ಬಜೆಟ್ 2025 ಕನ್ನಡ ಚಿತ್ರರಂಗ ಕ್ಷೇತ್ರಕ್ಕೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ.

ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಹಲವು ಕ್ಷೇತ್ರಗಳು ಹಲವು ಯೋಜನೆಗಳು, ಅನುದಾನಗಳನ್ನು ನೀಡಿದರು. ಅದರಂತೆ ಕನ್ನಡ ಚಿತ್ರರಂಗಕ್ಕೂ ಸಹ ಕೆಲ ಅನುದಾನಗಳನ್ನು ನೀಡಿದ್ದಾರೆ. ಈ ಬಜೆಟ್ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಮೈಸೂರಿನಲ್ಲಿ ಫಿಲಂ ಸಿಟಿ
ಕನ್ನಡ ಚಿತ್ರರಂಗದ ದಶಕಗಳ ಬೇಡಿಕೆಯಾದ ಫಿಲಂ ಸಿಟಿ ನಿರ್ಮಾಣಕ್ಕೆ 500 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫಿಲಂ ಸಿಟಿ ನಿರ್ಮಾಣಕ್ಕೆ ಮೈಸೂರಿನಲ್ಲಿ 150 ಎಕರೆ ಜಾಗವನ್ನು ಕಾಯ್ದಿರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಕನ್ನಡ ಸಿನಿಮಾಗಳಿಗೆ OTT ವೇದಿಕೆ
ಕನ್ನಡ ಸಿನಿಮಾಗಳನ್ನು ಯಾವ ಒಟಿಟಿಗಳೂ ಖರೀದಿಸುತ್ತಿಲ್ಲ ಎಂಬ ದೂರು ಕಳೆದ ಕೆಲ ವರ್ಷಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ಈಗ ಸರ್ಕಾರವೇ ಮುಂದಾಗಿ ಒಟಿಟಿ ವೇದಿಕೆ ಸೃಷ್ಟಿಸಲು ಮುಂದಾಗಿದ್ದು, ಇಲ್ಲಿ ಕನ್ನಡ ಸಿನಿಮಾಗಳನ್ನು ಪ್ರದರ್ಶನ ಮಾಡಲಿದೆ. ಕೇರಳದಲ್ಲಿ ಈಗಾಗಲೇ ಈ ಮಾದರಿ ಚಾಲ್ತಿಯಲ್ಲಿದೆ.

ಸಿನಿಮಾ ಕ್ಷೇತ್ರ ಕೈಗಾರಿಕಾ ನೀತಿ ಅಡಿ ತರಲು ನಿರ್ಧಾರ
ಸಿನಿಮಾ ಉದ್ಯಮವನ್ನು ಸಿನಿಮಾ ಕೈಗಾರಿಕೆ ಎಂದು ಘೋಷಿಸಲಾಗಿದೆ. ಸಿನಿಮಾ ರಂಗವನ್ನು ಕೈಗಾರಿಕೆಯನ್ನಾಗಿ ಗುರುತಿಸುವ ಮೂಲಕ ಕೈಗಾರಿಕಾ ನೀತಿಯ ಅಡಿ ಸರ್ಕಾರ ನೀಡುವ ಸವಲತ್ತುಗಳು, ನಿಯಮಗಳು ಸಿನಿಮಾ ರಂಗಕ್ಕೂ ಅನ್ವಯ ಆಗಲಿದೆ.


ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರ
ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ಗಳು ಬಹಳ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿವೆ. ಮಲ್ಟಿಪ್ಲೆಕ್ಸ್ಗಳು ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವುದರ ವಿರುದ್ಧ ಕ್ರಮಕ್ಕೆ ಬಹಳ ದಿನಗಳಿಂದಲೂ ಒತ್ತಾಯ ಕೇಳಿ ಬಂದಿತ್ತು. ಇದೀಗ ಸರ್ಕಾರವು, ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರವನ್ನು 200 ರೂಪಾಯಿಗೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಚಲನಚಿತ್ರ ಅಕಾಡೆಮಿ ಅಭಿವೃದ್ಧಿ
ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ಚಲನಚಿತ್ರ ಅಕಾಡೆಮಿಯನ್ನು ಅಭಿವೃದ್ಧಿಪಡಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಖಾಸಗಿ ಸಹಭಾಗಿತ್ವದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಭಿವೃದ್ಧಿ ಮಾಡಲಾಗುತ್ತದೆಯಂತೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!