‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಆಗ್ತೀನಿ ಎಂದ ಸಿಎಂ ಸಿದ್ದು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ದೀರ್ಘಾವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ಹೊಸ ತಿರುವು ನೀಡಿದೆ. ಈ ಹೇಳಿಕೆಯು ಕರ್ನಾಟಕ ಕಾಂಗ್ರೆಸ್‌ನ ಆಂತರಿಕ ರಾಜಕಾರಣದಲ್ಲಿ ಹೊಸ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.

ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಪೈಪೋಟಿ ದಿನಕ್ಕೊಂದು ಸ್ವರೂಪ, ತಂತ್ರಗಾರಿಕೆ, ಕ್ಷಣಕ್ಕೊಂದು ತಿರುವು ಪಡೆಯುತ್ತಲೇ ಇದೆ. ಹಳ್ಳಿಯಿಂದ ಹಿಡಿದು ದೆಹಲಿಯ ತನಕ ಪಟ್ಟದ ರಾಜಕಾರಣ ಜೋರಾಗಿ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ಮಂಡಿ ನೋವಿನಿಂದ ಓಡಾಡಲು ಅಸಾಧ್ಯವಾದರೂ ಕುಳಿತಲ್ಲೇ ಇರುವಂತಾಗಿದ್ದರೂ ಸಿಎಂ ಸಿದ್ದರಾಮಯ್ಯ ಉರುಳಿಸುತ್ತಿರುವ ದಾಳ ಅಸಾಧ್ಯವಾದ್ದು. ಸಿಎಂ ಸಿದ್ದರಾಮಯ್ಯ ಇದೀಗ ಮನಸ್ಸಿನ ಮಾತೊಂದನ್ನು ಬಿಚ್ಚಿಟ್ಟಿದ್ದು ಕಾಂಗ್ರೆಸ್​ನ ಆಂತರಿಕ ರಾಜಕಾರಣ ಅಷ್ಟು ಸುಲಭ ಇಲ್ಲ ಎಂಬುದನ್ನು ಬಿಂಬಿಸಿದೆ.

 

ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ, ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುವುದಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ‘ಲಾಂಗೆಸ್ಟ್ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ’ ಎಂಬ ದಾಖಲೆಯ ಖ್ಯಾತಿ ತಮಗೇ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಸುದೀರ್ಘ ಅವಧಿಗೆ ಸಿಎಂ ಆಗಿ ಸ್ಥಾನ ಅಲಂಕರಿಸಿದ್ದರು. ಬರೋಬ್ಬರಿ ಏಳು ವರ್ಷ ಏಳು ತಿಂಗಳ ಕಾಲ ದೇವರಾಜ ಅರಸು ಸಿಎಂ ಆಗಿ ಅಧಿಕಾರ ನಡೆಸಿದ್ದರು. ದೇವರಾಜ ಅರಸು ಬಳಿಕ ಐದು ವರ್ಷ ಪೂರ್ಣಾವಧಿ ಮುಗಿಸಿದ ಸಿಎಂ ಅಂದರೆ ಅದು ಸಿದ್ದರಾಮಯ್ಯ. ಇದೀಗ ದೇವರಾಜ ಅರಸು ಅವರ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆಯನ್ನು ಮುರಿಯುವುದಕ್ಕೆ ಸಿದ್ದರಾಮಯ್ಯ ಇನ್ನೂ ಕೆಲವು ತಿಂಗಳು ಅಧಿಕಾರದಲ್ಲಿ ಮುಂದುವರಿಯಲೇಬೇಕಿದೆ. ಡಿಸಂಬರ್ ವರೆಗೆ ಸಿದ್ದರಾಮಯ್ಯ ಅನಾಯಾಸವಾಗಿ ಅಧಿಕಾರದಲ್ಲಿ ಮುಂದುವರಿದರೆ ದೇವರಾಜ ಅರಸು ದಾಖಲೆ ಮುರಿದು ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿ ಸಿದ್ದರಾಮಯ್ಯಗೆ ಸಿಗಲಿದೆ. ಇದರ ಬಗ್ಗೆ ತನಗೆ ನಂಬಿಕೆ ಇದೆ ಎಂದಿರುವ ಸಿದ್ದರಾಮಯ್ಯ ಮಾತು ಹೊಸ ಕಿಚ್ಚು ಹಚ್ಚಿಸಿದೆ.

ಸಿದ್ದರಾಮಯ್ಯ ಹೀಗೆ ದಾಖಲೆಯ ಅವಧಿಯ ಬಗ್ಗೆ ಪ್ತಸ್ತಾಪ ಮಾಡುತ್ತಿದ್ದಂತೆಯೇ ಸಿದ್ದರಾಮಯ್ಯ ಆಪ್ತ ಸಚಿವರು ಹಿತೈಷಿಗಳು ಜೈ ಎಂದಿದ್ದಾರೆ.

 

ಸಿದ್ದರಾಮಯ್ಯ ಎರಡೂವರೆ ವರ್ಷದ ಬಳಿಕ ಸಿಎಂ ಸ್ಥಾನವನ್ನು ಡಿಕೆಶಿವಕುಮಾರ್ ಗೆ ಬಿಟ್ಟು ಕೊಡುತ್ತಾರೆ ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್​ನ ಆಂತರಿಕ ವಲಯದಲ್ಲಿ ಚರ್ಚೆಯಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಅಲ್ಲಗಳೆದಿರುವ ಡಾ. ಜಿ ಪರಮೇಶ್ವರ್, ಅಂತಹ ಯಾವುದೇ ಸೂತ್ರದ ಬಗ್ಗೆ ತಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಪೂರ್ಣ ಅವಧಿಗೆ ಸಿಎಂ ಆಗಿರಲಿ ಎಂದಿದ್ದಾರೆ‌. ಎಂಬಿ ಪಾಟೀಲ್, ಎಚ್​ಸಿ ಮಹದೇವಪ್ಪ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.

  • Related Posts

    ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

      ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

    ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

        ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು