ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾನುವಾರು ಜಾತ್ರೆ : ಸಿದ್ಧತೆ ಬಲು ಜೋರು!

ಬೆಟ್ಟದಪುರ: ಇಲ್ಲಿನ ಆರಾಧ್ಯ ದೈವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾನುವಾರು ಜಾತ್ರೆ ಸೋಮವಾರ (ಫೆ.3)ದಿಂದ ಶುಕ್ರವಾರದವರೆಗೆ (ಫೆ.7) ಜರುಗಲಿದ್ದು, ಸಿದ್ದತೆ ಭರದಿಂದ ಸಾಗಿದೆ.
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಜರುಗುವ ಏಕೈಕ ಜಾನುವಾರು ಜಾತ್ರೆ ಇದಾಗಿದ್ದು, ಮೈಸೂರು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಹಲವು ಜಿಲ್ಲೆಗಳಿಂದಲೂ ರೈತರು ಎತ್ತುಗಳನ್ನು ಕರೆತರುತ್ತಾರೆ. ಜಾತ್ರೆ ಆರಂಭಗೊಳ್ಳುವ ಮೂರು ದಿನಗಳ ಮುಂಚಿತವಾಗಿಯೇ ರೈತರು ದನಗಳನ್ನು ಕಟ್ಟಲು ಸ್ಥಳಗಳನ್ನು ಕಾಯ್ದಿರಿಸುತ್ತಿದ್ದಾರೆ.

ಬೆಟ್ಟದಪುರದಲ್ಲಿ ಮಲ್ಲಿಕಾರ್ಜುನ ಸ್ವಾಮಿಗೆ ಇರುವಷ್ಟೇ ಪ್ರಾಧಾನ್ಯತೆ ಬಸವನಿಗೂ (ಬೆಳ್ಳಿಬಸಪ್ಪ) ಇದ್ದು, ರೈತರು ರಾಸುಗಳ ಮೇಲೆ ದೈವಿ ಭಾವ ತೋರುತ್ತಾರೆ. ಬಣ್ಣ ಬಣ್ಣದ ಮಾಲೆ ಹಾಗೂ ಗೆಜ್ಜೆಗಳಿಂದ ಕಣ್ಮನ ಸೆಳೆಯುವಂತೆ ರಾಸುಗಳಿಗೆ ಅಲಂಕಾರ ಮಾಡಿ, ವಾದ್ಯ ಮೇಳಗಳ ಸಹಿತವಾಗಿ ಜಾತ್ರೆಗೆ ಮೆರವಣಿಗೆ ಮೂಲಕ ಕರೆ ತರಲಾಗುತ್ತದೆ. ಸಂಕ್ರಾಂತಿ ಸುಗ್ಗಿಯ ನಂತರ ಆರಂಭವಾಗುವ ಜಾನುವಾರು ಜಾತ್ರೆಗಳಲ್ಲಿ ಸಮೀಪದ ಚುಂಚನಕಟ್ಟೆ, ಹೇಮಗಿರಿ, ಮುಡುಕುತೊರೆ ಕ್ಷೇತ್ರಗಳ ಜಾತ್ರೆ ನಂತರ ಬೆಟ್ಟದಪುರದ ಜಾತ್ರೆ ನಡೆಯುವುದು ರೂಢಿ.
ಬಹುತೇಕ ಕೃಷಿ ಚಟುವಟಿಕೆಗಳು ಪೂರ್ಣಗೊಂಡ ನಂತರ ಪ್ರತಿ ವರ್ಷ ಜಾತ್ರೆ ನಡೆಯಲಿದ್ದು, ಕಳೆದ ಸಾಲಿನಲ್ಲಿ ಒಂದು ಜೋಡಿ ಹಳ್ಳಿಕಾರ್ ಎತ್ತುಗಳು ಕನಿಷ್ಠ ₹ 45 ಸಾವಿರ ದಿಂದ ಗರಿಷ್ಠ ₹ 5 ಲಕ್ಷ ದವರೆಗೆ ಮಾರಾಟವಾಗಿದ್ದವು. ಸಾವಿರಕ್ಕೂ ಹೆಚ್ಚು ಜೋಡಿ ರಾಸುಗಳು ಪಾಲ್ಗೊಳ್ಳುವುದರಿಂದ ಖರೀದಿಗೆ ಹೊರ ಜಿಲ್ಲೆಗಳಿಂದಲೂ ರೈತರು ಆಗಮಿಸುತ್ತಾರೆ. ಅಲ್ಲದೇ ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು, ರಾಸುಗಳಿಗೆ ಮೇವಿನ ಕೊರತೆ ಇಲ್ಲದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಲಿವೆ ಎಂದು ಅಂದಾಜಿಸಲಾಗಿದೆ.
‘ಪ್ರತಿ ವರ್ಷವೂ ಜಾನುವಾರು ಜಾತ್ರೆಗೆ ಭಾಗವಹಿಸುತ್ತೇವೆ. ಉತ್ತಮ ರಾಸುಗಳನ್ನು ಖರೀದಿಸುತ್ತೇವೆ’ ಎಂದು ಅಲ್ಪನಾಯಕನ ಹಳ್ಳಿಯ ರೈತ ಯೋಗೇಶ್ ಹೇಳಿದರು.

ಈ ಮೊದಲು ಬೆಟ್ಟದಪುರದ ಸಂತೆಮಾಳದ ಸಮೀಪ ಜಾನುವಾರು ಜಾತ್ರೆ ನಡೆಸಲಾಗುತ್ತಿತ್ತು. ಆದರೆ, ಕಳೆದ ನಾಲ್ಕು ವರ್ಷಗಳಿಂದ ಜಾಗದ ಮತ್ತು ನೀರಿನ ಕೊರತೆ ಉಂಟಾದ ಕಾರಣ ಹರದೂರು ಗೇಟ್ ಬಳಿ ರೈತರ ಜಮೀನುಗಳಲ್ಲಿಯೇ ಜಾತ್ರೆ ಆಯೋಜಿಸಲಾಗುತ್ತಿದೆ. ಅಲ್ಲಿಗೆ ಬೇಕಾದ ಮೂಲಸೌಕರ್ಯಗಳನ್ನು ಕಂದಾಯ ಇಲಾಖೆಯಿಂದ ಒದಗಿಸಲಾಗಿದೆ. ‘ಕಳೆದ ಬಾರಿ ರಾಸುಗಳಿಗೆ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿತ್ತು. ಈ ವರ್ಷವೂ ಜಾನುವಾರುಗಳ ಸಂಖ್ಯೆ ಹೆಚ್ಚಾಗಲಿದ್ದು, ಮುಂಜಾಗ್ರತೆ ಕ್ರಮ ವಹಿಸಲಾಗಿದೆ’ ಎಂದು ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಸೋಮಯ್ಯ ಮಾಹಿತಿ ನೀಡಿದರು.

ಮಗಳಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪತಿಯನ್ನ ಕೊಂ* ಪತ್ನಿ !


ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ, 24 x 7 ಪಶು ವೈದ್ಯಕೀಯ ಸೇವೆ, ಅಕ್ಕಪಕ್ಕದ ರೈತರ ಪಂಪ್ಸೆಟ್ಗಳಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಜಾತ್ರೆ ಮಾಳದಲ್ಲಿ ತಾತ್ಕಾಲಿಕ ಹೋಟೆಲ್ಗಳು, ಮಂಡಕ್ಕಿ ಹಾಗೂ ಸಿಹಿ ತಿನಿಸುಗಳ ಅಂಗಡಿಗಳು ತಲೆಯೆತ್ತಿದ್ದು, ವ್ಯಾಪಾರ ವಹಿವಾಟಿಗೆ ತಯಾರಿ ನಡೆದಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು