ್ತೀಚೆಗೆ ವೈರಲ್ ಆಗಿತ್ತು. ಆ ಯುವತಿಯನ್ನು ಮೊನಾಲಿಸಾಗೆ ಹೋಲಿಸಲಾಗಿತ್ತು. ಭಾರತದ ಮೊನಾಲಿಸಾ ಎಂದೇ ಆ ಯುವತಿ ಫೇಮಸ್ ಆಗಿದ್ದರು. ಇದೀಗ ಆ ಯುವತಿಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆತಿದೆ.ಈ ಸೋಷಿಯಲ್ ಮೀಡಿಯಾ ಕಾಲದಲ್ಲಿ ಎಲ್ಲೋ ಇದ್ದವರು ರಾತ್ರಿ ಕಳೆದು ಬೆಳಗಾಗುವದರೊಳಗೆ ಸ್ಟಾರ್ ಆಗಿಬಿಡುತ್ತಾರೆ. ಹಲವರ ಜೀವನವೇ ಬದಲಾಗಿ ಬಿಡುತ್ತದೆ. ಟೀ ಮಾರುವ ಹುಡುಗ ಮಾಡೆಲ್ ಆಗಿದ್ದು, ಭಿಕ್ಷುಕ ಮಾಡೆಲ್ ಆಗಿದ್ದು, ಮೀನು ಮಾರುವ ಹುಡುಗಿ ಫ್ಯಾಷನ್ ಶೋ ಮಾಡಿದ್ದು, ಒಂದು ಕಣ್ಸನ್ನೆಯಿಂದ ಪ್ರಿಯಾ ವಾರಿಯಸ್ ಸ್ಟಾರ್ ಆಗಿದ್ದು ಎಲ್ಲವೂ ಸಾಧ್ಯವಾಗಿದ್ದು ಇದೇ ಸೋಷಿಯಲ್ ಮೀಡಿಯಾದಿಂದ. ಇದೀಗ ಮಹಾಕುಂಭದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಹುಡುಗಿಗೆ ಇದೇ ಸಾಮಾಜಿಕ ಜಾಲತಾಣದಿಂದ ಅದೃಷ್ಟ ಖುಲಾಯಿಸಿದೆ.
ವೈರಲ್ ಹುಡುಗಿ ಮೊನಾಲಿಸಾಗೆ ಬಾಲಿವುಡ್ನಿಂದ ಆಫರ್ ಬಂದಿದೆ. ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಯುವತಿಯೊಬ್ಬಾಕೆಯ ಚಿತ್ರವೊಂದು ಸಖತ್ ವೈರಲ್ ಆಗಿತ್ತು. ಆಕೆಯ ಸೌಂದರ್ಯಕ್ಕೆ ವಿಶೇಷವಾಗಿ ಆಕೆಯ ಸೆಳೆಯುವ ಕಣ್ಣುಗಳಿಗೆ ಜನ ಮಾರು ಹೋಗಿದ್ದರು. ಆ ಯುವತಿಯನ್ನು ಮೊನಾಲಿಸಾಗೆ ಹೋಲಿಸಲಾಗಿತ್ತು. ಭಾರತದ ಮೊನಾಲಿಸಾ ಎಂದೇ ಸಾಮಾಜಿಕ ಜಾಲತಾಣದಲ್ಲಿ ಆ ಚೆಲುವೆ ಫೇಮಸ್ ಆಗಿದ್ದರು. ಇದೀಗ ಬಾಲಿವುಡ್ ಕಣ್ಣು ಯುವತಿ ಮೊನಾಲಿಸಾ ಮೇಲೆ ಬಿದ್ದಿದೆ. ಮೊನಾಲಿಸಾಗೆ ಬಾಲಿವುಡ್ನಿಂದ ಆಫರ್ ಬಂದಿದೆ.ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರ, ಆ ವೈರಲ್ ಯುವತಿಗೆ ತಮ್ಮ ಸಿನಿಮಾದಲ್ಲಿ ಅವಕಾಶ ನೀಡಿದ್ದಾರೆ.

ಸನೋಜ್ ಮಿಶ್ರ ‘ಡೈರಿ ಆಫ್ ಮಣಿಪುರ್’ ಹೆಸರಿನ ಸಿನಿಮಾ ಅನ್ನು ನಿರ್ದೇಶನ ಮಾಡುತ್ತಿದ್ದು, ಆ ಸಿನಿಮಾದಲ್ಲಿ ವೈರಲ್ ಹುಡುಗಿಯೇ ನಾಯಕಿ. ಇದಕ್ಕಾಗಿ ಮೊನಾಲಿಸಾ ಲುಕ್ ಟೆಸ್ಟ್ ಸಹ ನಡೆಸಲಾಗಿದೆ. ವೈರಲ್ ಯುವತಿಗೆ ಮೇಕೋವರ್ ಮಾಡಲಾಗಿದ್ದು, ಮೇಕೊವರ್ ವಿಡಿಯೋ ಇದೀಗ ವೈರಲ್ ಆಗಿದೆ. ಇದು ಮಾತ್ರವೇ ಅಲ್ಲದೆ ಮಹಾಕುಂಭದ ಮೊನಾಲಿಸಾಗೆ ನಟನಾ ತರಬೇತಿಯನ್ನು ಸಹ ಕೊಡಿಸಲಾಗುತ್ತಿದೆ.ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವರಿಗೆ ಸಿನಿಮಾ ಅವಕಾಶಗಳು ಇದು ಮೊದಲೇನೂ ಅಲ್ಲ.
ಈ ಹಿಂದೆ ಬೀದಿಯಲ್ಲಿ ಹಾಡು ಹಾಡುತ್ತಿದ್ದ ರಾನು ಮಂಡಲ್ಗೆ ಬಾಲಿವುಡ್ ಸಿನಿಮಾ ಹಾಡು ಹಾಡುವ ಅವಕಾಶ ನೀಡಲಾಗಿತ್ತು. ಇದರಿಂದಾಗಿ ರಾನು ಮಂಡಲ್ ರಾತ್ರೋರಾತ್ರಿ ಸೆಲೆಬ್ರಿಟಿ ಆಗಿಬಿಟ್ಟಿದ್ದರು. ಕೇರಳದಲ್ಲಿ ಮೀನು ಮಾರುತ್ತಿದ್ದ ಯುವತಿಗೆ ಫ್ಯಾಷನ್ ಶೋನಲ್ಲಿ ಶೋ ಸ್ಟಾಪರ್ ಮಾಡಲಾಗಿತ್ತು. ಮಲಯಾಳಿ ನಟಿ ಪ್ರಿಯಾ ವಾರಿಯರ್ ಸಹ ಸ್ಟಾರ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ಅವರ ಒಂದು ಸಣ್ಣ ಕ್ಲಿಪ್ನಿಂದಲೇ. ಇದೀಗ ಮಹಾಕುಂಭದ ಮೊನಾಲಿಸಾಳ ಸರದಿ. ಈ ಅವಕಾಶವನ್ನು ಯುವತಿ ಸದುಪಯೋಗ ಪಡಿಸಿಕೊಳ್ಳುತ್ತಾರಾ ಕಾದು ನೋಡಬೇಕಿದೆ. ಸದುಪಯೋಗಪಡಿಸಿಕೊಳ್ಳಲಿ ಎಂಬುದು ಎಲ್ಲ ನೆಟ್ಟಿಗರ ಆಸೆಯಾಗಿದೆ. ಮತ್ತು ಕೆಲವರು , ದೇವರು ಬಡವರಿಗೆ ಐಶ್ವರ್ಯವನ್ನು ಕೊಡುವುದರಲ್ಲಿ ಕಡಿಮೆ ಮಾಡಿದರು ಸೌಂದರ್ಯದ ಕೊರತೆ ಮಾಡಿಲ್ಲ ಎಂದು ಕಾಮೆಂಟ್ ಗಳ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!