ಮುಡಾ ಹಗರಣ : 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಖುಷಿ ಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ; ಈ ಭಾರಿ ಮೊತ್ತದ ಹಗರಣದ ತನಿಖೆಯನ್ನು ತಕ್ಷಣವೇ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.

ಶಾಸಕರು, ಸಿಎಂ ಪರಮಾಪ್ತರು ನಿನ್ನೆ ಪ್ರೆಸ್ ಮೀಟ್ ಮಾಡಿದ್ದಾರೆ. 92ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009- 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‍ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ಮಾಹಿತಿ ನೀಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!