253 ಪ್ರಭೇದದ ಪಕ್ಷಿಗಳು, ಮಲೆಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪತ್ತೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವ್ಯಾಪ್ತಿಗೊಳಪಡುವ ಮಲೆ ಮಹ ದೇಶ್ವರ ವನ್ಯಜೀವಿ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಪಕ್ಷಿಗಳ ಗಣತಿ ಕಾರ್ಯದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ.
ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸೇರಿದಂತೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯ ವಲಯಗಳಿವೆ ಒಟ್ಟು 949.469 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶವನ್ನು ಹೊಂದಿದೆ. ಈ ವನ್ಯಧಾಮವು ಬೆಟ್ಟಗುಡ್ಡ ಪ್ರದೇಶದಿಂದ ಕೂಡಿದೆ. ಈ
ವಿಭಾಗದಲ್ಲಿ ಅರೆ ಹರಿದ್ವರ್ಣ, ಶುಷ್ಕ ಅರಣ್ಯ, ಒಣ ಶುಷ್ಕ ಅರಣ್ಯ, ಕುರುಚಲು ಕಾಡುಗಳನ್ನು ಕಾಣಬಹುದಾಗಿದೆ.

ವನ್ಯಧಾಮದಲ್ಲಿ ಪ್ರಮುಖವಾಗಿ ಆನೆ, ಹುಲಿ, ಚಿರತೆ, ಜಿಂಕೆ, ಕಡವೆ, ಕಾಡೆಮ್ಮೆ, ಕಾಡುಹಂದಿ, ಕರಡಿ, ನು, ಸೀಳುನಾಯಿ ಇತ್ಯಾದಿ ವನ್ಯ ಜೀವಿ ಗಳಿಗೆ ಆವಾಸಸ್ಥಾನವಾಗಿದ್ದು, ಪಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮೊದಲ ಬಾರಿಗೆ ಪಕ್ಷಿ ಗಣತಿ ನಡೆಸಲಾಯಿತು.
ಮಾಹಿತಿ ಸಂಗ್ರಹ: ಮೊದಲ ಬಾರಿಗೆ ನಡೆದ ಗಣತಿ ಕಾರ್ಯಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಸುಮಾರು 500ಕ್ಕೂ ಹೆಚ್ಚಿ ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 120 ಮಂದಿ ಪರಿಣತರನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ, 4 ತಂಡಗಳಾಗಿ ವಿಂಗಡಿಸಲಾಗಿತ್ತು.

ವೈವಿಧ್ಯಮಯ ಆವಾಸಸ್ಥಾನಗಳನ್ನು ಒಳಗೊಂಡಿರುವ ಅರಣ್ಯದಲ್ಲಿ ಪ್ರತಿ ದಿನ ಒಂದೊಂದು ತಂಡ 3 ರಿಂದ 4 ಕಿಮೀ ಉದ್ದದ 40 ಟ್ರ್ಯಾಕ್ಗಳನ್ನು ಆಯ್ಕೆ ಮಾಡಿ ಕೊಂಡು ಸಮೀಕ್ಷೆ ಕಾರ್ಯ ನಡೆಸಲಾಯಿತು.
ಪ್ರತಿ ತಂಡವು ಒಂದು ಟ್ರ್ಯಾಕ್ನಲ್ಲಿ ಬಲಚಿತ್ರದಲ್ಲಿ ಪಕ್ಷಿ ಗಣತಿ ನಡೆಸಿದ ತಂಡ.
ಈ ಸಲ ಕಪ್​ ನಮ್ದೆ! RCB ಜೆರ್ಸಿಗೆ ಪುಣ್ಯ ಸ್ನಾನ!
ಪಕ್ಷಿ ವೀಕ್ಷಣೆ ನಡೆಸಿತು. ಪ್ರತಿ ಗುಂಪು ರಾತ್ರಿ ಪಕ್ಷಿ ವೀಕ್ಷಣೆಯೊಂದಿಗೆ ದಿನದ ಮೂರು ಪಾಳಯದಲ್ಲಿ ಪಕ್ಷಿ ವೀಕ್ಷಣೆ ನಡೆಸಿತು. ಪಕ್ಷಿ ಸಮೀಕ್ಷೆಯ ಕೊನೆಯಲ್ಲಿ, ಭಾಗವಹಿಸುವವರು ಸುಮಾರು 253 ಜಾತಿಯ ಪಕ್ಷಿಗಳನ್ನು ಗುರುತಿಸಿದರು.
ಬಿಳಿ ನೇಷ್ಮೆ ತುದಿ, ಬಿಳಿ ರಂಪ್ಟ್ ರಣಹದ್ದು, ನೀಲಗಿರಿ ಮರದ ಪಾರಿವಾಳ, ಕ್ರೆಸ್ಟೆಡ್ ಸರ್ಪೆಂಟ್ ಹದ್ದು ಮುಂತಾದ ಅಪರೂಪದ ಪ್ರಭೇದದ ಪಕ್ಷಿಗಳು ಸಮೀಕ್ಷೆಯಲ್ಲಿ ಪತ್ತೆಯಾಯಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!