
ರಾಷ್ಟ್ರ ಧ್ವಜದ ರಂಗೋಲಿಯ ಮಧ್ಯಭಾಗದಲ್ಲಿ ಅಶೋಕ ಚಕ್ರದ ಬದಲಿಗೆ ಕರ್ನಾಟಕದ ನಕ್ಷೆ ಬಿಡಿಸಿದ್ದಾರೆ. ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇದು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದಂತಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಪೋಸ್ಟ್ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದನ್ನು ಫ್ಲ್ಯಾಗ್ ಏರಿಯಾ ಆರ್ಟ್ ಎಂದು ಕರೆಯಲಾಗುತ್ತದೆ. ಇದರಲ್ಲಿ ಧ್ವಜದೊಳಗೆ ಭಾರತದ ಹೆಮ್ಮೆಯ ಸಾಧನೆಗಳ ವಿಷಯಗಳ ಚಿತ್ರವನ್ನು ಸಹ ಬಿಡಿಸಲಾಗುತ್ತದೆ. ಅದೇ ರೀತಿ ವಿದ್ಯಾರ್ಥಿಗಳು ಪ್ರೀತಿಯಿಂದ ಕರ್ನಾಟಕದ ನಕ್ಷೆ ಬಿಡಿಸಿದ್ದಾರೆ, ಇದನ್ನು ದೊಡ್ಡ ವಿಷಯ ಮಾಡುವ ಅಗತ್ಯವೇ ಇಲ್ಲʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಭಾರತ ಮತ್ತು ಕರ್ನಾಟಕದ ಧ್ವಜವನ್ನು ಸಂಯೋಜಿಸಿರುವ ರೀತಿ ಸುಂದರವಾಗಿದೆ. ಇದರಲ್ಲಿ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ ವಿಷಯ ಏನೂ ಇಲ್ಲ, ದಯವಿಟ್ಟು ದ್ವೇಷ ಹರಡದಿರಿʼ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗೆ ಕೆಲವರು ಇದಕ್ಕೆ ಬೆಂಬಲ ನೀಡಿದರೆ, ಇನ್ನೂ ಕೆಲವರು ಇದು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದಂತಾಗಿದೆ ಎಂದು ಹೇಳಿದ್ದಾರೆ.





