ಜನವರಿ 26 ರಿಂದ ಅದ್ದೂರಿ ಸುತ್ತೂರು ಜಾತ್ರಾ ಮಹೋತ್ಸವ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ (Suttur) ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜನವರಿ 26 ರಿಂದ 31 ರ ವರೆಗೂ ಅದ್ಧೂರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಮಠಾಧೀಶರು ಸಹ ಭಾಗವಹಿಸಿದ್ದರು.
ಈ ಸುತ್ತೂರು ಜಾತ್ರಾ ಮಹೋತ್ಸವವು ಬಹಳ ಜನಪ್ರಿಯ ಕಾರ್ಯಕ್ರಮವಾಗಿದ್ದು ನಾಡಿನಾದ್ಯಂತದಿಂದ ಭಕ್ತಾದಿಗಳು ಜಾತ್ರೆಯಲ್ಲಿ ಭಾಗವಹಿಸಲು ಬರುತ್ತಾರೆ.
ಈ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಆ ಪ್ರದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ತೋರಿಸುವ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತದೆ. ಕೃಷಿ ಹಾಗೂ ವಿವಿಧ ರೀತಿಯ ವಸ್ತುಪ್ರದರ್ಶನ, ವಿಚಾರ ಕಾರ್ಯಾಗಾರಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.


ಜಾತ್ರೆಯಲ್ಲಿ ಗ್ರಾಮೀಣ ಆಟಗಳನ್ನು ಆಡುವುದು ಸುತ್ತೂರಿನಲ್ಲಿ ದಶಕಗಳಿಂದ ಒಂದು ಶ್ರೀಮಂತ ಸಂಪ್ರದಾಯದಂತೆ ಆಚರಿಸಿಕೊಂಡು ಬರಲಾಗುತ್ತಿದೆ. ಗ್ರಾಮೀಣ ಆಟಗಳನ್ನು ಮುಂದಿನ ಪೀಳಿಗೆಗೆ ಧಾಟಿಸುವುದು ಮತ್ತು ನಗರವಾಸಿ ಜನರಿಗೆ ಈ ಆಟಗಳನ್ನು ಪರಿಚಯಿಸುವುದು ಈ ಸಂಪ್ರದಾಯದ ಉದ್ದೇಶ.
ಇದೇ ಕಾರಣಕ್ಕೆ ರಾಜ್ಯದಲ್ಲೇ ಪ್ರಸಿದ್ಧ ಜಾತ್ರೆ ಎಂದು ಕೊಂಡಾಡಲ್ಪಡುವ ಸುತ್ತೂರು ಜಾತ್ರೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಅಲ್ಲದೆ, ರಾಜ್ಯದ ಪ್ರಮುಖ ಜಾತ್ರೆಗಳಲ್ಲೊಂದಾಗಿ ಸ್ಥಾನ ಪಡೆದುಕೊಂಡಿದೆ ಎಂದರೂ ತಪ್ಪಾಗಲಾರದು. ಜಾತ್ರಾ ಮಹೋತ್ಸವದಲ್ಲಿ ನಿತ್ಯವೂ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಜಾತ್ರೆಯ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ.

ಸಾಮೂಹಿಕ ವಿವಾಹ : ಜನವರಿ 27 ಸೋಮವಾರದಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಅಂತರ್ಜಾತಿಗಳ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಳ್ಳಲಿದ್ದಾರೆ. ವಿವಾಹಗಳ ನೋಂದಣಿಯಾಗುತ್ತದೆ. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್ಗಳನ್ನು ನೀಡಲಾಗುತ್ತದೆ. ಸಾಮೂಹಿಕ ವಿವಾಹ ವ್ಯವಸ್ಥೆಯಲ್ಲಿ ಈವರೆಗೆ 3200ಕ್ಕೂ ಹೆಚ್ಚು ಮಂದಿ ಸತಿಪತಿಗಳಾಗಿದ್ದಾರೆ. ವಧು-ವರರು ವಿವಾಹದ ದೃಢೀಕರಣಪತ್ರ ಹಾಗೂ ನೋಂದಣಿಪತ್ರಗಳನ್ನು ಸಲ್ಲಿಸಿ, ಸರ್ಕಾರ ನೀಡುವ ಪ್ರೋತ್ಸಾಹಧನವನ್ನು ಪಡೆದುಕೊಳ್ಳಬಹುದಾಗಿದೆ.

54ನೇ ದನಗಳ ಪರಿಷೆ : ದನಗಳ ಜಾತ್ರೆಯನ್ನು ಕಳೆದ 53 ವರ್ಷಗಳಿಂದಲೂ ಏರ್ಪಡಿಸಲಾಗುತ್ತಿದೆ. ರೈತಬಾಂಧವರು ಎತ್ತು, ಹಸು, ಹೋರಿಗಳನ್ನು ಕೊಂಡುಕೊಳ್ಳಲು ಹಾಗೂ ಮಾರಾಟ ಮಾಡಲು ಅವಕಾಶವಿರುತ್ತದೆ. ಪಶುಪಾಲನಾ ಹಾಗೂ ಪಶುವೈದ್ಯಕೀಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮಾಡಲಾಗುವುದು. ಚುಚ್ಚುಮದ್ದು ಮತ್ತು ಜಂತುಹುಳು ನಿವಾರಕ ಔಷಧಿಯನ್ನು ಉಚಿತವಾಗಿ ನೀಡಲಾಗುತ್ತದೆ. ಉತ್ತಮ ರಾಸುಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!