ಮಾರ್ಚ್ ನಿಂದ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ ಶಿವಣ್ಣ..!

ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಭಾರತಕ್ಕೆ ಮರಳಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ. ಅವರು ಬೆಂಗಳೂರಿನಿಂದ ಹೊರಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್ನಿಂದ ಚಲನಚಿತ್ರ ಕೆಲಸಗಳನ್ನು ಪ್ರಾರಂಭಿಸಲಿದ್ದಾರೆ. ಶಿವರಾಜ್ ಕುಮಾರ್ ಅವರು ’45’ ಚಿತ್ರದ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ.
ನಟ ಶಿವರಾಜ್ಕುಮಾರ್ ಅವರು ಜನವರಿ 26ಕ್ಕೆ ಅಮೆರಿಕದಿಂದ ಭಾರತಕ್ಕೆ ಮರಳಿದರು. ಅವರು ಬರುತ್ತಿದ್ದಂತೆ ಅನೇಕ ಸೆಲೆಬ್ರಿಟಿಗಳು ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದರು. ಈಗ ಅವರು ಸಂಪೂರ್ಣ ಕ್ಯಾನ್ಸರ್ ಮುಕ್ತ ಆಗಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗ ಶಿವರಾಜ್ಕುಮಾರ್ ಅವರು ಬೆಂಗಳೂರಿನಲ್ಲಿ ಇಲ್ಲ! ಹೌದು, ಅವರು ಶಿರಸಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ನಿಂದ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇತ್ತೀಚೆಗೆ ಶಿವರಾಜ್ಕುಮಾರ್ ಅವರು ಯಾಣಕ್ಕೆ ತೆರಳಿದ್ದರು. ‘ನಮ್ಮೂರ ಮಂದಾರ ಹೂವೆ’ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಶಿವಣ್ಣ ಅಲ್ಲಿಗೆ ತೆರಳಿದ್ದರು. ಇದಾದ 29 ವರ್ಷಗಳ ಬಳಿಕ ಅವರು ಮತ್ತೆ ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಈಗ ಶಿವರಾಜ್ಕುಮಾರ್ ತಮ್ಮ ಸಂಬಂಧಿ, ಶಾಸಕ ಭೀಮಣ್ಣ ಒಡೆತನದಲ್ಲಿ ಇರುವ ಶಿರಸಿಯ ಹೋಟೆಲ್ನಲ್ಲಿ ಉಳಿದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇದ್ದರೆ ಒಬ್ಬರಾದ ಬಳಿಕ ಒಬ್ಬರು ಅವರ ಮನೆಗೆ ಭೇಟಿ ನೀಡುತ್ತಾ ಇರುತ್ತಾರೆ. ಹೀಗಾಗಿ, ವಿಶ್ರಾಂತಿ ಪಡೆಯಲು ಆಗೋದಿಲ್ಲ. ಈ ಕಾರಣಕ್ಕೆ ಅವರು ಶಿರಸಿಗೆ ಶಿಫ್ಟ್ ಆಗಿದ್ದಾರೆ. ಇಲ್ಲಿ ಅವರು ಗೀತಾ ಜೊತೆ ಉಳಿದುಕೊಂಡಿದ್ದಾರೆ. ಅವರು ಭೇಟಿ ಮಾಡಲು ಯಾರಿಗೂ ಅವಕಾಶ ಇಲ್ಲ.
‘45’ ಸಿನಿಮಾ
ಅರ್ಜುನ್ ಜನ್ಯ ನಿರ್ದೇಶನದ ‘45’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ. ಈ ಚಿತ್ರವ ಈ ವರ್ಷವೇ ತೆರೆಗೆ ಬರಲಿದೆ. ಇದರ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಲಿದ್ದಾರೆ.

ಪೈನಾನ್ಸ್ ಕಂಪನಿಯವ್ರು ರೌಡಿಗಳನ್ನ ಬಿಟ್ಟು ವಸೂಲಿ ಮಾಡಬಾರದ್!

ಸಿನಿಮಾ ಕೆಲಸ
ಶಿವರಾಜ್ಕುಮಾರ್ ಅವರು ಸಿನಿಮಾ ಕೆಲಸ ಆರಂಭಿಸೋದು ಯಾವಾಗ ಎಂಬುದನ್ನು ‘ಬಿ. ಗಣಪತಿ’ ಅವರ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ‘ಮಾರ್ಚ್ ತಿಂಗಳಿಂದ ಸಿನಿಮಾ ಕೆಲಸ ಆರಂಭಿಸುತ್ತೇನೆ. ರಾಮ್ ಚರಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ತಮಿಳಿನ ನಿರ್ದೇಶಕನೋರ್ವ ಚಿತ್ರ ಮಾಡುತ್ತಿದ್ದು ಅವರ ಜೊತೆ ಮಾಡುತ್ತಿದ್ದೇನೆ. ಸದ್ಯ ಇದೆರಡು ಸಿನಿಮಾಗಳು ಇವೆ’ ಎಂದು ಅವರು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!