ಅಡುಗೆ ರುಚಿ ಮಾತ್ರವಲ್ಲ, ಕೂದಲಿನ ಅಂದವನ್ನು ಹೆಚ್ಚಿಸುತ್ತದೆ ‘ಉಪ್ಪು’ !? ಎಲ್ಲಿದೆ ಸಿಂಪಲ್ ಟಿಪ್ಸ್.

ಉಪ್ಪಿಲ್ಲದ ಅಡುಗೆಯನ್ನು ತಿನ್ನುವುದು ಕಷ್ಟಕರ. ಅಡುಗೆಯ ರುಚಿ ಹೆಚ್ಚಿಸುವ ಉಪ್ಪಿನ ಪ್ರಯೋಜನ ಒಂದೆರಡಲ್ಲ. ನಿಯಮಿತವಾಗಿ ಉಪ್ಪು ಸೇವನೆಯೂ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳಿವೆ. ಅದೇ ರೀತಿ ಚರ್ಮ ಹಾಗೂ ಕೂದಲಿನ ಆರೈಕೆಗೂ ಈ ಉಪ್ಪನ್ನು ಬಳಸಬಹುದಾಗಿದೆ. ಹೌದು, ಉಪ್ಪು ಚರ್ಮದ ಜೊತೆಗೆ ಕೂದಲಿನ ಅನೇಕ ಸಮಸ್ಯೆಗಳಿಗೆ ರಾಮಬಾಣವಾಗಿದೆ.ಮಹಿಳೆಯ ಅಂದ ಹೆಚ್ಚಿಸುವುದೇ ಉದ್ದ ಹಾಗೂ ದಟ್ಟವಾದ ಕೂದಲು. ಆದರೆ ಇತ್ತೀಚೆಗಿನ ದಿನಗಳಲ್ಲಿ ನಾನಾ ರೀತಿಯ ಕೂದಲಿನ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಶ್ಯಾಂಪೂ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಕೂದಲಿನ ಆರೈಕೆಗೆ ಬಳಸುತ್ತಾರೆ. ಆದರೆ ಈ ಕೂದಲಿಗೆ ಬಳಸುವ ರಾಸಾಯನಿಕ ಮತ್ತು ಕೂದಲಿನ ಉತ್ಪನ್ನಗಳು ಕೂದಲ ಕಾಂತಿಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಹೀಗಾಗಿ ಅಡುಗೆ ಮನೆಯಲ್ಲಿ ಉಪ್ಪನ್ನು ವಿವಿಧ ರೀತಿಯಲ್ಲಿ ಬಳಸುವ ಮೂಲಕ ಕೂದಲಿನ ಆರೈಕೆಗೆ ಮಾಡಬಹುದು. ಈ ಮೂಲಕ ಸೊಂಪಾದ ದಟ್ಟವಾದ ಕೂದಲನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಾದ್ರೆ ಉಪ್ಪಿನ ಬಳಕೆಯೂ ಕೂದಲಿನ ಆರೈಕೆಗೆ ಹೇಗೆ ಸಹಕಾರಿಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

• ಕೂದಲು ಉದುರುವ ಸಮಸ್ಯೆ ಮತ್ತು ತಲೆಹೊಟ್ಟು ಸಮಸ್ಯೆಯಿದ್ದು ಕೂದಲು ಸೊಂಪಾಗಿ ಬೆಳೆಯುತ್ತಿಲ್ಲ ಎನ್ನುವವರು ವಾರಕ್ಕೆ ಎರಡು ಬಾರಿಯಾದರೂ ಎಣ್ಣೆ ಹಾಗೂ ಉಪ್ಪನ್ನು ಬೆರೆಸಿ ಕೂದಲಿಗೆ ಚೆನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ವೇಗವಾಗಿ ಹಾಗೂ ಸೊಂಪಾಗಿ ಬೆಳೆಯುತ್ತದೆ.

• ಉಪ್ಪಿನಲ್ಲಿರುವ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಹಾಗೂ ಸೆಲೆನಿಯಮ್ ಖನಿಜಗಳು ಕೂದಲನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಶ್ಯಾಂಪೂಗೆ ಉಪ್ಪು ಸೇರಿಸಿ ತಲೆಗೆ ನಿಧಾನವಾಗಿ ಮಸಾಜ್ ಮಾಡಿ. ಸ್ವಲ್ಪ ಸಮಯದವರೆಗೆ ಕೂದಲನ್ನು ಹಾಗೆ ಬಿಡಿ. ಆ ಬಳಿಕ ತಣ್ಣೀರಿನಿಂದ ಕೂದಲು ತೊಳೆಯುವುದರಿಂದ ಹೊಳೆಯುವುಳ್ಳ ಮತ್ತು ದಪ್ಪ ಕೂದಲು ನಿಮ್ಮದಾಗುತ್ತದೆ.

• ನಿಯಮಿತವಾಗಿ ಕೂದಲಿಗೆ ಉಪ್ಪನ್ನು ಅನ್ವಯಿಸುವುದರಿಂದ ಕೂದಲಿನ ಶುಷ್ಕತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಉಪ್ಪಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳಿದ್ದು, ಇದು ಕೂದಲಿನಲ್ಲಿ ತೇವಾಂಶವನ್ನು ಕಾಪಾಡುವ ಮೂಲಕ ತಲೆಹೊಟ್ಟು ಹೋಗಲಾಡಿಸಲು ಸಹಕಾರಿಯಾಗಿದೆ.

• ಉಪ್ಪಿನಿಂದ ತಲೆಗೆ ಮಸಾಜ್ ಮಾಡುವ ಮೂಲಕ ಕೂದಲು ಉದುರುವಿಕೆ ಸಮಸ್ಯೆಗೆ ರಾಮಬಾಣವಾಗಿದೆ. ಉಪ್ಪನ್ನು ನೆತ್ತಿಯ ಮೇಲೆ ಉಜ್ಜುವುದರಿಂದ ಇದು ಕೊಳೆಯನ್ನು ತೆಗೆದು ಹಾಕುತ್ತದೆ. ಅದಲ್ಲದೇ, ನೆತ್ತಿಯ ರಂಧ್ರಗಳು ಸುಲಭವಾಗಿ ತೆರೆದುಕೊಂಡು ಕೂದಲನ್ನು ಬಲಪಡಿಸುತ್ತದೆ. ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.

• ನೀರಿಗೆ ಉಪ್ಪನ್ನು ಬೆರೆಸಿ ಕೂದಲು ತೊಳೆಯುವ ಮೂಲಕ ಕೂದಲಿನ ಆರೈಕೆ ಮಾಡಬಹುದು. ಇಲ್ಲವಾದರೆ ಶ್ಯಾಂಪೂವಿಗೆ ಉಪ್ಪು ಸೇರಿಸಿ ಕೂದಲನ್ನು ತೊಳೆಯುವುದು ಕೂಡ ಪರಿಣಾಮಕಾರಿಯಾಗಿದೆ. ಇದು ನೆತ್ತಿಯ ಸತ್ತ ಕೋಶಗಳನ್ನು ತೆಗೆದುಹಾಕಿ, ತೈಲ ಗ್ರಂಥಿಗಳ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರಿಂದ ಕೂದಲಿನಲ್ಲಿರುವ ಹೆಚ್ಚುವರಿ ಎಣ್ಣೆ ಅಂಶವು ಕಡಿಮೆಯಾಗುತ್ತದೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!