ಡಾ.ಹೆಚ್.ಸಿ.ಮಹದೇವಪ್ಪ ಅವರಿಂದ ಬಿ-ಖಾತಾ ಅಭಿಯಾನಕ್ಕೆ ಚಾಲನೆ.

ಮೈಸೂರು : ಮಾ.1 (ಕರ್ನಾಟಕ ವಾರ್ತೆ) ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು, ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ನಿವೇಶನಗಳಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಬಿ-ಖಾತಾ ಪತ್ರವನ್ನು ಸಾಂಕೇತಿಕವಾಗಿ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಶನಿವಾರ ನಗರ ಪಾಲಿಕೆಯ ಸಭಾಂಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ಈ ಐತಿಹಾಸಿಕ ತೀರ್ಮಾನವನ್ನು ಕೈಗೊಂಡಿದ್ದು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಿಲ್ಲದೆ ನಿವೇಶನಗಳಲ್ಲಿ ವಾಸಿಸುತ್ತಿದ್ದ ಜನರ ಅನುಕೂಲಕ್ಕಾಗಿ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ ಎಂದು ತಿಳಿಸಿದರು.

ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಂಡು ಯಾವುದೇ ಲೋಪವಾಗದಂತೆ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧೀಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಮುಂತಾದವರು ಉಪಸ್ಥಿತಿದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು