253 ಪ್ರಭೇದದ ಪಕ್ಷಿಗಳು, ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪತ್ತೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಗೊಳಪಡುವ ಮಲೆ ಮಹ ದೇಶ್ವರ ವನ್ಯಜೀವಿ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಪಕ್ಷಿಗಳ ಗಣತಿ ಕಾರ್ಯದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ.
ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸೇರಿದಂತೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯ ವಲಯಗಳಿವೆ ಒಟ್ಟು 949.469 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಈ ವನ್ಯಧಾಮವು ಬೆಟ್ಟಗುಡ್ಡ ಪ್ರದೇಶದಿಂದ ಕೂಡಿದೆ. ಈ
ವಿಭಾಗದಲ್ಲಿ ಅರೆ ಹರಿದ್ವರ್ಣ, ಶುಷ್ಕ ಅರಣ್ಯ, ಒಣ ಶುಷ್ಕ ಅರಣ್ಯ, ಕುರುಚಲು ಕಾಡುಗಳನ್ನು ಕಾಣಬಹುದಾಗಿದೆ.

ವನ್ಯಧಾಮದಲ್ಲಿ ಪ್ರಮುಖವಾಗಿ ಆನೆ, ಹುಲಿ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಕಾಡುಹಂದಿ, ಕರಡಿ, ನು, ಸೀಳುನಾಯಿ ಇತ್ಯಾದಿ ವನ್ಯ ಜೀವಿ ಗಳಿಗೆ ಆವಾಸಸ್ಥಾನವಾಗಿದ್ದು, ಪಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮೊದಲ ಬಾರಿಗೆ ಪಕ್ಷಿ ಗಣತಿ ನಡೆಸಲಾಯಿತು.
ಮಾಹಿತಿ ಸಂಗ್ರಹ: ಮೊದಲ ಬಾರಿಗೆ ನಡೆದ ಗಣತಿ ಕಾರ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಸುಮಾರು 500ಕ್ಕೂ ಹೆಚ್ಚಿ ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 120 ಮಂದಿ ಪರಿಣತರನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ, 4 ತಂಡಗಳಾಗಿ ವಿಂಗಡಿಸಲಾಗಿತ್ತು.

ವೈವಿಧ್ಯಮಯ ಆವಾಸಸ್ಥಾನಗಳನ್ನು ಒಳಗೊಂಡಿರುವ ಅರಣ್ಯದಲ್ಲಿ ಪ್ರತಿ ದಿನ ಒಂದೊಂದು ತಂಡ 3 ರಿಂದ 4 ಕಿಮೀ ಉದ್ದದ 40 ಟ್ರ್ಯಾಕ್ಗಳನ್ನು ಆಯ್ಕೆ ಮಾಡಿ ಕೊಂಡು ಸಮೀಕ್ಷೆ ಕಾರ್ಯ ನಡೆಸಲಾಯಿತು.
ಪ್ರತಿ ತಂಡವು ಒಂದು ಟ್ರ್ಯಾಕ್ನಲ್ಲಿ ಬಲಚಿತ್ರದಲ್ಲಿ ಪಕ್ಷಿ ಗಣತಿ ನಡೆಸಿದ ತಂಡ.
ಈ ಸಲ ಕಪ್​ ನಮ್ದೆ! RCB ಜೆರ್ಸಿಗೆ ಪುಣ್ಯ ಸ್ನಾನ!
ಪಕ್ಷಿ ವೀಕ್ಷಣೆ ನಡೆಸಿತು. ಪ್ರತಿ ಗುಂಪು ರಾತ್ರಿ ಪಕ್ಷಿ ವೀಕ್ಷಣೆಯೊಂದಿಗೆ ದಿನದ ಮೂರು ಪಾಳಯದಲ್ಲಿ ಪಕ್ಷಿ ವೀಕ್ಷಣೆ ನಡೆಸಿತು. ಪಕ್ಷಿ ಸಮೀಕ್ಷೆಯ ಕೊನೆಯಲ್ಲಿ, ಭಾಗವಹಿಸುವವರು ಸುಮಾರು 253 ಜಾತಿಯ ಪಕ್ಷಿಗಳನ್ನು ಗುರುತಿಸಿದರು.
ಬಿಳಿ ನೇಷ್ಮೆ ತುದಿ, ಬಿಳಿ ರಂಪ್ಟ್ ರಣಹದ್ದು, ನೀಲಗಿರಿ ಮರದ ಪಾರಿವಾಳ, ಕ್ರೆಸ್ಟೆಡ್ ಸರ್ಪೆಂಟ್ ಹದ್ದು ಮುಂತಾದ ಅಪರೂಪದ ಪ್ರಭೇದದ ಪಕ್ಷಿಗಳು ಸಮೀಕ್ಷೆಯಲ್ಲಿ ಪತ್ತೆಯಾಯಿತು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!