ಶವ ಸಂಸ್ಕಾರಕ್ಕಾಗಿ ನದಿಯಲ್ಲಿ ಶವವನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!

ಚಾಮರಾಜನಗರ :- ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಸವಿತಾ ಸಮಾಜ ಜನಾಂಗದವರು ಶವ ಉಳಲು ಸ್ಮಶಾನಕ್ಕೆ ದಾರಿ ಇಲ್ಲದೆ ಸುವರ್ಣವತಿ ನದಿ ದಾಟ ಬೇಕಿದ್ದು ಸೇತುವೆ ಇಲ್ಲದೆ ನದಿಯಲ್ಲಿ ಇಳಿದು ಶವ ಸಾಗಿಸುವ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ಈ ವೇಳೆ ಮದ್ದೂರು ಗ್ರಾಮದ ಮುಖಂಡರಾದ ಪುರುಷೋತ್ತಮ್ ರವರು ಮಾತನಾಡಿ ಮದ್ದೂರು ಗ್ರಾಮದಲ್ಲಿ ಸವಿತಾ ಸಮಾಜದ ಮಹದೇವ ಶೆಟ್ಟಿ ಎಂಬುವವರು ನಿಧನರಾಗಿದ್ದು, ಮದ್ದೂರು ಗ್ರಾಮದಲ್ಲಿ ಶವ ಸಾಗಿಸಲು ದಾರಿ ಇಲ್ಲದೆ ಸುವರ್ಣವತಿ ನದಿಯ ನೀರಿನ ದಾರಿಯಲ್ಲಿ ಶವ ತೆಗೆದುಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ, ಮತ್ತು ಈ ಭಾಗದಲ್ಲಿ ಸುಮಾರು 100-150 ಎಕರೆ ಜಮೀನುಗಳಿಗೆ ಹೋಗಲು ಹಾಗೂ ವ್ಯವಸಾಯ ಮಾಡಲು ದಾರಿ ಇಲ್ಲದೆ ಪರದಾಡುವಂತಾಗಿದೆ.

ಈ ಬಗ್ಗೆ ಕ್ಷೇತ್ರದ ಶಾಸಕರಾದ ಎ. ಆರ್. ಕೃಷ್ಣಮೂರ್ತಿ ರವರು ಹಾಗೂ ಅಧಿಕಾರಿಗಳು ಇದನ್ನು ಪರಿಶೀಲಿಸಿ ಈ ಗ್ರಾಮದಲ್ಲಿ ತಕ್ಷಣ ಸೇತುವೆ ಆಗಬೇಕು, ಈ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆಯೂ ಸಹ ಎರಡು ಸವಗಳನ್ನು ಸಾಗಿಸಲು ಇದೇ ರೀತಿ ನದಿಯ ಮೂಲಕವೇ ಹೋಗಬೇಕಾಗಿತ್ತು, ಅದೇ ರೀತಿ ಈ ನದಿಯನ್ನು ದಾಟಿ ಜಮೀನುಗಳಿಗೆ ಹೋಗಿ ಕೃಷಿ ಚಟುವಟಿಕೆಯನ್ನು ನಡೆಸ ಬೇಕಾಗಿದೆ, ಹಾಗಾಗಿ ನದಿಗೆ ತಕ್ಷಣ ಒಂದು ಸೇತುವೆ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!