ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರಕ್ಕೆ ತೀವ್ರ ಕಟ್ಟೆಚ್ಚರ.

ಮೈಸೂರು :- ರಾಜ್ಯದ ವಿವಿಧೆಡೆ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಚ್ಚಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಇದು ವರೆಗೂ ಯಾವುದೇ ಪ್ರಕರಣ ವರದಿಯಾಗಿ ಲ್ಲದೇ ಇದ್ದರೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಹಕ್ಕಿಜ್ವರ ಹರ ಡುವಿಕೆ ತಡೆಗೆ ಸೂಕ್ತ ಕ್ರಮ ಕೈಗೊಂಡಿದೆ. ಪ್ರತಿ ವರ್ಷದಂತೆ ಕೇರಳದಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ ಪೋಸ್ಟ್‌ನಲ್ಲಿ ಕೋಳಿ ಸಾಗಾಣಿಕೆ ವಾಹನಗಳ ತಪಾ ಸಣೆ ನಡೆಸಲಾಗುತ್ತಿದೆ. ಈಗಾಗಲೇ ಪಶು ಸಂಗೋಪನಾ ಇಲಾಖೆ ಜಾಗೃತ ತಂಡ ರಚಿಸಿದ್ದು, ಕೋಳಿ ಸಾಕಣೆದಾರರಿಗೆ ಅರಿವು ಮೂಡಿಸುತ್ತಿದೆ. ಎಲ್ಲಾ ಕೋಳಿ ಸಾಕಣೆ ಕೇಂದ್ರಗಳು, ರೈತರ ಮನೆಗಳು, ಗ್ರಾಮಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ.


ಯಾವುದೇ ಪಕ್ಷಿ ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರು ವುದು ಗಮನಕ್ಕೆ ಬಂದರೆ ಪಶುಸಂಗೋ ಪನಾ ಇಲಾಖೆಯ ಗಮನಕ್ಕೆ ತರುವಂತೆ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸ ಸಂಸ್ಕ ರಣೆ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಜಾಗೃತರಾಗಿರುವಂತೆ ತಿಳಿಸಲಾಗುತ್ತಿದೆ. ಕೋಳಿ ಸಾಗಣೆ ಮಾಡುವ
ವಾಹನಗಳಿಗೆ ಔಷಧಿ ಸಿಂಪಡಿಸಿ ಶುಚಿಗೊಳಿಸಲು ಸೂಚನೆ ನೀಡಲಾಗಿದೆ.
ರೋಗದ ಲಕ್ಷಣಗಳು: ಮನುಷ್ಯರಲ್ಲಿ ಸಾಮಾನ್ಯ ಜ್ವರದ ಲಕ್ಷಣ ಕಾಣಿಸಿಕೊಳ್ಳುತ್ತವೆ. ತೀವ್ರ ಜ್ವರ, ಭೇದಿ, ಹೊಟ್ಟೆನೋವು, ಮೂಗು, ವಸಡಿನಲ್ಲಿ ರಕ್ತ ಸ್ರಾವ, ಚಳಿಯ ಅನುಭವ, ತಲೆ ನೋವು, ಮೈ-ಕೈ ನೋವು, ಕೆಮ್ಮು, ಉಸಿರಾಟ ತೊಂದರೆ, ಗಂಟಲು ನೋವು, ಕೆಂಗಣ್ಣು ಬಾಧಿಸುತ್ತದೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು.
ಕೋಳಿಗಳಲ್ಲಿ ಸೋಂಕಿನ ಲಕ್ಷಣಗಳು ತಕ್ಷಣಕ್ಕೆ ಕಾಣಿಸಿಕೊಳ್ಳುವುದಿಲ್ಲ. ಅವು ಬಹು ಬೇಗ ಹರಡುವುದರಿಂದ ರೋಗ ಪತ್ತೆ ಕಷ್ಟ ಸಾಮಾನ್ಯವಾಗಿ ಸೋಂಕಿತ ಕೋಳಿಗಳು ಆಹಾರ ತಿನ್ನುವುದಿಲ್ಲ. ಮೊಟ್ಟೆ ಉತ್ಪಾದನೆ ಕಡಿಮೆಯಾಗುತ್ತದೆ. ಹೆಚ್ಚು ಓಡಾಡು ವುದಿಲ್ಲ. ಕಣ್ಣುಗಳು ತೇವಗೊಂಡಿರುತ್ತವೆ. ರೆಕ್ಕೆಗಳು ಕೆದರಿರುತ್ತವೆ. ತಲೆ ಭಾಗ ಊದಿ ಕೊಳ್ಳುತ್ತದೆ. ಕಾಲಿನ ಚರ್ಮದ ಅಡಿಯಲ್ಲಿ ರಕ್ತಸ್ರಾವವೂ ಕಾಣಿಸಿಕೊಳ್ಳಬಹುದು. ದಿಢೀರ್ ಸಾವು ಸಂಭವಿಸುತ್ತದೆ.


ಹಕ್ಕಿ ಜ್ವರ ಹೇಗೆ ಹರಡುತ್ತದೆ: ಹಕ್ಕಿ ಜ್ವರದ ವೈರಸ್ ಪಕ್ಷಿಗಳಿಂದ ಪಕ್ಷಿಗಳಿಗೆ ಹರಡುತ್ತದೆ. ಪಕ್ಷಿಗಳು ವಲಸೆ ಹೋದಾಗ, ಗುಂಪಿನಲ್ಲಿ ಸೋಂಕಿತ ಪಕ್ಷಿ ಇದ್ದರೆ ಹೋದ ಸ್ಥಳದಲ್ಲಿರುವ ಎಲ್ಲಾ ಪಕ್ಷಿಗಳಿಗೂ ಸುಲಭವಾಗಿ ಹರಡುತ್ತದೆ. ಸೋಂಕಿತ ಕೋಳಿ ಅಥವಾ ಪಕ್ಷಿಗಳೊಂದಿಗೆ ನೇರ ಸಂಪರ್ಕಕ್ಕೆ ಬಂದ ಜನರು ಮತ್ತು ಪ್ರಾಣಿಗಳಿಗೂ ಸೋಂಕು ಹರಡುವ ಸಾಧ್ಯತೆ ಇದೆ. ಈ ವೈರಸ್ ತೇವ ಅಥವಾ ಒಣಗಿದ ಗೊಬ್ಬರದಲ್ಲಿ 8 ವಾರಗಳ ವರೆಗೂ ಜೀವಿಸುವ ಸಾಮರ್ಥ್ಯ ಹೊಂದಿದೆ. ಸೋಂಕಿತ ಪಕ್ಷಿ, ಪ್ರಾಣಿಗಳ ನೇರ ಸಂಪರ್ಕಕ್ಕೆ ಬಂದರೆ, ಕೈಯನ್ನು ಸಾಬೂನಿ ನಿಂದ ತೊಳೆದು ಸ್ವಚ್ಛಗೊಳಿಸುವುದರ ಮೂಲಕ ಈ ವೈರಸ್ ಮನುಷ್ಯನಿಗೆ ಹರಡುವುದನ್ನು ತಡೆಯಬಹುದು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!