ಮದುವೆ ದಿನವೇ ನವವಧು ಆತ್ಮಹ*!

ಮದುವೆ ಎಂಬುದು ಎಲ್ಲರ ಜೀವನದಲ್ಲೂ ಒಂದು ಸುಂದರವಾದ ಕ್ಷಣವಾಗಿರುತ್ತದೆ. ಆದರೆ ಮದುವೆ ಬಳಿಕ ತವರು ಮನೆಗೆ ಬಂದ ನವವಧು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಆಂಡಿಪಟ್ಟಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದಕ್ಕೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹೌದು, ಈ ಘಟನೆಗೆ ಸಂಬಂಧಪಟ್ಟವರು ತೇಣಿ ಜಿಲ್ಲೆ, ಆಂಡಿಪಟ್ಟಿ ಹತ್ತಿರದ ಕದಿರ್ನರಸಿಂಗಪುರದವರು. ಪರಮೇಶ್ವರನ್ (56). ಸರ್ಕಾರಿ ಬಸ್ಸಿನಲ್ಲಿ ಚಾಲಕರಾಗಿದ್ದಾರೆ.ಇವರ ಮಗಳು ಸೌಮ್ಯಾ (24). ಪೆರಿಯಕುಳಂ ಕಾಲೇಜಿನಲ್ಲಿ ಪದವಿ ಮುಗಿಸಿದ್ದಾಳೆ. ಕಂಬಂ ಪುದುಪಟ್ಟಿಯ ರವಿಚಂದ್ರನ್ ಮಗ ಪಾಲಾಜಿ (27) ಜೊತೆ ಸೌಮ್ಯಾಳ ಮದುವೆ ನಿಶ್ಚಯ ಆಗಿತ್ತಂತೆ ಎಂದು ತಿಳಿದು ಬರುತ್ತದೆ.

ನಂತರದಲ್ಲಿ ಮದುವೆ ತಯಾರಿ ಜೋರಾಗಿ ನಡೀತಿತ್ತು. ಆದ್ರೆ ಸೌಮ್ಯಾಗೆ ಈ ಮದುವೆಯಲ್ಲಿ ಇಷ್ಟ ಇರಲಿಲ್ಲವಂತೆ ಅದ್ಯಾಗೂ ಪೋಷಕರು ಜನವರಿ 31 ರಂದು ಕಂಬಂನಲ್ಲಿರುವ ಖಾಸಗಿ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ಮಾಡಿದ್ದಾರೆ.ಅದರಂತೆಯೇ ಮದುವೆ ಮನೆಯವರು ವಧುವನ್ನು ಕದಿರ್ನರಸಿಂಗಪುರಕ್ಕೆ ಕರೆದುಕೊಂಡು ಹೋದರು. ಮನೆಗೆ ಬಂದ ಸೌಮ್ಯಾ ಬಾತ್ರೂಮ್ಗೆ ಹೋಗಬೇಕು ಅಂದ್ರಂತೆ. ಬೆಡ್ರೂಮ್ಗೆ ಹೋದ ಸೌಮ್ಯಾ ಬಾಗಿಲು ಹಾಕಿಕೊಂಡ್ಳು. ಬಾಗಿಲು ತೆಗೆಯದಿದ್ದಾಗ ಮನೆಯವರು ಬಾಗಿಲು ಒಡೆದು ನೋಡಿದಾಗ ಸೌಮ್ಯಾ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾಳೆ. ಹೌದು ಇಂತಹದೊಂದು ಆಘಾತಕಾರಿ ಘಟನೆ ನಡೆದಿದೆ.

ಕೂಡಲೇ ಪೊಲೀಸರಿಗೆ ವಿಷಯ ತಿಳಿಸಲಾಯ್ತು. ಸೌಮ್ಯಾಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯ್ತು. ಪೊಲೀಸರು ತನಿಖೆ ಮಾಡ್ತಿದ್ದಾರೆ. ತನಿಖೆ ವೇಳೆ ತಿಳಿದುಬಂದಿದ್ದು ಏನೆಂದರೆ ಸೌಮ್ಯಾಗೆ ಮದುವೆ ಇಷ್ಟ ಇರಲಿಲ್ಲ, ಆಕೆ ಕನ್ಯಾಸ್ತ್ರೀ ಆಗಿ ಉಳಿಬೇಕು ಅಂದುಕೊಂಡಿದ್ದಳಂತೆ. ಅಂದರೆ ಮದುವೆಯಾಗದೇ ಜೀವನ ಕಳೆಯಬೇಕು ಎಂಬ ಆಸೆ ಇತ್ತಂತೆ ಆದರೆ ಪೋಷಕರು ಮದುವೆ ಮಾಡಿದ ಕಾರಣ ಬೇಸರಗೊಂಡು ಜೀವಕ್ಕೆ ಅಂತ್ಯ ತಂದುಕೊಂಡಿದ್ದಾಳೆಂದು ಹೇಳಲಾಗಿದೆ. ಆದ್ಯಾಗೂ ಪೊಲೀಸರು ಆತ್ಮಹತ್ಯೆಯ ನಿಖರ ಕಾರಣವೇನು ಎಂದು ತಿಳಿಯಲು ತನಿಖೆ ಮುಂದುವರಿಸಿದ್ದಾರೆ. ತನಿಖೆ ಮುಗಿದ ನಂತರವೇ ಎಲ್ಲಾ ಮಾಹಿತಿ ಲಭ್ಯವಾಗುವುದು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!