ಸಿಸಿಎಲ್ ಫೈನಲ್ ನಲ್ಲಿ ರೋಚಕತೆಯ ತಿರುವು….

ಪಂಜಾಬ್ ದಿ ಶೇರ್ ತಂಡವು ಭಾನುವಾರ ನಡೆದ ಸಿಸಿಎಲ್ 2024ರ ಫೈನಲ್ ಪಂದ್ಯದಲ್ಲಿ ಚೆನ್ನೈ ರೈನೋಸ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಚೆನ್ನೈ ತಂಡ ರನ್ನರ್ ಅಪ್ ಆಯಿತು. ಕರ್ನಾಟಕ ಬುಲ್ಡೋಜರ್ ತಂಡ ಸೆಮಿಫೈನಲ್ನಲ್ಲಿ ಸೋತಿತು. ಈ ಟೂರ್ನಮೆಂಟ್ನಲ್ಲಿ ಕರ್ನಾಟಕದ ಡಾರ್ಲಿಂಗ್ ಕೃಷ್ಣ ಅವರು ಅತ್ಯುತ್ತಮ ಬ್ಯಾಟರ್ ಪ್ರಶಸ್ತಿಯನ್ನು ಪಡೆದರು.
ಕಳೆದ ಕೆಲ ವಾರಗಳಿಂದ ಹಲವು ಹಂತಗಳಲ್ಲಿ ಸಾಗುತ್ತಿದ್ದ ಸಿಸಿಎಲ್ನ ಫಿನಾಲೆ ಭಾನುವಾರ (ಮಾರ್ಚ್ 3) ನಡೆದಿದೆ. ಈ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಪಂಜಾಬ್ ದೆ ಶೇರ್ ಮುಖಾಮುಖಿ ಆದವು. ಈ ವೇಳೆ ಚೆನ್ನೈ ತಂಡ ಸೋತಿದ್ದು, ಪಂಜಾಬ್ ತಂಡ ಗೆಲುವಿನ ನಗೆ ಬೀರಿದೆ. ಈ ಮೂಲಕ ಮೊದಲ ಬಾರಿಗೆ ಕಪ್ಗೆ ಮುತ್ತಿಟ್ಟಿದೆ. ಕರ್ನಾಟಕ ಬುಲ್ಡೋಜರ್ ತಂಡ ಸೆಮಿ ಫೈನಲ್ ಹಂತದಲ್ಲೇ ಸೋಲನ್ನು ಕಂಡಿತ್ತು.

ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಿದ ಚೆನ್ನೈ 89 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತು. ನಂತರ ಬ್ಯಾಟ್ ಮಾಡಿದ ಪಂಜಾಬ್ 1 ವಿಕೆಟ್ ಕಳೆದುಕೊಂಡು 103 ರನ್ ಕಲೆ ಹಾಕಿತು. ಈ ಮೂಲಕ ಪಂಜಾಬ್ 14 ರನ್ಗಳ ಮುನ್ನಡೆ ಸಾಧಿಸಿತು. ನಂತರ ಬ್ಯಾಟ್ ಬೀಸಿದ ಚೆನ್ನೈ 85 ರನ್ ಗಳಿಸಲಷ್ಟೇ ಶಕ್ಯವಾಯಿತು.ಪಂಜಾಬ್ ತಂಡ 14 ರನ್ಗಳ ಮುನ್ನಡೆ ಸಾಧಿಸಿದ್ದರಿಂದ 72 ರನ್ಗಳನ್ನು ಬಾರಿಸಿದರೆ ಪಂಜಾಬ್ಗೆ ಗೆಲುವು ಸಿಗುತ್ತಿತ್ತು. ಇದನ್ನು ಕೇವಲ 8 ಓವರ್ಗಳಲ್ಲಿ ಚಚ್ಚಿ ಪಂಜಾಬ್ ಗೆಲುವಿನ ನಗೆ ಬೀರಿತು. ಈ ಮೂಲಕ 8 ವಿಕೆಟ್ಗಳ ಗೆಲುವು ಕಂಡಿತು. ಮೊದಲ ಬಾರಿಗೆ ಕಪ್ ಗೆದ್ದ ಖುಷಿಯನ್ನು ಪಂಜಾಬ್ ತಂಡ ಆಚರಿಸಿಕೊಂಡಿತು. ಚೆನ್ನೈ ರನ್ನರ್ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಂಡಿತು.
ಡಾರ್ಲಿಂಗ್ ಕೃಷ್ಣ ಅವರು ಈ ಬಾರಿ ಸಿಸಿಲ್ನಲ್ಲಿ ಕರ್ನಾಟಕ ಪರ ಅದ್ಭುತ ಪ್ರದರ್ಶನ ನೀಡಿದರು. ಅವರಿಗೆ ‘ಬ್ಯಾಟರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಸಿಕ್ಕಿದೆ. ಈ ಅವಾರ್ಡ್ ಪಡೆದು ಅವರು ಖುಷಿಪಟ್ಟಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು