ಅಡುಗೆ ರುಚಿ ಮಾತ್ರವಲ್ಲ, ಕೂದಲಿನ ಅಂದವನ್ನು ಹೆಚ್ಚಿಸುತ್ತದೆ ‘ಉಪ್ಪು’ !? ಎಲ್ಲಿದೆ ಸಿಂಪಲ್ ಟಿಪ್ಸ್.

ಉಪ್ಪಿಲ್ಲದ ಅಡುಗೆಯನ್ನು ತಿನ್ನುವುದು ಕಷ್ಟಕರ. ಅಡುಗೆಯ ರುಚಿ ಹೆಚ್ಚಿಸುವ ಉಪ್ಪಿನ ಪ್ರಯೋಜನ ಒಂದೆರಡಲ್ಲ. ನಿಯಮಿತವಾಗಿ ಉಪ್ಪು ಸೇವನೆಯೂ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳಿವೆ. ಅದೇ ರೀತಿ ಚರ್ಮ ಹಾಗೂ ಕೂದಲಿನ ಆರೈಕೆಗೂ ಈ ಉಪ್ಪನ್ನು ಬಳಸಬಹುದಾಗಿದೆ. ಹೌದು, ಉಪ್ಪು ಚರ್ಮದ ಜೊತೆಗೆ ಕೂದಲಿನ ಅನೇಕ ಸಮಸ್ಯೆಗಳಿಗೆ ರಾಮಬಾಣವಾಗಿದೆ.ಮಹಿಳೆಯ ಅಂದ ಹೆಚ್ಚಿಸುವುದೇ ಉದ್ದ ಹಾಗೂ ದಟ್ಟವಾದ ಕೂದಲು. ಆದರೆ ಇತ್ತೀಚೆಗಿನ ದಿನಗಳಲ್ಲಿ ನಾನಾ ರೀತಿಯ ಕೂದಲಿನ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಶ್ಯಾಂಪೂ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಕೂದಲಿನ ಆರೈಕೆಗೆ ಬಳಸುತ್ತಾರೆ. ಆದರೆ ಈ ಕೂದಲಿಗೆ ಬಳಸುವ ರಾಸಾಯನಿಕ ಮತ್ತು ಕೂದಲಿನ ಉತ್ಪನ್ನಗಳು ಕೂದಲ ಕಾಂತಿಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಹೀಗಾಗಿ ಅಡುಗೆ ಮನೆಯಲ್ಲಿ ಉಪ್ಪನ್ನು ವಿವಿಧ ರೀತಿಯಲ್ಲಿ ಬಳಸುವ ಮೂಲಕ ಕೂದಲಿನ ಆರೈಕೆಗೆ ಮಾಡಬಹುದು. ಈ ಮೂಲಕ ಸೊಂಪಾದ ದಟ್ಟವಾದ ಕೂದಲನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಾದ್ರೆ ಉಪ್ಪಿನ ಬಳಕೆಯೂ ಕೂದಲಿನ ಆರೈಕೆಗೆ ಹೇಗೆ ಸಹಕಾರಿಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

• ಕೂದಲು ಉದುರುವ ಸಮಸ್ಯೆ ಮತ್ತು ತಲೆಹೊಟ್ಟು ಸಮಸ್ಯೆಯಿದ್ದು ಕೂದಲು ಸೊಂಪಾಗಿ ಬೆಳೆಯುತ್ತಿಲ್ಲ ಎನ್ನುವವರು ವಾರಕ್ಕೆ ಎರಡು ಬಾರಿಯಾದರೂ ಎಣ್ಣೆ ಹಾಗೂ ಉಪ್ಪನ್ನು ಬೆರೆಸಿ ಕೂದಲಿಗೆ ಚೆನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ವೇಗವಾಗಿ ಹಾಗೂ ಸೊಂಪಾಗಿ ಬೆಳೆಯುತ್ತದೆ.

• ಉಪ್ಪಿನಲ್ಲಿರುವ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಹಾಗೂ ಸೆಲೆನಿಯಮ್ ಖನಿಜಗಳು ಕೂದಲನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಶ್ಯಾಂಪೂಗೆ ಉಪ್ಪು ಸೇರಿಸಿ ತಲೆಗೆ ನಿಧಾನವಾಗಿ ಮಸಾಜ್ ಮಾಡಿ. ಸ್ವಲ್ಪ ಸಮಯದವರೆಗೆ ಕೂದಲನ್ನು ಹಾಗೆ ಬಿಡಿ. ಆ ಬಳಿಕ ತಣ್ಣೀರಿನಿಂದ ಕೂದಲು ತೊಳೆಯುವುದರಿಂದ ಹೊಳೆಯುವುಳ್ಳ ಮತ್ತು ದಪ್ಪ ಕೂದಲು ನಿಮ್ಮದಾಗುತ್ತದೆ.

• ನಿಯಮಿತವಾಗಿ ಕೂದಲಿಗೆ ಉಪ್ಪನ್ನು ಅನ್ವಯಿಸುವುದರಿಂದ ಕೂದಲಿನ ಶುಷ್ಕತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಉಪ್ಪಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳಿದ್ದು, ಇದು ಕೂದಲಿನಲ್ಲಿ ತೇವಾಂಶವನ್ನು ಕಾಪಾಡುವ ಮೂಲಕ ತಲೆಹೊಟ್ಟು ಹೋಗಲಾಡಿಸಲು ಸಹಕಾರಿಯಾಗಿದೆ.

• ಉಪ್ಪಿನಿಂದ ತಲೆಗೆ ಮಸಾಜ್ ಮಾಡುವ ಮೂಲಕ ಕೂದಲು ಉದುರುವಿಕೆ ಸಮಸ್ಯೆಗೆ ರಾಮಬಾಣವಾಗಿದೆ. ಉಪ್ಪನ್ನು ನೆತ್ತಿಯ ಮೇಲೆ ಉಜ್ಜುವುದರಿಂದ ಇದು ಕೊಳೆಯನ್ನು ತೆಗೆದು ಹಾಕುತ್ತದೆ. ಅದಲ್ಲದೇ, ನೆತ್ತಿಯ ರಂಧ್ರಗಳು ಸುಲಭವಾಗಿ ತೆರೆದುಕೊಂಡು ಕೂದಲನ್ನು ಬಲಪಡಿಸುತ್ತದೆ. ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.

• ನೀರಿಗೆ ಉಪ್ಪನ್ನು ಬೆರೆಸಿ ಕೂದಲು ತೊಳೆಯುವ ಮೂಲಕ ಕೂದಲಿನ ಆರೈಕೆ ಮಾಡಬಹುದು. ಇಲ್ಲವಾದರೆ ಶ್ಯಾಂಪೂವಿಗೆ ಉಪ್ಪು ಸೇರಿಸಿ ಕೂದಲನ್ನು ತೊಳೆಯುವುದು ಕೂಡ ಪರಿಣಾಮಕಾರಿಯಾಗಿದೆ. ಇದು ನೆತ್ತಿಯ ಸತ್ತ ಕೋಶಗಳನ್ನು ತೆಗೆದುಹಾಕಿ, ತೈಲ ಗ್ರಂಥಿಗಳ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರಿಂದ ಕೂದಲಿನಲ್ಲಿರುವ ಹೆಚ್ಚುವರಿ ಎಣ್ಣೆ ಅಂಶವು ಕಡಿಮೆಯಾಗುತ್ತದೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!