ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ : ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ : ಸಿಎಂ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.

ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

  • Related Posts

    ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

      ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

    ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

        ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು