ಕರ್ನಾಟಕ ಬುಲ್ಡೋಜರ್ಸ್ ತಂಡ ಸೇರಿಕೊಂಡ ಬಾಹುಬಲಿ!

ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ನೀಡುತ್ತಿರುವ ಕಾರಣ ಅರಮನೆ ನಗರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಅದರಲ್ಲೂ ಕಿಚ್ಚ ಸುದೀಪ್ (Kiccha Sudeep) ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಕೂಡ ನಿರೀಕ್ಷೆಯಂತೆ ಸೆಮಿಫೈನಲ್ ತಲುಪಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ಇದೀಗ ಟೂರ್ನಿಯ ಸೆಮಿಫೈನಲ್ ಪಂದ್ಯ ಮಾರ್ಚ್ 1 ರಂದು ನಡೆಯಲಿದೆ. ಈ ದಿನದಂದು ನಾಲ್ಕು ತಂಡಗಳು ಫೈನಲ್ಗೆ ಟಿಕೆಟ್ ಪಡೆಯಲು ಸೆಣಸಾಟ ನಡೆಸಲಿವೆ. ಮೊದಲ ಸೆಮಿಫೈನಲ್ನಲ್ಲಿ ಬೆಂಗಾಲ್ ಟೈಗರ್ಸ್ ಹಾಗೂ ಪಂಜಾಬ್ ದಿ ಶೇರ್ ಮುಖಾಮುಖಿಯಾದರೆ, ಎರಡನೇ ಸೆಮಿಫೈನಲ್ನಲ್ಲಿ ರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ಎದುರುಬದುರಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಕರ್ನಾಟಕ ತಂಡಕ್ಕೆ ಸಂತಸದ ಸುದ್ದಿಯೊಂದು ಸಿಕ್ಕಿದೆ.
ವಾಸ್ತವವಾಗಿ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಟೂರ್ನಿಯ ಲೀಗ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು 1 ಪಂದ್ಯದಲ್ಲಿ ಸೋಲು ಕಾಣಬೇಕಾಯಿತು. ಹೀಗಾಗಿ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ನಲ್ಲಿ ಮೂರನೇ ಸ್ಥಾನ ಪಡೆದಿರುವ ತಮಿಳ್ ರೈನೋಸ್ ತಂಡವನ್ನು ಎದುರಿಸಲಿದೆ.

ಕರ್ನಾಟಕ ತಂಡಕ್ಕೆ ಬಚ್ಚನ್ ಎಂಟ್ರಿ
ಇನ್ನು ತಂಡದ ಬ್ಯಾಟಿಂಗ್ ಬಗ್ಗೆ ಹೇಳುವುದಾದರೆ.. ಟೂರ್ನಿಯೂದ್ದಕ್ಕೂ ಕರ್ನಾಟಕ ತಂಡಕ್ಕೆ ಡಾರ್ಲಿಂಗ್ ಕೃಷ್ಣ ಹಾಗೂ ರಾಜೀವ್ ಹನು ತಂಡದ ಬ್ಯಾಟಿಂಗ್ ಜೀವಾಳವಾಗಿದ್ದರು. ಈ ಇಬ್ಬರನ್ನು ಬಿಟ್ಟರೆ ಕರಣ್ ಆರ್ಯನ್ ಮಾತ್ರ ಹೇಳಿಕೊಳ್ಳುವಂತಹ ಕೆಲವು ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಕರ್ನಾಟಕ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಕೊಂಚ ದುರ್ಬಲವಾಗಿದೆ ಎಂದು ತೊರುತ್ತಿತ್ತು. ಇದಕ್ಕೆ ಕಾರಣ ತಂಡದ ಆರಂಭಿಕ ಆಟಗಾರ ಪ್ರದೀಪ್ ಈ ಬಾರಿಯ ಸಿಸಿಎಲ್ನಿಂದ ಹಿಂದೆ ಸರಿದಿದ್ದು, ಪ್ರದೀಪ್ ಅಲಭ್ಯತೆ ತಂಡಕ್ಕೆ ಇದುವರೆಗೆ ಕಾಡಿಲ್ಲವಾದರೂ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಬೇಕಿತ್ತು. ಇದೀಗ ಅದಕ್ಕೆ ಪೂರಕವಾಗಿ ಕರ್ನಾಟಕ ತಂಡಕ್ಕೆ ಸ್ಫೋಟಕ ಬ್ಯಾಟರ್ನ ಆಗಮನವಾಗಿದೆ. ಹೊಡಿಬಡಿ ದಾಂಡಿಗ ಅರುಣ್ ಬಚ್ಚನ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಂಡಿರುವುದು ಕಿಚ್ಚನ ಪಡೆಯ ಆತ್ಮಸ್ಥೈರ್ಯವನ್ನು ಇನ್ನಷ್ಟು ಹೆಚ್ಚಿಸಿದೆ.
ಹನುಮಂತು ಡೈಲಾಗ್ ಗೆ ಫ್ಯಾನ್ಸ್ ಫುಲ್ ಫಿದಾ..!
ಸಿಸಿಎಲ್ನಲ್ಲಿ ಕರ್ನಾಟಕದ ಪ್ರದರ್ಶನ
ಇಲ್ಲಿಯವರೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನಲ್ಲಿ 10 ಆವೃತ್ತಿಗಳು ನಡೆದಿವೆ. ಈ 10 ಆವೃತ್ತಿಗಳಲ್ಲಿ ಅತ್ಯಂತ ಯಶಸ್ವಿ ತಂಡವೆಂದರೆ ತೆಲುಗು ವಾರಿಯರ್ಸ್. ಈ ತಂಡ ಇದುವರೆಗೆ 4 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವಿದೆ. ಇದುವರೆಗೆ ಈ ಲೀಗ್ನಲ್ಲಿ ಕರ್ನಾಟಕ 2 ಬಾರಿ ಚಾಂಪಿಯನ್ ಆಗಿದೆ. ಅಚ್ಚರಿಯ ಸಂಗತಿಯೆಂದರೆ ಇದುವರೆಗೆ ನಡೆದಿರುವ 10 ಆವೃತ್ತಿಗಳಲ್ಲಿ ಕರ್ನಾಟಕ ತಂಡ 7 ಬಾರಿ ಫೈನಲ್ಗೇರಿದೆ. ಆದರೆ 2 ಬಾರಿ ಮಾತ್ರ ಚಾಂಪಿಯನ್ ಕಿರೀಟ ತೊಟ್ಟಿದ್ದು, ಉಳಿದಂತೆ 5 ಬಾರಿ ರನ್ನರ್ ಅಪ್ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಕಳೆದ ಬಾರಿಯೂ ಕರ್ನಾಟಕ ಫೈನಲ್ ತಲುಪಿತ್ತು. ಆದರೆ ಫೈನಲ್ ಹಣಾಹಣಿಯಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಮುಗ್ಗರಿಸಿತ್ತು. ಇದೀಗ ಕರ್ನಾಟಕ ತಂಡ ಮತ್ತೊಮ್ಮೆ ಫೈನಲ್ಗೇರಿ ಟ್ರೊಫಿ ಎತ್ತಿಹಿಡಿಯಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!