ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸರ್ಕಾರ ಬ್ರೇಕ್

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಅಧ್ಯಾದೇಶ ಜಾರಿ

ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ.

ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೊಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೊಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

 

 

 

ಮೈಕ್ರೋಫೈನಾನ್ಸ್ ಸಂಸ್ಥೆಗಳು ತಾವು ವ್ಯವಹರಿಸುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಲ್ಲಿ ನೊಂದಣಿಯಾಗುವುದು ಕಡ್ಡಾಯವಾಗಿದೆ. ಈ ಸಂಸ್ಥೆಗಳು ವಿಧಿಸುವ ಬಡ್ಡಿದರ, ಸಾಲಗಾರರ ಮಾಹಿತಿ ಹಾಗೂ ಸುಸ್ತಿ ಸಾಲಗಳ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತ್ರೈ ಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಲ್ಲಿಸದಿದ್ದರೆ 6 ತಿಂಗಳ ಕಾರಗೃಹವಾಸ ಅಥವಾ 10 ಸಾವರಿರೂ ವರೆಗೆ ದಂಡ ಅಥವಾ ಎರಡೂ ಶಿಕ್ಷೆಗೆ ಗುರಿಯಾಗುತ್ತಾರೆ.
ವಿವಾದಗಳನ್ನು ಇತ್ಯರ್ಥಗಳನ್ನು ಒಂಬುಡ್ಸ್‍ಮನ್‍ಗಳನ್ನು ಸರ್ಕಾರ ಅಧಿಸೂಚನೆ ಮೂಲಕ ನೇಮಕ ಮಾಡುವ ಅಧಿಕಾರ ಹೊಂದಿರುತ್ತದೆ.

ಬಲವಂತದ ವಸೂಲಾತಿಗಳನ್ನು ಕೈಗೊಳ್ಳುವ ವ್ಯಕ್ತಿಯು ವಿಚಾರಣೆಗೆ ಒಳಪಡುತ್ತಾನೆ, ಹತ್ತು ವರ್ಷಗಳ ವರೆಗೆ ವಿಸ್ತರಿಸಬಹುದಾದ ಕಾರಗೃಹವಾಸ ಶಿಕ್ಷೆ ಹಾಗೂ 5 ಲಕ್ಷ ರೂ ವರೆಗೆ ವಿಧಿಸಬಹುದಾದ ಜುಲ್ಮಾನೆಗೆ ಒಳಪಡುತ್ತಾನೆ. ಈ ಅಪರಾಧಗಳು ಸಂಜ್ಞೆಯ (ಕಾಗ್ನಿಜಿಬಲ್) ಹಾಗೂ ಜಾಮೀನು ರಹಿತ (ನಾನ್ ಬೇಲೆಬಲ್) ಪ್ರಕರಣಗಳಾಗಿರುತ್ತವೆ. ಯಾವುದೇ ಪೊಲೀಸ್ ಅಧಿಕಾರಿಗಳು ಇಂತಹ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲು ನಿರಾಕರಿಸಬಾರದು. ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‍ಪಿ) ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯು ಸ್ವತಃ (ಸುಮೊಟೊ) ಪ್ರಕರಣ ದಾಖಲಿಸಬಹುದು. ಸರ್ಕಾರವು ಈ ಅಧ್ಯಾದೇಶದ ಅನುಷ್ಠಾನಕ್ಕೆ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ. ಈ ಆದೇಶದಿಂದ ಆರ್.ಬಿ.ಐ ಮತ್ತು ಕೇಂದ್ರ / ರಾಜ್ಯ ಸರ್ಕಾರಗಳಿಂದ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚಿಸಲು ಹಾಗೂ ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ನೀಡುತ್ತದೆ.

ಡಾ. ಶಾಲಿನಿ ರಜನೀಶ್,
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!