ಗಂಡನ ಕಿರುಕುಳ ತಾಳಲಾರದೆ ನೇ*ಗೆ ಶರಣಾದ ವಿವಾಹಿತೆ.!

ತಿರುವನಂತಪುರ: ಕೇರಳದ ಮಲಪ್ಪುರಂನಲ್ಲಿ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯಲ್ಲಿ ಗಂಡ ಪ್ರಭಿನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಂಜೇರಿ ಪೊಲೀಸರು, ಮಹಿಳೆಯ ಗಂಡ ಪ್ರಭಿನ್‌ನನ್ನು ಬಂಧಿಸಿದ್ದಾರೆ. ಗುರುವಾರ ಪೂಕ್ಕೋಟ್ಟುಂಪಾಡಂ ಮೂಲದ ವಿಷ್ಣುಜಾ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 2023ರ ಮೇ ತಿಂಗಳಲ್ಲಿ ವಿಷ್ಣುಜಾ ಮತ್ತು ಎಳಂಕೂರು ಮೂಲದ ಪ್ರಭಿನ್‌ರ ವಿವಾಹ ನೆರವೇರಿತ್ತು. ಗಂಡನ ಕಿರುಕುಳದಿಂದಲೇ ಮಗಳ ಸಾವು ಆಗಿದೆ ಎಂದು ವಿಷ್ಣುಜಾ ಕುಟುಂಬ ಗಂಭೀರ ಆರೋಪವನ್ನು ಮಾಡಿದೆ. ಆದರೆ ಈ ಆರೋಪವನ್ನು ಪ್ರಭಿನ್ ಕುಟುಂಬ ನಿರಾಕರಿಸಿದೆ. ಪ್ರಭಿನ್ ಮತ್ತು ವಿಷ್ಣುಜಾ ನಡುವೆ ಕೆಲವು ಭಿನ್ನಾಭಿಪ್ರಾಯಗಳಿದ್ದವು. ಇದಕ್ಕೆ ಕಾರಣ ತಿಳಿದಿಲ್ಲ ಎಂದು ಪ್ರಭಿನ್ ಕುಟುಂಬ ಹೇಳಿದೆ. ವರದಕ್ಷಿಣೆ ಕೇಳಿಲ್ಲ ಅಥವಾ ಪಡೆದಿಲ್ಲ ಎಂದು ಪ್ರಭಿನ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಗಂಡನ ಮನೆಯಲ್ಲಿ ಮಗಳಿಗೆ ತೀವ್ರ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು. ಮದುವೆಯಾದ ಕೆಲವು ವಾರಗಳಲ್ಲೇ ಪ್ರಭಿನ್ ಕಿರುಕುಳ ನೀಡಲು ಪ್ರಾರಂಭಿಸಿದ. ಕೆಲಸವಿಲ್ಲದ ಕಾರಣಕ್ಕೆ ಕಿರುಕುಳ ನೀಡಲಾಗುತ್ತಿತ್ತು. ತಂದೆ-ತಾಯಿಗೆ ತೊಂದರೆ ಕೊಡಬಾರದು ಎಂದು ಮಗಳು ಎಲ್ಲವನ್ನೂ ಮುಚ್ಚಿಟ್ಟಳು. ಮಗಳನ್ನು ಬೈಯ್ಯುವ ವಾಯ್ಸ್ ನೋಟ್‌ಗಳು ನನ್ನ ಬಳಿ ಇವೆ. ದೈಹಿಕವಾಗಿಯೂ ಮಗಳಿಗೆ ಕಿರುಕುಳ ನೀಡಲಾಗುತ್ತಿತ್ತು, ಮಗಳ ದೇಹದ ಮೇಲಿನ ಗಾಯಗಳ ಬಗ್ಗೆ ಆಕೆಯ ಗೆಳತಿ ಹೇಳಿದ್ದಳು ಎಂದು ವಿಷ್ಣುಜಾಳ ತಂದೆ ತಿಳಿಸಿದ್ದಾರೆ.
ಅನ್ನಭಾಗ್ಯ ಅಕ್ಕಿಯಲ್ಲಿ ದೊಡ್ಡ ಸ್ಕ್ಯಾಮ್ ಇದೆ MLA, ಸಚಿವರ ಪಟಾಲಂ ಈ ದಂಧೆಯಲ್ಲಿ ತೊಡಗಿದೆ.!
ಸೌಂದರ್ಯ ಕಡಿಮೆ, ಕೆಲಸವಿಲ್ಲ, ವರದಕ್ಷಿಣೆ ಕಡಿಮೆ ಎಂದು ಹೇಳಿ ವಿಷ್ಣುಜಾಳಿಗೆ ಗಂಡ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬ ಆರೋಪಿಸಿದೆ. ಇದಕ್ಕೆಲ್ಲ ಗಂಡನ ಸಂಬಂಧಿಕರು ಸಹಕರಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಗಂಡ ಮತ್ತು ಆತನ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ಕುಟುಂಬ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಮಂಜೇರಿ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!