ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾ* ; ಚಾಮರಾಜನಗರದಲ್ಲಿ ಘಟನೆ.

ಚಾಮರಾಜನಗರ :- ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ ಬಾಳಬೇಕಾದ 6 ತಿಂಗಳ ಕಂದನ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ತನ್ನ ಮಗುವಿನ ಸಾವಿಗೆ ಕಾರಣವಾದ ವೈದ್ಯನ ವಿರುದ್ದ ಕುಟುಂಬಸ್ಥರು ರೊಚ್ಚಿಗೆದ್ದಿದ್ದು ಸರ್ಕಾರಿ ಆಸ್ಪತ್ರೆಯೇ ರಣಾಂಗಣವಾಗಿ ಮಾರ್ಪಟ್ಟಿತ್ತು.

ಹಂಗಳ ಗ್ರಾಮದ ನಿವಾಸಿಗಳಾದ ಆನಂದ್ ಮತ್ತು ಶುಭಮಾನಸ ದಂಪತಿಯ ಆರು ತಿಂಗಳ ಮಗು ಪ್ರಖ್ಯಾತ್ಗೆ ಇಂದು ಕಿವಿ ಚುಚ್ಚಿಸೋಕೆ ಮುಂದಾಗಿದ್ದರು. ಆದರೆ ಚಿಕ್ಕ ಕಂದವಾದ ಕಾರಣ ಮಗುವಿಗೆ ನೋವು ಆಗ ಬಾರದು ಎಂಬ ಕಾರಣಕ್ಕೆ ಬೋಮ್ಮಲಾಪೂರ ಸರ್ಕಾರಿ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಹೋದ ಪೋಷಕರು ಕಿವಿಗೆ ಬೆಂಟ್ ಇಂಜೆಕ್ಷನ್(ಅನಸ್ತೀಷಿಯಾ) ಕೊಡಿಸಿದ್ದಾರೆ. ಈ ಇಂಜೆಕ್ಷನ್ ನೀಡಿದ 10 ನಿಮಿಷದೊಳಗೆ ಮಗುವಿಗೆ ರಿಯಾಕ್ಷನ್ ಆಗಿದೆ. ಇದ್ದಕ್ಕಿದ್ದಂತೆ ಪಿಡ್ಸ್ ಬಂದಿದೆ, ತಕ್ಷಣವೇ ಬೋಮ್ಮಲಾಪುರ ಸರ್ಕಾರಿ ಆಸ್ಪತ್ರೆಯಿಂದ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಮಗುವನ್ನ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆ ತಲುಪುವ ಮುನ್ನವೆ ಮಗು ಉಸಿರು ಚೆಲ್ಲಿದೆ. ಈ ವಿಚಾರ ತಿಳಿದು ಮೃತ ಮಗುವಿನ ಕುಟುಂಬಸ್ಥರು ರೊಚ್ಚಿಗೆದ್ದು ವೈದ್ಯರಿಗೆ ಕ್ಲಾಸ್ ತೆಗೆದು ಕೊಂಡಿದ್ದಾರೆ.
ನಾಗದೋಷ ಯಾವ ಕಾರಣಕ್ಕೆ ಬರುತ್ತೆ?
ವೈದ್ಯ ಓವರ್ ಡೋಸ್ ನೀಡಿದ ಪರಿಣಾಮವೇ ಮಗು ಸಾವನ್ನಪ್ಪಿರುವುದಾಗಿ ಕುಟುಂಬಸ್ಥರ ಆರೋಪವಾಗಿದೆ. ಪಿಹೆಚ್ಸಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗುಂಡ್ಲುಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ಅಲಂಪಾಷಾ ಹೇಳಿದ್ದಾರೆ.

ಕಿವಿಗೆ ನೋವಾಗಬಾರ್ದು ಅಂತ ವೈದ್ಯರ ಬಳಿ ಕರೆದುಕೊಂಡು ಹೋದರೆ, ಆ ವೈದ್ಯ ಮಗುವಿನ ಪ್ರಾಣವನ್ನು ತೆಗೆದಿದ್ದು ನಿಜಕ್ಕೂ ದುರಂತವೇ ಸರಿ. ಮರಣೋತ್ತರ ಪರೀಕ್ಷೆ ವರದಿಯ ಬಳಿಕ ಸತ್ಯಾ ಸತ್ಯತೆ ಬೆಳಕಿಗೆ ಬರಬೇಕಿದೆ. ಎಲ್ಲವನ್ನೂ ನೋಡಿ ರೊಚ್ಚಿಗೆದ್ದ ಬೊಮ್ಮಲಾಪುರ ಗ್ರಾಮದ ನಿವಾಸಿಗಳು ಮಾಧ್ಯಮ ಪ್ರತಿನಿಧಿಗಳನ್ನು ಒಳಬಿಡಿ ಎಂದು ಗಲಾಟೆ ಮಾಡಿದ್ದಾರೆ. ಗ್ರಾಮಸ್ಥರು ರೊಚ್ಚಿಗೇಳುತ್ತಿದ್ದಂತೆ ಮಾಧ್ಯಮದವರನ್ನು ಪೊಲೀಸರು ಒಳಬಿಟ್ಟಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!