ಇದೀಗ ಹೋಳಿಗೆ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.

ಆಹಾರ ಇಲಾಖೆಯ ತನಿಖೆಯಿಂದ ಈ ವಿಷಯ ಹೊರ ಬಿದ್ದಿದ್ದು, ಹೋಳಿಗೆ ಪ್ರಿಯರು ಹೆಚ್ಚಿನ ಗಮನ ವಹಿಸಬೇಕಾಗಿದೆ. ಅಂಗಡಿಯಲ್ಲಿ ತಯಾರಾಗೋ ಬಿಸಿ ಬಿಸಿ ಹೋಳಿಗೆ ಕೂಡ ಗ್ರಾಹಕರಿಗೆ ಗಂಡಾಂತರ ತಂದೊಡ್ಡಿದೆ. ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ. ಇಡ್ಲಿ, ಗೋಬಿ, ಕಲ್ಲಂಗಡಿ ಸೇರಿದಂತೆ ಅನೇಕ ಆಹಾರಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದು, ಕೆಲವೊಂದು ಆಹಾರ ಪದಾರ್ಥಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ.

ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟು, ರೆಡಿಮೆಡ್ ಹೋಳಿಗೆ ತಯಾರು ಮಾಡುವವರಿಗೆ ಬಿಸಿ ಮುಟ್ಟಿಸಿದೆ. ರಾಜ್ಯದಾದ್ಯಂತ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು ,ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡಿರೋ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಬಿಸಿ ಬಿಸಿ ಹೋಳಿಗೆಯನ್ನು ತಯಾರಿಸಿ ಬಳಿಕ ಅದನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಲಾಗುತ್ತೆ.
ಹೀಗೆ ಮಾಡುವುದರಿಂದ ಪ್ಲಾಸ್ಟಿಕ್ಗೆ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ಗೆ ಕಾರಣ ಆಗಬಹುದು. ಹೀಗಾಗಿ ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರೋ ಸಾಧ್ಯತೆ ಇದೆ ಎಂಬ ತೀಕ್ಷ್ಣವಾದ ವಿಚಾರವನ್ನು ತಿಳಿಸಿದೆ. ಇದರಿಂದ ಹೋಳಿಗೆ ತಯಾರಿಸುವಾಗ ಪ್ಲಾಸ್ಟಿಕ್ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ.
ಇದರಿಂದ ಹೋಳಿಗೆ ಪ್ರಿಯರಿಗೆ ಸ್ವಲ್ಪ ಕಷ್ಟವಾದರೂ, ಅಂಗಡಿಗಳಲ್ಲಿ ಸಿಗುವ ಹೋಳಿಗೆಯನ್ನು ನಿಯಂತ್ರಿಸಬೇಕಾಗುತ್ತದೆ. ಅಥವಾ ಶುದ್ಧ ಹಾಗೂ ಒಳ್ಳೆಯ ರೀತಿಯಲ್ಲಿ ತಯಾರಿಸಿದ ಹೋಳಿಗೆಯನ್ನು ಸವಿಯಬೇಕಾಗುತ್ತದೆ. ಇಲ್ಲವಾದರೆ ಬೇಡದ ವಸ್ತುಗಳನ್ನು ಸೇರಿಸಿ ಆರೋಗ್ಯವನ್ನು ಕೆಡಿಸಿಕೊಂಡು ಕ್ಯಾನ್ಸರ್ ಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆಹಾರ ಇಲಾಖೆಯ ವರದಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!