76 ನೇ ಗಣರಾಜ್ಯೋತ್ಸವ ದಿನ ಆಕರ್ಷಕವಾಗಿ ಕಾಣಿಸ್ಬೇಕಾ? ಹಾಗಾದ್ರೆ ಇಲ್ಲಿದೆ ಕೆಲವು ಟಿಪ್ಸ್ !

ಭಾರತದ ಇತಿಹಾಸದಲ್ಲಿ ಗಣರಾಜ್ಯ ದಿನವು ಪ್ರಮುಖ ದಿನವಾಗಿದ್ದು ಇಡೀ ದೇಶವೇ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. 1950 ಜನವರಿ 26 ರಂದು ಭಾರತ ಸಂವಿಧಾನವನ್ನು ಅಂಗೀಕರಿಸಿದ ದಿನವಾಗಿದೆ. ಹೀಗಾಗಿ ಪ್ರತಿಯೊಂದು ಶಾಲೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಗಣರಾಜ್ಯೋತ್ಸವ ಪ್ರತಿಯೊಬ್ಬ ಭಾರತೀಯನಿಗೂ ಹಬ್ಬವಿದ್ದಂತೆಯೇ ಸರಿ. ಹೌದು,ಭಾರತೀಯ ಪಾಲಿಗೆ ಜನವರಿ 26 ಹೆಮ್ಮೆಯ ದಿನವಾಗಿದೆ. ದೇಶದ ಸಂವಿಧಾನ ಅಸ್ತಿತ್ವಕ್ಕೆ ಬಂದ ದಿನ. ಹೀಗಾಗಿ ಸ್ವಾತಂತ್ರ್ಯ ಸಿಕ್ಕ ದಿನವನ್ನು ಎಷ್ಟು ಸಂಭ್ರಮದಿಂದ ಆಚರಿಸುತ್ತೇವೋ ಅಷ್ಟೇ ಸಂಭ್ರಮದಿಂದ ಈ ದಿನವನ್ನು ಆಚರಿಸುತ್ತೇವೆ. ಈ ವರ್ಷ ನಾವು 76 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಗಣರಾಜ್ಯೋತ್ಸವಕ್ಕೆ ತಕ್ಕದಾದ ಥೀಮ್ ನಲ್ಲಿ ಡ್ರೆಸ್ ಮಾಡಿಕೊಂಡು ಹಬ್ಬದಂತೆ ಆಚರಿಸಬಹುದಾಗಿದ್ದು, ಈ ಗಣರಾಜ್ಯೋತ್ಸವ ದಿನ ಈ ರೀತಿ ಉಡುಗೆ ತೊಟ್ಟು ಹಬ್ಬದಂತೆ ಈ ದಿನವನ್ನು ಸಂಭ್ರಮಿಸಬಹುದು.

• ಇಂಡೋ-ವೆಸ್ಟರ್ನ್ ಲುಕ್ ನಲ್ಲಿ ಕಂಗೊಳಿಸಿ : ಇಂಡೋ-ವೆಸ್ಟರ್ನ್ ಲುಕ್ ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಆಗಿದೆ. ಬಿಳಿ ಸ್ಕರ್ಟ್ ಅನ್ನು ಹಸಿರು ಅಥವಾ ಕೇಸರಿ ಬಣ್ಣದ ಕ್ರಾಪ್ ಟಾಪ್ ನೊಂದಿಗೆ ಮಿಸ್ ಮ್ಯಾಚ್ ಮಾಡಿಕೊಳ್ಳಬಹುದು. ಎಥ್ನಿಕ್ ಟಚ್ಗಾಗಿ ಫ್ಲೋಯಿ ಸ್ಕರ್ಟ್ನೊಂದಿಗೆ ಉದ್ದವಾದ ಕುರ್ತಾವನ್ನು ಧರಿಸಬಹುದು.

• ತ್ರಿವರ್ಣ ಬಣ್ಣದ ಸೀರೆ ಆಯ್ಕೆ ಮಾಡಿ : ಯಾವುದೇ ಕಾರ್ಯಕ್ರಮವಿದ್ದರೂ ಸೀರೆ ಹೆಣ್ಣು ಮಕ್ಕಳ ಸೌಂದರ್ಯವನ್ನು ಹೆಚ್ಚಿಸುತ್ತದೆ. ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳನ್ನೊಳಗೊಂಡ ಮೂರು ಬಣ್ಣದ ಸೀರೆಯೂ ಗಣರಾಜ್ಯೋತ್ಸವಕ್ಕೆ ಹೇಳಿ ಮಾಡಿಸಿದ ಉಡುಗೆಯಾಗಿದೆ. ನೀವು ತ್ರಿವರ್ಣ ಸೀರೆ ಧರಿಸಲು ಸಾಧ್ಯವಾಗದಿದ್ದರೆ ಬಿಳಿ ಬಣ್ಣದ ಸೀರೆ ಧರಿಸಿ ಮೂರು ಬಣ್ಣಗಳ ಒಳಗೊಂಡ ಶಾಲನ್ನು ವಿಭಿನ್ನವಾಗಿ ಧರಿಸಿ ಆಕರ್ಷಕವಾಗಿ ಕಂಗೊಳಿಸಬಹುದು.

• ಕೈಬಳೆ, ಕಿವಿಯೋಲೆ ಮ್ಯಾಚಿಂಗ್ ಇರಲಿ : ಗಣರಾಜ್ಯೋತ್ಸವದ ದಿನ ಎಲ್ಲರ ಗಮನ ಸೆಳೆಯಲು ಬಯಸಿದರೆ ಕೈಬಳೆಗಳು ಹಾಗೂ ಕಿವಿಯೋಲೆ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದಿಂದ ಕೂಡಿರಲಿ. ಬಟ್ಟೆಗೆ ಹೊಂದುವಂತೆ ತ್ರಿವರ್ಣದ ಸ್ಟಿಕರ್ ಹಾಗೂ ಕ್ಲಿಪ್ ಬಗ್ಗೆ ಹೆಚ್ಚು ಗಮನ ಕೊಡಿ.

• ಬಿಳಿ ಸಲ್ವಾರ್ ಆಯ್ಕೆಯಿರಲಿ : ಬಿಳಿ ಬಣ್ಣದ ಸಲ್ವಾರ್ ಗೆ ಬಿಳಿ ಬಣ್ಣದ ಪ್ಯಾಂಟ್ ಹಾಕಿಕೊಂಡು ಕೇಸರಿ ಮತ್ತು ಹಸಿರು ಬಣ್ಣದ ಮಿಕ್ಸ್ ಇರುವ ದುಪಟ್ಟಾ ಹಾಕಿಕೊಂಡರೆ ಆಕರ್ಷಕವಾಗಿ ಕಾಣಿಸಿಕೊಳ್ಳಬಹುದು. ಬಿಳಿ ಟಾಪ್ಗೆ ಹಸಿರು ಅಥವಾ ಕೇಸರಿ ಬಣ್ಣದ ಪ್ಯಾಂಟ್ ಕೂಡ ಧರಿಸಬಹುದು. ಬಿಳಿ ಟಾಪ್ ಗೆ ಟೈಟ್ ಪ್ಯಾಂಟ್, ಪಲಾಜೋ, ಬೆಲ್ ಬಾಟಂ ಪ್ಯಾಂಟ್ಗಳು ಹೊಂದಿಕೆಯಾಗುತ್ತವೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!