ಅಭಿವೃದ್ಧಿ ಕಾಮಗಾರಿಗಳಿಗೆ 20 ಕೋಟಿ ರೂ. ಅನುದಾನ ಬಿಡುಗಡೆ; ಕ.ವ.ಪ್ರಾ. ಸಿಎಂ ಭರ್ಜರಿ ಗಿಫ್ಟ್.

ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ ನೀಡಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ನನ್ನ ಮೇಲೆ ನಂಬಿಕೆ ಇಟ್ಟು ನನ್ನನ್ನ ಪ್ರಾಧಿಕಾರದ ಅಧ್ಯಕ್ಷನಾಗಿ ಮಾಡಿ ಪ್ರಾಧಿಕಾರದ ಅಭಿವೃದ್ಧಿಗೆ 20 ಕೋಟಿಯನ್ನ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಧಿಕಾರದ ವತಿಯಿಂದ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದರು.

ಈ ಬಾರಿಯ ದಸರ ವಸ್ತು ಪ್ರದರ್ಶನ ಅತ್ಯಂತ ಯಶಸ್ವಿಯಾಯಿತು. ವರ್ಷದ 365 ದಿನಗಳ ಕಾಲ ವಸ್ತು ಪ್ರದರ್ಶನ ಏರ್ಪಾಡು ಮಾಡುವ ಉದ್ದೇಶ ನಾವು ಇಟ್ಟುಕೊಂಡು ಸಿಎಂ ಗಮನಕ್ಕೆ ಯೋಜನೆ ಬಗ್ಗೆ ಪ್ರಸ್ತಾವನೆ ಕೊಟ್ಟಿದ್ದವು. ಈಗ 20 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ವಸ್ತು ಪ್ರದರ್ಶನದ ಎ.ಬ್ಲಾಕ್ ನಲ್ಲಿ ಸುಮಾರು 10 ಕೋಟಿ ವೆಚ್ಚದಲ್ಲಿ ಬೇಲೂರು ಹಳೇಬೀಡು ಮಾದರಿಯ ಕಟ್ಟಡ ನಿರ್ಮಾಣ ಮಾಡುವ ಯೋಜನೆ ತಯಾರಿಸಿದ್ದೇವೆ. ಅಲ್ಲಿ ವಾಟರ್ ಪೌಂಟೇನ್ ಕೂಡ ಇರುತ್ತದೆ.
ಮಹಾ ಕುಂಭಮೇಳದಲ್ಲಿ ಡಾ ರಾಜ್ ಕುಮಾರ್, ಅಪ್ಪು ಮತ್ತು ಶಿವಣ್ಣ ಫೋಟೋಗೆ ಪುಣ್ಯಸ್ನಾನ ಮಾಡಿಸಿದ ಅಭಿಮಾನಿಗಳು
ಅಲ್ಲಿ ಈಗಾಗಲೇ 154 ಅಂಗಡಿ ಮಳಿಗೆಗಳು ಇವೆ. ನಮ್ಮ ಯೋಜನೆಗಳನ್ನ ಒಪ್ಪಿ ನಮಗೆ 20 ಕೋಟಿಯನ್ನ ಕೊಟ್ಟಿರುವುದಕ್ಕೆ ಮೈಸೂರಿನ ಜನತೆ ಪರವಾಗಿ ಸಿಎಂ ಸಿದ್ದರಾಮಯ್ಯರಿಗೆ ಧನ್ಯವಾದಗಳನ್ನ ಹೇಳುತ್ತೇನೆ. ಇಷ್ಟೇ ಅಲ್ಲದೆ ಬಳ್ಳಾರಿ, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗದಲ್ಲೂ ವಸ್ತು ಪ್ರದರ್ಶನ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ. ಅಲ್ಲಿನ ಸ್ಥಳೀಯ ಜಿಲ್ಲಾಡಳಿತದೊಂದಿಗೆ ಸಭೆ ಕರೆದು ಅಲ್ಲೂ ಕೂಡ ವಸ್ತು ಪ್ರದರ್ಶನ ಏರ್ಪಾಡು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಮುಂಬರುವ ದಸರಾ ವಸ್ತು ಪ್ರದರ್ಶನ ಒಳಗೆ ಕಾಮಗಾರಿ ಮುಗಿಸುವ ಪ್ಲಾನ್ ಇದೆ. ದಸರಾ ವಸ್ತು ಪ್ರದರ್ಶನದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುತ್ತದೆ ಎಂದು ತಿಳಿಸಿದರು.
ಡಾಲಿ ಧನಂಜಯ್ ಮದುವೆ ಸಮಾರಂಭ
ಡಾಲಿ ಧನಂಜಯ್ ಮದುವೆ ಸಮಾರಂಭಕ್ಕೆ ವಸ್ತು ಪ್ರದರ್ಶನ ಆವರಣಕ್ಕೆ ಬಾಡಿಗೆಯಾಗಿ 5.5 ಲಕ್ಷ ಹಣ ಕೊಟ್ಟಿದ್ದಾರೆ. ಈಗಾಗಲೇ ಶೇ 50% ಸೆಟ್ ಗಳನ್ನೆಲ್ಲ ತೆರವು ಮಾಡಿದ್ದಾರೆ. ಅದೆಲ್ಲ ಮುಗಿದ ಬಳಿಕ ಈವೆಂಟ್ ಮ್ಯಾನೇಜ್ ಮೆಂಟ್ ನವರು ಎಲ್ಲವನ್ನೂ ಸ್ವಚ್ಛ ಮಾಡಿಸಿಕೊಡುತ್ತಾರೆ. ಸದ್ಯಕ್ಕೆ ಯಾವುದೇ ರೀತಿಯ ಬಾಕಿಯನ್ನ ಉಳಿಸಿಕೊಂಡಿಲ್ಲ ಎಂದು ಅಯೂಬ್ ಖಾನ್ ಹೇಳಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು