ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾ* ; ಚಾಮರಾಜನಗರದಲ್ಲಿ ಘಟನೆ.

ಚಾಮರಾಜನಗರ :- ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ ಬಾಳಬೇಕಾದ 6 ತಿಂಗಳ ಕಂದನ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ತನ್ನ ಮಗುವಿನ ಸಾವಿಗೆ ಕಾರಣವಾದ ವೈದ್ಯನ ವಿರುದ್ದ ಕುಟುಂಬಸ್ಥರು ರೊಚ್ಚಿಗೆದ್ದಿದ್ದು ಸರ್ಕಾರಿ ಆಸ್ಪತ್ರೆಯೇ ರಣಾಂಗಣವಾಗಿ ಮಾರ್ಪಟ್ಟಿತ್ತು.

ಹಂಗಳ ಗ್ರಾಮದ ನಿವಾಸಿಗಳಾದ ಆನಂದ್ ಮತ್ತು ಶುಭಮಾನಸ ದಂಪತಿಯ ಆರು ತಿಂಗಳ ಮಗು ಪ್ರಖ್ಯಾತ್ಗೆ ಇಂದು ಕಿವಿ ಚುಚ್ಚಿಸೋಕೆ ಮುಂದಾಗಿದ್ದರು. ಆದರೆ ಚಿಕ್ಕ ಕಂದವಾದ ಕಾರಣ ಮಗುವಿಗೆ ನೋವು ಆಗ ಬಾರದು ಎಂಬ ಕಾರಣಕ್ಕೆ ಬೋಮ್ಮಲಾಪೂರ ಸರ್ಕಾರಿ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಹೋದ ಪೋಷಕರು ಕಿವಿಗೆ ಬೆಂಟ್ ಇಂಜೆಕ್ಷನ್(ಅನಸ್ತೀಷಿಯಾ) ಕೊಡಿಸಿದ್ದಾರೆ. ಈ ಇಂಜೆಕ್ಷನ್ ನೀಡಿದ 10 ನಿಮಿಷದೊಳಗೆ ಮಗುವಿಗೆ ರಿಯಾಕ್ಷನ್ ಆಗಿದೆ. ಇದ್ದಕ್ಕಿದ್ದಂತೆ ಪಿಡ್ಸ್ ಬಂದಿದೆ, ತಕ್ಷಣವೇ ಬೋಮ್ಮಲಾಪುರ ಸರ್ಕಾರಿ ಆಸ್ಪತ್ರೆಯಿಂದ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಮಗುವನ್ನ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆ ತಲುಪುವ ಮುನ್ನವೆ ಮಗು ಉಸಿರು ಚೆಲ್ಲಿದೆ. ಈ ವಿಚಾರ ತಿಳಿದು ಮೃತ ಮಗುವಿನ ಕುಟುಂಬಸ್ಥರು ರೊಚ್ಚಿಗೆದ್ದು ವೈದ್ಯರಿಗೆ ಕ್ಲಾಸ್ ತೆಗೆದು ಕೊಂಡಿದ್ದಾರೆ.
ನಾಗದೋಷ ಯಾವ ಕಾರಣಕ್ಕೆ ಬರುತ್ತೆ?
ವೈದ್ಯ ಓವರ್ ಡೋಸ್ ನೀಡಿದ ಪರಿಣಾಮವೇ ಮಗು ಸಾವನ್ನಪ್ಪಿರುವುದಾಗಿ ಕುಟುಂಬಸ್ಥರ ಆರೋಪವಾಗಿದೆ. ಪಿಹೆಚ್ಸಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗುಂಡ್ಲುಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ಅಲಂಪಾಷಾ ಹೇಳಿದ್ದಾರೆ.

ಕಿವಿಗೆ ನೋವಾಗಬಾರ್ದು ಅಂತ ವೈದ್ಯರ ಬಳಿ ಕರೆದುಕೊಂಡು ಹೋದರೆ, ಆ ವೈದ್ಯ ಮಗುವಿನ ಪ್ರಾಣವನ್ನು ತೆಗೆದಿದ್ದು ನಿಜಕ್ಕೂ ದುರಂತವೇ ಸರಿ. ಮರಣೋತ್ತರ ಪರೀಕ್ಷೆ ವರದಿಯ ಬಳಿಕ ಸತ್ಯಾ ಸತ್ಯತೆ ಬೆಳಕಿಗೆ ಬರಬೇಕಿದೆ. ಎಲ್ಲವನ್ನೂ ನೋಡಿ ರೊಚ್ಚಿಗೆದ್ದ ಬೊಮ್ಮಲಾಪುರ ಗ್ರಾಮದ ನಿವಾಸಿಗಳು ಮಾಧ್ಯಮ ಪ್ರತಿನಿಧಿಗಳನ್ನು ಒಳಬಿಡಿ ಎಂದು ಗಲಾಟೆ ಮಾಡಿದ್ದಾರೆ. ಗ್ರಾಮಸ್ಥರು ರೊಚ್ಚಿಗೇಳುತ್ತಿದ್ದಂತೆ ಮಾಧ್ಯಮದವರನ್ನು ಪೊಲೀಸರು ಒಳಬಿಟ್ಟಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!